AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೌಕ್ತೆ ಚಂಡಮಾರುತದಿಂದ ತೀವ್ರ ಹಾನಿಗೊಳಗಾದ ಗುಜರಾತ್​​ಗೆ 1000 ಕೋಟಿ ರೂ.ತಕ್ಷಣದ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಗುಜರಾತ್​ ಮತ್ತು ದಿಯುವಿನಲ್ಲಿ ತೌಕ್ತೆ ಚಂಡಮಾರುತ ಉಂಟು ಮಾಡಿದ ಹಾನಿಯನ್ನು ವೈಮಾನಿಕ ಸಮೀಕ್ಷೆ ಮೂಲಕ ಅವಲೋಕಿಸಿದ್ದೇನೆ. ಚಂಡಮಾರುತದಿಂದ ಹಾನಿಗೊಳಗಾದ ಎಲ್ಲ ರಾಜ್ಯಗಳ ಆಡಳಿತಗಳೊಂದಿಗೂ ಕೇಂದ್ರ ಸರ್ಕಾರ ಸಂಪರ್ಕದಲ್ಲಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ತೌಕ್ತೆ ಚಂಡಮಾರುತದಿಂದ ತೀವ್ರ ಹಾನಿಗೊಳಗಾದ ಗುಜರಾತ್​​ಗೆ 1000 ಕೋಟಿ ರೂ.ತಕ್ಷಣದ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ
Lakshmi Hegde
|

Updated on:May 19, 2021 | 7:44 PM

Share

ದೆಹಲಿ: ತೌಕ್ತೆ ಚಂಡಮಾರುತದಿಂದ ತೀವ್ರ ಹಾನಿಗೀಡಾದ ಗುಜರಾತ್​ಗೆ ತಕ್ಷಣದ ಪರಿಹಾರವಾಗಿ 1000 ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಘೋಷಿಸಿದ್ದಾರೆ. ಇಂದು ಗುಜರಾತ್​ಗೆ ಭೇಟಿ ನೀಡಿದ ಪ್ರಧಾನಿ ಮೋದಿಯವರು, ಚಂಡಮಾರುತದಿಂದ ಉಂಟಾದ ಹಾನಿಯ ವೈಮಾನಿಕ ಸಮೀಕ್ಷೆ ನಡೆಸಿದರು. ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದ ಬೆನ್ನಲ್ಲೇ ತಕ್ಷಣದ ಪರಿಹಾರ ಘೋಷಣೆ ಮಾಡಿದ್ದಾರೆ.

ಗುಜರಾತ್​ನ ಗಿರ್​ಸೋಮನಾಥ್​, ಅಮ್ರೇಲಿ, ಭಾವನಗರ ಜಿಲ್ಲೆಗಳು ಮತ್ತು ದಿಯುವಿನಲ್ಲಿ ಇಂದು ಪ್ರಧಾನಿ ಮೋದಿಯವರು ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಚಂಡಮಾರುತದಿಂದಾದ ಅವಘಡದಿಂದ ಪ್ರಾಣಕಳೆದುಕೊಂಡವರ ಪ್ರತಿ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ.ನೀಡುವುದಾಗಿ ಪಿಎಂ ಮೋದಿ ತಿಳಿಸಿದ್ದಾರೆ.

ವೈಮಾನಿಕ ಸಮೀಕ್ಷೆ ಬಳಿಕ ಟ್ವೀಟ್ ಮಾಡಿದ ಪ್ರಧಾನಿ ಮೋದಿ, ಗುಜರಾತ್​ ಮತ್ತು ದಿಯುವಿನಲ್ಲಿ ತೌಕ್ತೆ ಚಂಡಮಾರುತ ಉಂಟು ಮಾಡಿದ ಹಾನಿಯನ್ನು ವೈಮಾನಿಕ ಸಮೀಕ್ಷೆ ಮೂಲಕ ಅವಲೋಕಿಸಿದ್ದೇನೆ. ಚಂಡಮಾರುತದಿಂದ ಹಾನಿಗೊಳಗಾದ ಎಲ್ಲ ರಾಜ್ಯಗಳ ಆಡಳಿತಗಳೊಂದಿಗೂ ಕೇಂದ್ರ ಸರ್ಕಾರ ಸಂಪರ್ಕದಲ್ಲಿದೆ. ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದ್ದಾರೆ.

ವೈಮಾನಿಕ ಸಮೀಕ್ಷೆಯ ನಂತರ ಅಹ್ಮದಾಬಾದ್​​ನಲ್ಲಿ ಪರಿಶೀಲನಾ ಸಭೆಯನ್ನೂ ನಡೆಸಿದ್ದಾರೆ. ಇನ್ನು ವೈಮಾನಿಕ ಸಮೀಕ್ಷೆ ವೇಳೆ ಪ್ರಧಾನಿಯವರೊಂದಿಗೆ ಗುಜರಾತ್ ಮುಖ್ಯಮಂತ್ರಿ ವಿಜಯ್​ ರೂಪಾಣಿ ಸೇರಿ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಇದ್ದರು. ಚಂಡಮಾರುತದಿಂದ ತೀವ್ರ ಹಾನಿಗೊಳಗಾಗಿರುವ ಉಳಿದ ರಾಜ್ಯಗಳಿಗೂ ತಕ್ಷಣದ ಪರಿಹಾರ ಘೋಷಣೆ ಮಾಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

22 ಮಂದಿ ಸಾವು ಇನ್ನು ತೌಕ್ತೆ ಚಂಡಮಾರುತದ ಅಬ್ಬರಕ್ಕೆ P305 ಬಾರ್ಜ್​ನಲ್ಲಿ 22 ಜನ ಮೃತಪಟ್ಟಿದ್ದಾರೆ. ಇನ್ನೂ 65 ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಭಾರತೀಯ ನೌಕಾಪಡೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: WTC Final:ಟೀಂ ಇಂಡಿಯಾ ಟೆಸ್ಟ್ ಚಾಂಪಿಯನ್ ಆಗಲ್ಲ! ಭಾರತವೆಂದರೆ ಉರಿದು ಬೀಳುವ ಮೈಕಲ್ ವಾನ್ ಹೇಳಿಕೆ

Cyclone Yaas ಮೇ 25ರ ವೇಳೆಗೆ ರೂಪುಗೊಳ್ಳಲಿರುವ ಯಾಸ್ ಚಂಡಮಾರುತ ಪಶ್ಚಿಮ ಬಂಗಾಳ, ಒಡಿಶಾದತ್ತ ಸಾಗುವ ಸಾಧ್ಯತೆ: ಭಾರತೀಯ ಹವಾಮಾನ ಇಲಾಖೆ

1,000 Crore assistance announced by Prime Minister Narendra modi for immediate relief to Cyclone Tauktae Hit Gujarat

Published On - 7:14 pm, Wed, 19 May 21

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ