AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರದಲ್ಲಿ ಅಂತರ ಅನಗತ್ಯ: ಹೌಸ್​ಫುಲ್​ಗೆ ತಮಿಳುನಾಡು ಸರ್ಕಾರ ಅವಕಾಶ

ಎರಡು ದಿನಗಳ ಹಿಂದೆ, ಕೇರಳ ಸರ್ಕಾರವು ಶೇ. 50ರಷ್ಟು ಆಸನಗಳಿಗೆ ಅನುಮತಿ ನೀಡಿ ಸಿನಿಮಾ ಮಂದಿರ ತೆರೆಯಲು ಅನುವು ಮಾಡಿಕೊಟ್ಟಿತ್ತು. ಇದೀಗ ತಮಿಳುನಾಡು ಸಂಪೂರ್ಣ ಆಸನಗಳನ್ನು ತುಂಬಿಸಲು ಅವಕಾಶ ನೀಡಿ ಆದೇಶ ಹೊರಡಿಸಿದೆ.

ಚಿತ್ರಮಂದಿರದಲ್ಲಿ ಅಂತರ ಅನಗತ್ಯ: ಹೌಸ್​ಫುಲ್​ಗೆ ತಮಿಳುನಾಡು ಸರ್ಕಾರ ಅವಕಾಶ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 11:01 PM

Share

ಚೆನ್ನೈ: ಕೊರೊನಾ ಸಂಕಷ್ಟದ ನಡುವೆ ಶೇ 100ರಷ್ಟು ಆಸನಗಳಿಗೆ ಟಿಕೆಟ್​ ನೀಡಲು ಅವಕಾಶ ನೀಡಿ ಸಿನಿಮಾ ಮಂದಿರಗಳನ್ನು ತೆರೆಯಲು ತಮಿಳುನಾಡು ಸರ್ಕಾರ ಇಂದು ಅನುಮತಿ ನೀಡಿದೆ. ಜನವರಿ 13ರಿಂದ ತಮಿಳುನಾಡಿನಲ್ಲಿ ಸಿಂಗಲ್ ಸ್ಕ್ರೀನ್ ಹಾಗೂ ಮಲ್ಟಿಪ್ಲೆಕ್ಸ್​ಗಳು ಕಾರ್ಯನಿರ್ವಹಿಸಲಿದೆ. ಈ ಮೂಲಕ, ಲಾಕ್​ಡೌನ್ ಬಳಿಕ ಚಿತ್ರಮಂದಿರಗಳನ್ನು ಹೌಸ್​ಫುಲ್ ಮಾಡಲು ಅವಕಾಶ ನೀಡಿದ ಮೊದಲ ರಾಜ್ಯವಾಗಲಿದೆ ತಮಿಳುನಾಡು.

ಕೊರೊನಾ ಲಾಕ್​ಡೌನ್ ಕಾರಣದಿಂದ ಚಿತ್ರಮಂದಿರಗಳನ್ನು ಬರೋಬ್ಬರಿ ಏಳು ತಿಂಗಳ ಕಾಲ ಮುಚ್ಚಲಾಗಿತ್ತು. ಬಳಿಕ, ನವೆಂಬರ್ 10ರಂದು ಸಿಂಗಲ್ ಸ್ಕ್ರೀನ್ ಹಾಗೂ ಮಲ್ಟಿಪ್ಲೆಕ್ಸ್​ಗಳನ್ನು ಕೊವಿಡ್-19 ಸುರಕ್ಷತಾ ಕ್ರಮಗಳನ್ನು ಅನುಸರಿಸಿ ತೆರೆಯಬಹುದು ಎಂದು ಹಲವು ರಾಜ್ಯಗಳು ಆದೇಶಿಸಿದ್ದವು.

ಎರಡು ದಿನಗಳ ಹಿಂದೆ, ಕೇರಳ ಸರ್ಕಾರವು ಶೇ. 50ರಷ್ಟು ಆಸನಗಳಿಗೆ ಅನುಮತಿ ನೀಡಿ ಸಿನಿಮಾ ಮಂದಿರ ತೆರೆಯಲು ಅನುವು ಮಾಡಿಕೊಟ್ಟಿತ್ತು. ಇದೀಗ ತಮಿಳುನಾಡು ಸಂಪೂರ್ಣ ಆಸನಗಳನ್ನು ತುಂಬಿಸಲು ಅವಕಾಶ ನೀಡಿ ಆದೇಶ ಹೊರಡಿಸಿದೆ.

ಜನವರಿ 13ರಂದು ಟಾಲಿವುಡ್ ಸ್ಟಾರ್ ನಟ ದಳಪತಿ ವಿಜಯ್ ಅಭಿನಯದ ‘ಮಾಸ್ಟರ್’ ಸಿನಿಮಾ ತೆರೆಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ವಿಜಯ್ ಕೂಡ ಸಿನಿಮಾ ಹಾಲ್​ಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಬೇಕು ಎಂದು ಅಭಿಮತ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ.

ಕೊವಿಡ್-19 ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಂಡು ಥಿಯೇಟರ್​ಗಳನ್ನು ತೆರೆಯಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ. ಸಿನಿಮಾ ಹಾಲ್​ಗಳಲ್ಲಿ ಶೇ. 100ರಷ್ಟು ಜನರಿಗೆ ಅವಕಾಶ ನೀಡಿ ಆದೇಶ ನೀಡಿರುವುದಕ್ಕೆ, ಥಿಯೇಟರ್ ಮಾಲಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಕೊರೊನಾ ನಡುವೆ ಈ ಕ್ರಮ ಕೈಗೊಂಡಿರುವ ಬಗ್ಗೆ ಜನರಿಂದ ವಿರೋಧವೂ ವ್ಯಕ್ತವಾಗಿದೆ.

ಜಲ್ಲಿಕಟ್ಟು ಆಯೋಜನೆಗೆ ಅನುಮತಿ ನೀಡಿದ ತಮಿಳುನಾಡು ಸರ್ಕಾರ; ಸ್ಪರ್ಧಿಗಳಿಗೆ ಕೊರೊನಾ ನೆಗೆಟಿವ್ ಪತ್ರ ಕಡ್ಡಾಯ

Published On - 7:46 pm, Mon, 4 January 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ