AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಗರದ ಹರಿ ಪರ್ಬತ್​​ನಲ್ಲಿ ಇಂದು 100 ಅಡಿ ಎತ್ತರ ತ್ರಿವರ್ಣ ಧ್ವಜ ಅನಾವರಣ..

ಇನ್ನೇನು ಕೆಲವೇ ದಿನಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಇದ್ದು, ಅದರ ಹಿನ್ನೆಲೆಯಲ್ಲಿ ಇಂದು ಶ್ರೀನಗರದ ಐತಿಹಾಸಿಕ ಕೋಟೆ ಹರಿಪರ್ಬತ್​​ನಲ್ಲಿ ಜಮ್ಮು-ಕಾಶ್ಮೀರ ಸರ್ಕಾರ 100 ಅಡಿ ಎತ್ತರದ ರಾಷ್ಟ್ರಧ್ವಜ ಹಾರಿಸಿದೆ.

ಶ್ರೀನಗರದ ಹರಿ ಪರ್ಬತ್​​ನಲ್ಲಿ ಇಂದು 100 ಅಡಿ ಎತ್ತರ ತ್ರಿವರ್ಣ ಧ್ವಜ ಅನಾವರಣ..
ಹರಿ ಪರ್ಬತ್​ ಕೋಟೆ
Follow us
TV9 Web
| Updated By: Lakshmi Hegde

Updated on:Aug 10, 2021 | 10:35 AM

ಶ್ರೀನಗರದ ಐತಿಹಾಸಿಕ ಕೋಟೆ ಹರಿ ಪರ್ಬತ್​​ನಲ್ಲಿ ಇಂದು ಜಮ್ಮು-ಕಾಶ್ಮೀರ ಸರ್ಕಾರ 100 ಅಡಿ ಎತ್ತರದ ತ್ರಿವರ್ಣ ಧ್ವಜ (ರಾಷ್ಟ್ರಧ್ವಜ)ವನ್ನು ಅನಾವರಣಗೊಳಿಸಿದೆ. ಕಾಶ್ಮೀರದಲ್ಲೇ ಅತ್ಯಂತ ಎತ್ತರದ ರಾಷ್ಟ್ರಧ್ವಜ ಇದಾಗಿದ್ದು, ಇದನ್ನು ಹಾರಿಸುವ ಸಂಬಂಧ ಫೆಬ್ರವರಿ 7ರಂದು ಅಡಿಗಲ್ಲು ಸ್ಥಾಪನೆಯಾಗಿತ್ತು. ಈ 100 ಅಡಿ ಎತ್ತರದ ರಾಷ್ಟ್ರಧ್ವಜವನ್ನು, ಭಾರತೀಯ ಸೇನೆ, ಸೋಲಾರ್​ ಇಂಡಸ್ಟ್ರೀಸ್​ ಇಂಡಿಯಾ ಲಿಮಿಟೆಡ್​ ಪ್ರಾಯೋಜಕತ್ವದಲ್ಲಿ ಸ್ಥಾಪಿಸಿದೆ. ಕಾಶ್ಮೀರದ ಈ ಐತಿಹಾಸಿಕ ಕೋಟೆ ಮೇಲೆ ಅನಾವರಣಗೊಳಿಸಲು ಭಾರತದ ಪುರಾತತ್ವ ಇಲಾಖೆ ಅನುಮತಿಯನ್ನೂ ನೀಡಿದೆ.

ಈ ಧ್ವಜ 24 x36 ಅಳತೆಯಲ್ಲಿದ್ದು, ಹರಿ ಪರ್ಬತ್​​ನ ತುತ್ತತುದಿಯಲ್ಲಿ ಹಾರಾಡಲಿದೆ. ಈ ಕೋಟೆ ಇನ್ನೂ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ನಿಯಂತ್ರಣದಲ್ಲೇ ಇದೆ. ಹಾಗಾಗಿ ಇಲ್ಲಿ ರಾಷ್ಟ್ರಧ್ವಜ ಹಾರಿಸಲು ಇಲಾಖೆಯ ಅನುಮತಿ ಕಡ್ಡಾಯವಾಗಿತ್ತು. ಪುರಾತತ್ವ ಇಲಾಖೆ ಕೂಡ ಅವಕಾಶ ಮಾಡಿಕೊಟ್ಟಿದೆ.

ಶ್ರೀನಗರದ ಕೊಹ್-ಇ-ಮಾರನ್ ಬೆಟ್ಟದ ಮೇಲೆ ಈ ಹರಿ ಪರ್ಬತ್​ ಕೋಟೆಯಿದೆ. ಅಲ್ಲಿ ಭೇಟಿ ನೀಡಲು ಸ್ಥಳೀಯ ಆಡಳಿತ ಅನುಮತಿ ಬೇಕು ಹಾಗೂ ಭದ್ರತೆಗಾಗಿ ಸಿಆರ್​ಪಿಎಫ್​ ಯೋಧರನ್ನು ನಿಯೋಜಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ಈ ಹಿಂದೆ ಇಲ್ಲಿ ಕೆಲವು ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಿತ್ತು.

ಇದನ್ನೂ ಓದಿ: ಪ್ರಾಚೀನ ವಸ್ತುಗಳೆಂದು ನಂಬಿಸಿ ವಂಚಿಸಲು ಯತ್ನಿಸ್ತಿದ್ದ ಐವರು ಆರೋಪಿಗಳು ಅರೆಸ್ಟ್, ಮೂವರು ಪರಾರಿ

ಜೆಪಿ ನಗರದಲ್ಲಿ ಅಪಾರ ಪ್ರಮಾಣದ ಆನೆ ದಂತ, ವನ್ಯ ಜೀವಿಗಳ ಚರ್ಮ, ಮೂಳೆ ವಶ ಆರೋಪಿ ಬಂಧನ- ಚಿತ್ರಗಳಿವೆ

Published On - 9:45 am, Tue, 10 August 21

ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ