AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರದಲ್ಲಿ ಅಂತರ ಅನಗತ್ಯ: ಹೌಸ್​ಫುಲ್​ಗೆ ತಮಿಳುನಾಡು ಸರ್ಕಾರ ಅವಕಾಶ

ಎರಡು ದಿನಗಳ ಹಿಂದೆ, ಕೇರಳ ಸರ್ಕಾರವು ಶೇ. 50ರಷ್ಟು ಆಸನಗಳಿಗೆ ಅನುಮತಿ ನೀಡಿ ಸಿನಿಮಾ ಮಂದಿರ ತೆರೆಯಲು ಅನುವು ಮಾಡಿಕೊಟ್ಟಿತ್ತು. ಇದೀಗ ತಮಿಳುನಾಡು ಸಂಪೂರ್ಣ ಆಸನಗಳನ್ನು ತುಂಬಿಸಲು ಅವಕಾಶ ನೀಡಿ ಆದೇಶ ಹೊರಡಿಸಿದೆ.

ಚಿತ್ರಮಂದಿರದಲ್ಲಿ ಅಂತರ ಅನಗತ್ಯ: ಹೌಸ್​ಫುಲ್​ಗೆ ತಮಿಳುನಾಡು ಸರ್ಕಾರ ಅವಕಾಶ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 11:01 PM

Share

ಚೆನ್ನೈ: ಕೊರೊನಾ ಸಂಕಷ್ಟದ ನಡುವೆ ಶೇ 100ರಷ್ಟು ಆಸನಗಳಿಗೆ ಟಿಕೆಟ್​ ನೀಡಲು ಅವಕಾಶ ನೀಡಿ ಸಿನಿಮಾ ಮಂದಿರಗಳನ್ನು ತೆರೆಯಲು ತಮಿಳುನಾಡು ಸರ್ಕಾರ ಇಂದು ಅನುಮತಿ ನೀಡಿದೆ. ಜನವರಿ 13ರಿಂದ ತಮಿಳುನಾಡಿನಲ್ಲಿ ಸಿಂಗಲ್ ಸ್ಕ್ರೀನ್ ಹಾಗೂ ಮಲ್ಟಿಪ್ಲೆಕ್ಸ್​ಗಳು ಕಾರ್ಯನಿರ್ವಹಿಸಲಿದೆ. ಈ ಮೂಲಕ, ಲಾಕ್​ಡೌನ್ ಬಳಿಕ ಚಿತ್ರಮಂದಿರಗಳನ್ನು ಹೌಸ್​ಫುಲ್ ಮಾಡಲು ಅವಕಾಶ ನೀಡಿದ ಮೊದಲ ರಾಜ್ಯವಾಗಲಿದೆ ತಮಿಳುನಾಡು.

ಕೊರೊನಾ ಲಾಕ್​ಡೌನ್ ಕಾರಣದಿಂದ ಚಿತ್ರಮಂದಿರಗಳನ್ನು ಬರೋಬ್ಬರಿ ಏಳು ತಿಂಗಳ ಕಾಲ ಮುಚ್ಚಲಾಗಿತ್ತು. ಬಳಿಕ, ನವೆಂಬರ್ 10ರಂದು ಸಿಂಗಲ್ ಸ್ಕ್ರೀನ್ ಹಾಗೂ ಮಲ್ಟಿಪ್ಲೆಕ್ಸ್​ಗಳನ್ನು ಕೊವಿಡ್-19 ಸುರಕ್ಷತಾ ಕ್ರಮಗಳನ್ನು ಅನುಸರಿಸಿ ತೆರೆಯಬಹುದು ಎಂದು ಹಲವು ರಾಜ್ಯಗಳು ಆದೇಶಿಸಿದ್ದವು.

ಎರಡು ದಿನಗಳ ಹಿಂದೆ, ಕೇರಳ ಸರ್ಕಾರವು ಶೇ. 50ರಷ್ಟು ಆಸನಗಳಿಗೆ ಅನುಮತಿ ನೀಡಿ ಸಿನಿಮಾ ಮಂದಿರ ತೆರೆಯಲು ಅನುವು ಮಾಡಿಕೊಟ್ಟಿತ್ತು. ಇದೀಗ ತಮಿಳುನಾಡು ಸಂಪೂರ್ಣ ಆಸನಗಳನ್ನು ತುಂಬಿಸಲು ಅವಕಾಶ ನೀಡಿ ಆದೇಶ ಹೊರಡಿಸಿದೆ.

ಜನವರಿ 13ರಂದು ಟಾಲಿವುಡ್ ಸ್ಟಾರ್ ನಟ ದಳಪತಿ ವಿಜಯ್ ಅಭಿನಯದ ‘ಮಾಸ್ಟರ್’ ಸಿನಿಮಾ ತೆರೆಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ವಿಜಯ್ ಕೂಡ ಸಿನಿಮಾ ಹಾಲ್​ಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಬೇಕು ಎಂದು ಅಭಿಮತ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ.

ಕೊವಿಡ್-19 ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಂಡು ಥಿಯೇಟರ್​ಗಳನ್ನು ತೆರೆಯಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ. ಸಿನಿಮಾ ಹಾಲ್​ಗಳಲ್ಲಿ ಶೇ. 100ರಷ್ಟು ಜನರಿಗೆ ಅವಕಾಶ ನೀಡಿ ಆದೇಶ ನೀಡಿರುವುದಕ್ಕೆ, ಥಿಯೇಟರ್ ಮಾಲಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಕೊರೊನಾ ನಡುವೆ ಈ ಕ್ರಮ ಕೈಗೊಂಡಿರುವ ಬಗ್ಗೆ ಜನರಿಂದ ವಿರೋಧವೂ ವ್ಯಕ್ತವಾಗಿದೆ.

ಜಲ್ಲಿಕಟ್ಟು ಆಯೋಜನೆಗೆ ಅನುಮತಿ ನೀಡಿದ ತಮಿಳುನಾಡು ಸರ್ಕಾರ; ಸ್ಪರ್ಧಿಗಳಿಗೆ ಕೊರೊನಾ ನೆಗೆಟಿವ್ ಪತ್ರ ಕಡ್ಡಾಯ

Published On - 7:46 pm, Mon, 4 January 21

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್