AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ರೂ. ತುಂಬಾ ಚಿಕ್ಕ ಲಂಚ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗೆ ಬಾಂಬೆ ಹೈಕೋರ್ಟ್​ ರಿಲೀಫ್

ಬಾಂಬೆಯ ವೈದ್ಯಾಧಿಕಾರಿಯೊಬ್ಬರು 2007ರಲ್ಲಿ 100 ರೂ. ಲಂಚ ಪಡೆದಿದ್ದರು ಎಂದು ಆರೋಪಿಸಲಾಗಿತ್ತು. ಆದರೆ ಇದೀಗ ಬಾಂಬೆ ಹೈಕೋರ್ಟ್ ಅವರಿಗೆ ಈ ಪ್ರಕರಣದಿಂದ ರಿಲೀಫ್​ನೀಡಿದೆ. ಇದು ಚಿಕ್ಕ ವಿಷಯ ಎಂದು ಕಾಣುತ್ತದೆ. ಹಾಗಾಗಿ ಈ ಪ್ರಕರಣದಿಂದ ವೈದ್ಯಾಧಿಕಾರಿಯನ್ನು ಖುಲಾಸೆಗೊಳಿಸಲಾಗುವುದು ಎಂದು ಕೋರ್ಟ್​ ಹೇಳಿದೆ.

100 ರೂ. ತುಂಬಾ ಚಿಕ್ಕ ಲಂಚ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗೆ ಬಾಂಬೆ ಹೈಕೋರ್ಟ್​ ರಿಲೀಫ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Oct 05, 2023 | 3:33 PM

Share

ಬಾಂಬೆ, ಅ.5: ಮಹಾರಾಷ್ಟ್ರದ ಬಾಂಬೆಯ ವೈದ್ಯಾಧಿಕಾರಿಯೊಬ್ಬರು 2007ರಲ್ಲಿ 100 ರೂ. ಲಂಚ ಪಡೆದಿದ್ದರು ಎಂದು ಆರೋಪಿಸಲಾಗಿತ್ತು. ಆದರೆ ಇದೀಗ ಬಾಂಬೆ ಹೈಕೋರ್ಟ್ (Bombay High Court) ಅವರಿಗೆ ಈ ಪ್ರಕರಣದಿಂದ ರಿಲೀಫ್​ನೀಡಿದೆ. ಇದು ಚಿಕ್ಕ ವಿಷಯ ಎಂದು ಕಾಣುತ್ತದೆ. ಹಾಗಾಗಿ ಈ ಪ್ರಕರಣದಿಂದ ವೈದ್ಯಾಧಿಕಾರಿಯನ್ನು ಖುಲಾಸೆಗೊಳಿಸಲಾಗುವುದು ಎಂದು ಕೋರ್ಟ್​ ಹೇಳಿದೆ. ನ್ಯಾಯಮೂರ್ತಿ ಜಿತೇಂದ್ರ ಜೈನ್ ಅವರಿದ್ದ ಏಕ ಪೀಠವು ಇದು ಕ್ಷುಲ್ಲಕ ವಿಷಯವೆಂದು ಪರಿಗಣಿಸಿ, ವಿಚಾರಣೆಗೆ ಅರ್ಹವಲ್ಲದ ಪ್ರಕರಣ ಎಂದು ಮಂಗಳವಾರ ಹೇಳಿದೆ.

ಇನ್ನು ವೈದ್ಯಾಧಿಕಾರಿಯನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಬಾಂಬೆ ಹೈಕೋರ್ಟ್ ಎತ್ತಿಹಿಡಿದಿದೆ. 2007ರಲ್ಲಿ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪೌಡ್‌ನಲ್ಲಿರುವ ಗ್ರಾಮೀಣ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅನಿಲ್ ಶಿಂಧೆ ಅವರ ಸೋದರಳಿಯನಿಂದ ಹಲ್ಲೆಗೆ ಒಳಗಾಗಿದ್ದ ಎಲ್‌ಟಿ ಪಿಂಗಳೆ ಎಂಬ ವ್ಯಕ್ತಿಯಿಂದ 100 ರೂ. ಕೇಳಿದ್ದಾರೆ ಎಂದು ಆರೋಪಿಸಲಾಗಿದೆ.

ಎಲ್‌ಟಿ ಪಿಂಗಳೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅನಿಲ್ ಶಿಂಧೆ ಅವರು 100 ರೂ. ಲಂಚ ಕೇಳಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಡಾ.ಅನಿಲ್ ಶಿಂಧೆ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ ರೆಡ್ ಹ್ಯಾಂಡ್ ಆಗಿ ಹಿಡಿದಿತ್ತು. ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ.

ಇದನ್ನೂ ಓದಿ: ಪದದಲ್ಲಿ ಕಳಂಕವಿಲ್ಲ, ಅದನ್ನು ಬದಲಾಯಿಸುವ ಅಗತ್ಯವಿಲ್ಲ: ಹೈಕೋರ್ಟ್

ಜನವರಿ 2012ರಲ್ಲಿ, ವಿಶೇಷ ನ್ಯಾಯಾಲಯವು ಡಾ.ಅನಿಲ್ ಶಿಂಧೆ ಅವರನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿತು. ಆದರೆ ವಿಶೇಷ ನ್ಯಾಯಾಲಯ ಆದೇಶವನ್ನು ಅರ್ಜಿದಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಆದರೆ ಹೈಕೋರ್ಟ್​​ ಈ ಪ್ರಕರಣವನ್ನು ವಿಚಾರಣೆ ನಡೆಸಲು ಯೋಗ್ಯವಲ್ಲ ಎಂದು ಹೇಳಿದೆ.

ಇದು ತುಂಬಾ ಚಿಕ್ಕ ಮೊತ್ತ ಮತ್ತು ಈ ಆರೋಪಕ್ಕೆ ಸಂಬಂಧಿಸಿದಂತೆ ವೈದ್ಯಾಧಿಕಾರಿಯನ್ನು ದೋಷಮುಕ್ತಗೊಳಿಸಲು ಆದೇಶ ನೀಡುತ್ತಿದ್ದೇವೆ ಎಂದು ಪೀಠ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ