ಪಿಎಂ ಕೇರ್ಸ್​ನಲ್ಲಿ ಪಾರದರ್ಶಕತೆ ತರುವ ಅವಶ್ಯಕತೆ ಇದೆ: ಪಿಎಂ ಮೋದಿಗೆ ಮಾಜಿ ಐಎಎಸ್​ ಅಧಿಕಾರಿಗಳ ಪತ್ರ

ಪಿಎಂ ಕೇರ್ಸ್​ ಹಣ ದುರ್ಬಳಕೆ ಆಗುತ್ತಿದೆ ಎನ್ನುವುದು ವಿಪಕ್ಷಗಳ ಆರೋಪ. ಅನೇಕ ಸಾರ್ವಜನಿಕರು ಕೂಡ ಇದೇ ಮಾದರಿಯ ಆರೋಪ ಮಾಡಿದ್ದರು. ಹೀಗಾಗಿ, ಈ ಅನುಮಾನಗಳನ್ನು ತಪ್ಪಿಸಲು ಪಿಎಂ ಕೇರ್ಸ್​​ ಹಣಕಾಸಿನ ಖರ್ಚುಗಳ ವಿವರಗಳನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡುವುದು ಅವಶ್ಯಕತೆ ಎಂದು ಮಾಜಿ ಸರ್ಕಾರಿ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಪಿಎಂ ಕೇರ್ಸ್​ನಲ್ಲಿ ಪಾರದರ್ಶಕತೆ ತರುವ ಅವಶ್ಯಕತೆ ಇದೆ: ಪಿಎಂ ಮೋದಿಗೆ ಮಾಜಿ ಐಎಎಸ್​ ಅಧಿಕಾರಿಗಳ ಪತ್ರ
ಸಾಂದರ್ಭಿಕ ಚಿತ್ರ

Updated on: Jan 16, 2021 | 9:26 PM

ನವದೆಹಲಿ: ಪಿಎಂ-ಕೇರ್ಸ್ ಫಂಡ್‌ನಲ್ಲಿ ಪಾರದರ್ಶಕತೆ ಇಲ್ಲ ಎನ್ನುವ ವಿಚಾರ ಈ ಮೊದಲಿನಿಂದಲೂ ಚರ್ಚೆ ಆಗುತ್ತಲೇ ಇದೆ. ಈ ವಿಚಾರಕ್ಕೆ ಸಂಬಂಧಿಸಿ 100 ಮಾಜಿ ಸರ್ಕಾರಿ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಶನಿವಾರ ಪತ್ರ ಬರೆದು, ಪಿಎಂ ಕೇರ್ಸ್​ ಪಾರದರ್ಶಕತೆ ತರುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಿಎಂ ಕೇರ್ಸ್​ ಹಣ ದುರ್ಬಳಕೆ ಆಗುತ್ತಿದೆ ಎನ್ನುವುದು ವಿಪಕ್ಷಗಳ ಆರೋಪ. ಅನೇಕ ಸಾರ್ವಜನಿಕರು ಕೂಡ ಇದೇ ಮಾದರಿಯ ಆರೋಪ ಮಾಡಿದ್ದರು. ಹೀಗಾಗಿ, ಈ ಅನುಮಾನಗಳನ್ನು ತಪ್ಪಿಸಲು ಪಿಎಂ ಕೇರ್ಸ್​​ ಹಣಕಾಸಿನ ಖರ್ಚುಗಳ ವಿವರಗಳನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡುವುದು ಅವಶ್ಯಕತೆ ಎಂದು ಮಾಜಿ ಸರ್ಕಾರಿ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಕೊರೊನಾ ವೈರಸ್​ನಿಂದ ಸಾಕಷ್ಟು ಜನರು ತೊಂದರೆಗೆ ಸಿಲುಕಿದ್ದಾರೆ. ಇವರಿಗೆ ಸಹಕಾರಿಯಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಪಿಎಂ ಕೇರ್ಸ್​ ಸ್ಥಾಪನೆ ಮಾಡಿತ್ತು. ಆದರೆ, ಪಿಎಂ ಕೇರ್ಸ್​​ ನಿರ್ವಹಿಸುತ್ತಿರುವ ರೀತಿ ಸಾಕಷ್ಟು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ. ಹೀಗಾಗಿ, ಇದರಲ್ಲಿ ಪಾರದರ್ಶಕತೆ ತರುವ ಅವಶ್ಯಕತೆ ಇದೆ ಎಂದು ಮಾಜಿ ಅಧಿಕಾರಿಗಳು ಪತ್ರದಲ್ಲಿ ತಿಳಿಸಿದ್ದಾರೆ.

ಮಾಜಿ ಐಎಸ್​ ಅಧಿಕಾರಿಗಳಾದ ಅನಿತಾ ಅಗ್ನಿಹೋತ್ರಿ, ಎಸ್​ಪಿ ಅಂಬ್ರೋಸೆ, ಶರದ್​ ಬೇಹರ್​, ಅರುಣ್​ ರಾಯ್​ ಸೇರಿ ಅನೇಕರು ಪತ್ರಕ್ಕೆ ಸಹಿ ಹಾಕಿದ್ದಾರೆ.

PM Cares ಮೇಲೆ ಸರ್ಕಾರದ ನಿಯಂತ್ರಣವಿಲ್ಲ; ಕೇಂದ್ರದ ಸ್ಪಷ್ಟನೆ

 

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us