AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಕೇರ್ಸ್​ನಲ್ಲಿ ಪಾರದರ್ಶಕತೆ ತರುವ ಅವಶ್ಯಕತೆ ಇದೆ: ಪಿಎಂ ಮೋದಿಗೆ ಮಾಜಿ ಐಎಎಸ್​ ಅಧಿಕಾರಿಗಳ ಪತ್ರ

ಪಿಎಂ ಕೇರ್ಸ್​ ಹಣ ದುರ್ಬಳಕೆ ಆಗುತ್ತಿದೆ ಎನ್ನುವುದು ವಿಪಕ್ಷಗಳ ಆರೋಪ. ಅನೇಕ ಸಾರ್ವಜನಿಕರು ಕೂಡ ಇದೇ ಮಾದರಿಯ ಆರೋಪ ಮಾಡಿದ್ದರು. ಹೀಗಾಗಿ, ಈ ಅನುಮಾನಗಳನ್ನು ತಪ್ಪಿಸಲು ಪಿಎಂ ಕೇರ್ಸ್​​ ಹಣಕಾಸಿನ ಖರ್ಚುಗಳ ವಿವರಗಳನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡುವುದು ಅವಶ್ಯಕತೆ ಎಂದು ಮಾಜಿ ಸರ್ಕಾರಿ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಪಿಎಂ ಕೇರ್ಸ್​ನಲ್ಲಿ ಪಾರದರ್ಶಕತೆ ತರುವ ಅವಶ್ಯಕತೆ ಇದೆ: ಪಿಎಂ ಮೋದಿಗೆ ಮಾಜಿ ಐಎಎಸ್​ ಅಧಿಕಾರಿಗಳ ಪತ್ರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Jan 16, 2021 | 9:26 PM

Share

ನವದೆಹಲಿ: ಪಿಎಂ-ಕೇರ್ಸ್ ಫಂಡ್‌ನಲ್ಲಿ ಪಾರದರ್ಶಕತೆ ಇಲ್ಲ ಎನ್ನುವ ವಿಚಾರ ಈ ಮೊದಲಿನಿಂದಲೂ ಚರ್ಚೆ ಆಗುತ್ತಲೇ ಇದೆ. ಈ ವಿಚಾರಕ್ಕೆ ಸಂಬಂಧಿಸಿ 100 ಮಾಜಿ ಸರ್ಕಾರಿ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಶನಿವಾರ ಪತ್ರ ಬರೆದು, ಪಿಎಂ ಕೇರ್ಸ್​ ಪಾರದರ್ಶಕತೆ ತರುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಿಎಂ ಕೇರ್ಸ್​ ಹಣ ದುರ್ಬಳಕೆ ಆಗುತ್ತಿದೆ ಎನ್ನುವುದು ವಿಪಕ್ಷಗಳ ಆರೋಪ. ಅನೇಕ ಸಾರ್ವಜನಿಕರು ಕೂಡ ಇದೇ ಮಾದರಿಯ ಆರೋಪ ಮಾಡಿದ್ದರು. ಹೀಗಾಗಿ, ಈ ಅನುಮಾನಗಳನ್ನು ತಪ್ಪಿಸಲು ಪಿಎಂ ಕೇರ್ಸ್​​ ಹಣಕಾಸಿನ ಖರ್ಚುಗಳ ವಿವರಗಳನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡುವುದು ಅವಶ್ಯಕತೆ ಎಂದು ಮಾಜಿ ಸರ್ಕಾರಿ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಕೊರೊನಾ ವೈರಸ್​ನಿಂದ ಸಾಕಷ್ಟು ಜನರು ತೊಂದರೆಗೆ ಸಿಲುಕಿದ್ದಾರೆ. ಇವರಿಗೆ ಸಹಕಾರಿಯಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಪಿಎಂ ಕೇರ್ಸ್​ ಸ್ಥಾಪನೆ ಮಾಡಿತ್ತು. ಆದರೆ, ಪಿಎಂ ಕೇರ್ಸ್​​ ನಿರ್ವಹಿಸುತ್ತಿರುವ ರೀತಿ ಸಾಕಷ್ಟು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ. ಹೀಗಾಗಿ, ಇದರಲ್ಲಿ ಪಾರದರ್ಶಕತೆ ತರುವ ಅವಶ್ಯಕತೆ ಇದೆ ಎಂದು ಮಾಜಿ ಅಧಿಕಾರಿಗಳು ಪತ್ರದಲ್ಲಿ ತಿಳಿಸಿದ್ದಾರೆ.

ಮಾಜಿ ಐಎಸ್​ ಅಧಿಕಾರಿಗಳಾದ ಅನಿತಾ ಅಗ್ನಿಹೋತ್ರಿ, ಎಸ್​ಪಿ ಅಂಬ್ರೋಸೆ, ಶರದ್​ ಬೇಹರ್​, ಅರುಣ್​ ರಾಯ್​ ಸೇರಿ ಅನೇಕರು ಪತ್ರಕ್ಕೆ ಸಹಿ ಹಾಕಿದ್ದಾರೆ.

PM Cares ಮೇಲೆ ಸರ್ಕಾರದ ನಿಯಂತ್ರಣವಿಲ್ಲ; ಕೇಂದ್ರದ ಸ್ಪಷ್ಟನೆ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ