100 days of Modi 3.0: 60 ವರ್ಷಗಳ ನಂತರ ಮೊದಲ ಬಾರಿಗೆ ದೇಶದಲ್ಲಿ ರಾಜಕೀಯ ಸ್ಥಿರತೆ ಕಾಣುತ್ತಿದ್ದೇವೆ: ಅಮಿತ್ ಶಾ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿಯು ಮಿತ್ರ ಪಕ್ಷಗಳ ಸಹಕಾರದಿಂದ ಮೂರನೇ ಅವಧಿಗೆ ಸರ್ಕಾರವನ್ನು ರಚಿಸಿ ಇದೀಗ 100 ದಿನಗಳು ಕಳೆದಿವೆ. ಈ ಹಿನ್ನೆಲೆಯಲ್ಲಿ ಈ 100 ದಿನಗಳಲ್ಲಿ ಸರ್ಕಾರವು ಏನೇನು ಜನಪರ ಕೆಲಸ ಮಾಡಿದೆ ಎನ್ನುವ ಕುರಿತು ಗೃಹ ಸಚಿವ ಅಮಿತ್ ಶಾ ಇಂದು ಪತ್ರಿಕಾಗೋಷ್ಠಿ ನಡೆಸಿದರು.

100 days of Modi 3.0: 60 ವರ್ಷಗಳ ನಂತರ ಮೊದಲ ಬಾರಿಗೆ ದೇಶದಲ್ಲಿ ರಾಜಕೀಯ ಸ್ಥಿರತೆ ಕಾಣುತ್ತಿದ್ದೇವೆ: ಅಮಿತ್ ಶಾ
ಅಮಿತ್ ಶಾImage Credit source: PTI
Follow us
|

Updated on: Sep 17, 2024 | 11:03 AM

ಅರವತ್ತು ವರ್ಷಗಳ ಬಳಿಕ ದೇಶದಲ್ಲಿ ರಾಜಕೀಯ ಸ್ಥಿರತೆಯನ್ನು ಕಾಣುತ್ತಿದ್ದೇವೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿಯ ಸರ್ಕಾರವು 100 ದಿನಗಳ ಪೂರೈಸಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಪತ್ರಿಕಾಗೋಷ್ಠಿ ಕರೆದಿದ್ದರು.

60 ವರ್ಷಗಳ ನಂತರ ಮೊದಲ ಬಾರಿಗೆ ದೇಶದಲ್ಲಿ ರಾಜಕೀಯ ಸ್ಥಿರತೆಯ ವಾತಾವರಣವಿದೆ, 10 ವರ್ಷಗಳ ಕಾಲ ನೀತಿಗಳ ದಿಕ್ಕು, ನೀತಿಗಳ ವೇಗ ಮತ್ತು ನೀತಿಗಳ ಅನುಷ್ಠಾನದ ನಿಖರತೆಯನ್ನು ಕಾಪಾಡಿಕೊಳ್ಳುವ ಮೂಲಕ 11 ನೇ ವರ್ಷಕ್ಕೆ ಪ್ರವೇಶಿಸುವುದು ತುಂಬಾ ಕಷ್ಟಕರವಾಗಿತ್ತು ಎಂದರು.

ಭಾರತದ ಅಭಿವೃದ್ಧಿ, ರಾಷ್ಟ್ರೀಯ ಭದ್ರತೆ ಮತ್ತು ಬಡವರ ಕಲ್ಯಾಣಕ್ಕಾಗಿ ಸತತ 10 ವರ್ಷಗಳನ್ನು ಮೀಸಲಿಟ್ಟ ನಂತರ ಬಿಜೆಪಿ ಮತ್ತು ನಮ್ಮ ಮಿತ್ರಪಕ್ಷಗಳು ಈ ಸಾರ್ವತ್ರಿಕ ಚುನಾವಣೆಯಲ್ಲಿ ಮೂರನೇ ಬಾರಿಗೆ ಸರ್ಕಾರ ರಚಿಸುವ ಜನಾದೇಶವನ್ನು ಪಡೆದಿವೆ.

ಮತ್ತಷ್ಟು ಓದಿ: 100 days of Modi 3.0: 100 ದಿನಗಳಲ್ಲಿ ಪ್ರಗತಿಯ ಬಾಗಿಲು ತೆರೆದು ವಿಶ್ವಕ್ಕೆ ಭಾರತದ ಶಕ್ತಿ ತೋರಿಸಿದ ಮೋದಿ ಸರ್ಕಾರ

ಈ ಐತಿಹಾಸಿಕ ನಿರ್ಧಾರವು ನಮ್ಮ ನಾಯಕನನ್ನು 60 ವರ್ಷಗಳಲ್ಲಿ ಮೂರು ಬಾರಿ ದೇಶವನ್ನು ಆಳಿದ ಮೊದಲ ನಾಯಕನನ್ನಾಗಿ ಮಾಡಿದೆ ಎಂದು ಹೇಳಿದರು. ಕಳೆದ 10 ವರ್ಷಗಳಲ್ಲಿ ನರೇಂದ್ರ ಮೋದಿ ಅವರ ಸರ್ಕಾರವು ಭಾರತದ ಬಾಹ್ಯ ಭದ್ರತೆ, ಆಂತರಿಕ ಭದ್ರತೆ ಮತ್ತು ರಕ್ಷಣಾ ವ್ಯವಸ್ಥೆಗಳನ್ನು ಬಲಪಡಿಸುವಲ್ಲಿ ಮಹತ್ತರವಾದ ಯಶಸ್ಸನ್ನು ಸಾಧಿಸಿದೆ.

ಈಗ ಭಾರತ ಸುರಕ್ಷಿತ ರಾಷ್ಟ್ರವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದೇವೆ. ಮೇಕ್ ಇನ್ ಇಂಡಿಯಾವನ್ನು ಪ್ರಾರಂಭಿಸಿದಾಗ, ಅನೇಕ ಜನರು ಅದನ್ನು ಗೇಲಿ ಮಾಡಿದರು, ಆದರೆ ಇಂದು ನಾನು ಹೆಮ್ಮೆಯಿಂದ ಹೇಳುತ್ತೇನೆ, ಭಾರತವು ವಿಶ್ವದ ಅತ್ಯಂತ ಆದ್ಯತೆಯ ಉತ್ಪಾದನಾ ಕೇಂದ್ರವಾಗಿದೆ.

ಈ 100 ದಿನಗಳಲ್ಲಿ ಸುಮಾರು 15 ಲಕ್ಷ ಕೋಟಿ ರೂ.ಗಳ ಯೋಜನೆಗಳನ್ನು ಆರಂಭಿಸಲಾಗಿದೆ. ನಾವು 100 ದಿನಗಳನ್ನು 14 ಸ್ತಂಭಗಳೆಂದು ವಿಂಗಡಿಸಿದ್ದೇವೆ.

100 ದಿನಗಳಲ್ಲಿ 3 ಲಕ್ಷ ಕೋಟಿ ರೂ.ಗಳ ಯೋಜನೆಗಳನ್ನು ಘೋಷಿಸಿ ಕಾಮಗಾರಿ ಆರಂಭಿಸಿದ್ದೇವೆ. ಮಹಾರಾಷ್ಟ್ರದ ವಾಧ್ವಾನ್‌ನಲ್ಲಿ 76 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಬೃಹತ್ ಬಂದರು ನಿರ್ಮಾಣವಾಗಲಿದ್ದು, ಮೊದಲ ದಿನವೇ ವಿಶ್ವದ ಪ್ರಮುಖ 10 ಬಂದರುಗಳ ಪಟ್ಟಿಗೆ ಸೇರ್ಪಡೆಯಾಗಲಿದೆ.

ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಅಮೃತ್ ಕಾಲ್ ಪ್ರಾರಂಭವಾದಾಗ, 140 ಕೋಟಿ ಜನರು ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕೆಂಬ ಮಹಾನ್ ಸಂಕಲ್ಪದಲ್ಲಿ ಮತ್ತು ಅದರ ಅಭಿವೃದ್ಧಿ ಪಯಣದಲ್ಲಿ ಭಾಗಿಗಳಾಗಿದ್ದರು. 140 ಕೋಟಿ ಜನರನ್ನು ಇಷ್ಟು ದೊಡ್ಡ ದೃಷ್ಟಿಕೋನದಿಂದ ಸಂಪರ್ಕಿಸುವುದು ದೇಶವು ಪ್ರಧಾನಿಯ ಮೇಲೆ ಎಷ್ಟು ನಂಬಿಕೆ ಇಟ್ಟಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!