AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಗರದ ಹರಿ ಪರ್ಬತ್​​ನಲ್ಲಿ ಇಂದು 100 ಅಡಿ ಎತ್ತರ ತ್ರಿವರ್ಣ ಧ್ವಜ ಅನಾವರಣ..

ಇನ್ನೇನು ಕೆಲವೇ ದಿನಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಇದ್ದು, ಅದರ ಹಿನ್ನೆಲೆಯಲ್ಲಿ ಇಂದು ಶ್ರೀನಗರದ ಐತಿಹಾಸಿಕ ಕೋಟೆ ಹರಿಪರ್ಬತ್​​ನಲ್ಲಿ ಜಮ್ಮು-ಕಾಶ್ಮೀರ ಸರ್ಕಾರ 100 ಅಡಿ ಎತ್ತರದ ರಾಷ್ಟ್ರಧ್ವಜ ಹಾರಿಸಿದೆ.

ಶ್ರೀನಗರದ ಹರಿ ಪರ್ಬತ್​​ನಲ್ಲಿ ಇಂದು 100 ಅಡಿ ಎತ್ತರ ತ್ರಿವರ್ಣ ಧ್ವಜ ಅನಾವರಣ..
ಹರಿ ಪರ್ಬತ್​ ಕೋಟೆ
TV9 Web
| Edited By: |

Updated on:Aug 10, 2021 | 10:35 AM

Share

ಶ್ರೀನಗರದ ಐತಿಹಾಸಿಕ ಕೋಟೆ ಹರಿ ಪರ್ಬತ್​​ನಲ್ಲಿ ಇಂದು ಜಮ್ಮು-ಕಾಶ್ಮೀರ ಸರ್ಕಾರ 100 ಅಡಿ ಎತ್ತರದ ತ್ರಿವರ್ಣ ಧ್ವಜ (ರಾಷ್ಟ್ರಧ್ವಜ)ವನ್ನು ಅನಾವರಣಗೊಳಿಸಿದೆ. ಕಾಶ್ಮೀರದಲ್ಲೇ ಅತ್ಯಂತ ಎತ್ತರದ ರಾಷ್ಟ್ರಧ್ವಜ ಇದಾಗಿದ್ದು, ಇದನ್ನು ಹಾರಿಸುವ ಸಂಬಂಧ ಫೆಬ್ರವರಿ 7ರಂದು ಅಡಿಗಲ್ಲು ಸ್ಥಾಪನೆಯಾಗಿತ್ತು. ಈ 100 ಅಡಿ ಎತ್ತರದ ರಾಷ್ಟ್ರಧ್ವಜವನ್ನು, ಭಾರತೀಯ ಸೇನೆ, ಸೋಲಾರ್​ ಇಂಡಸ್ಟ್ರೀಸ್​ ಇಂಡಿಯಾ ಲಿಮಿಟೆಡ್​ ಪ್ರಾಯೋಜಕತ್ವದಲ್ಲಿ ಸ್ಥಾಪಿಸಿದೆ. ಕಾಶ್ಮೀರದ ಈ ಐತಿಹಾಸಿಕ ಕೋಟೆ ಮೇಲೆ ಅನಾವರಣಗೊಳಿಸಲು ಭಾರತದ ಪುರಾತತ್ವ ಇಲಾಖೆ ಅನುಮತಿಯನ್ನೂ ನೀಡಿದೆ.

ಈ ಧ್ವಜ 24 x36 ಅಳತೆಯಲ್ಲಿದ್ದು, ಹರಿ ಪರ್ಬತ್​​ನ ತುತ್ತತುದಿಯಲ್ಲಿ ಹಾರಾಡಲಿದೆ. ಈ ಕೋಟೆ ಇನ್ನೂ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ನಿಯಂತ್ರಣದಲ್ಲೇ ಇದೆ. ಹಾಗಾಗಿ ಇಲ್ಲಿ ರಾಷ್ಟ್ರಧ್ವಜ ಹಾರಿಸಲು ಇಲಾಖೆಯ ಅನುಮತಿ ಕಡ್ಡಾಯವಾಗಿತ್ತು. ಪುರಾತತ್ವ ಇಲಾಖೆ ಕೂಡ ಅವಕಾಶ ಮಾಡಿಕೊಟ್ಟಿದೆ.

ಶ್ರೀನಗರದ ಕೊಹ್-ಇ-ಮಾರನ್ ಬೆಟ್ಟದ ಮೇಲೆ ಈ ಹರಿ ಪರ್ಬತ್​ ಕೋಟೆಯಿದೆ. ಅಲ್ಲಿ ಭೇಟಿ ನೀಡಲು ಸ್ಥಳೀಯ ಆಡಳಿತ ಅನುಮತಿ ಬೇಕು ಹಾಗೂ ಭದ್ರತೆಗಾಗಿ ಸಿಆರ್​ಪಿಎಫ್​ ಯೋಧರನ್ನು ನಿಯೋಜಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ಈ ಹಿಂದೆ ಇಲ್ಲಿ ಕೆಲವು ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಿತ್ತು.

ಇದನ್ನೂ ಓದಿ: ಪ್ರಾಚೀನ ವಸ್ತುಗಳೆಂದು ನಂಬಿಸಿ ವಂಚಿಸಲು ಯತ್ನಿಸ್ತಿದ್ದ ಐವರು ಆರೋಪಿಗಳು ಅರೆಸ್ಟ್, ಮೂವರು ಪರಾರಿ

ಜೆಪಿ ನಗರದಲ್ಲಿ ಅಪಾರ ಪ್ರಮಾಣದ ಆನೆ ದಂತ, ವನ್ಯ ಜೀವಿಗಳ ಚರ್ಮ, ಮೂಳೆ ವಶ ಆರೋಪಿ ಬಂಧನ- ಚಿತ್ರಗಳಿವೆ

Published On - 9:45 am, Tue, 10 August 21

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ