AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat: ಮನ್ ಕಿ ಬಾತ್​​ನ 100ನೇ ಸಂಚಿಕೆ, 9 ಸಾವಿರ ಕಡೆಗಳಲ್ಲಿ ಸಾಕ್ಷಿಯಾಗಲಿರುವ ಹರಿಯಾಣದ 9 ಲಕ್ಷ ಜನ

ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 30 ರಂದು ನಡೆಯುವ ತಿಂಗಳ ಕೊನೆಯ 'ಮನ್ ಕಿ ಬಾತ್' ತುಂಬಾ ವಿಶೇಷವಾಗಿದೆ. ಹೌದು ಈ ಮನ್ ಕಿ ಬಾತ್ 100ನೇ ಸಂಚಿಕೆಯಾಗಿದೆ. ಇದೀಗ ಈ ಬಾರಿಯ ಮನ್ ಕಿ ಬಾತ್​​ಗೆ ಹರಿಯಾಣ ಭಾರತೀಯ ಜನತಾ ಪಕ್ಷದ (ಬಿಜೆಪಿ) ದೊಡ್ಡ ಸಿದ್ಧತೆಗಳನ್ನು ಮಾಡಿಕೊಂಡಿದೆ.

Mann Ki Baat: ಮನ್ ಕಿ ಬಾತ್​​ನ 100ನೇ ಸಂಚಿಕೆ, 9 ಸಾವಿರ ಕಡೆಗಳಲ್ಲಿ ಸಾಕ್ಷಿಯಾಗಲಿರುವ ಹರಿಯಾಣದ 9 ಲಕ್ಷ ಜನ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Apr 29, 2023 | 11:12 AM

Share

ಚಂಡೀಗಢ: ಪ್ರಧಾನಿ ನರೇಂದ್ರ ಮೋದಿ (Narendra Modi) ಏಪ್ರಿಲ್ 30 ರಂದು ನಡೆಯುವ ತಿಂಗಳ ಕೊನೆಯ ‘ಮನ್ ಕಿ ಬಾತ್’ ತುಂಬಾ ವಿಶೇಷವಾಗಿದೆ. ಹೌದು ಈ ಮನ್ ಕಿ ಬಾತ್ 100ನೇ ಸಂಚಿಕೆಯಾಗಿದೆ. ಇದೀಗ ಈ ಬಾರಿಯ ಮನ್ ಕಿ ಬಾತ್​​ಗೆ ಹರಿಯಾಣ ಭಾರತೀಯ ಜನತಾ ಪಕ್ಷದ (ಬಿಜೆಪಿ) ದೊಡ್ಡ ಸಿದ್ಧತೆಗಳನ್ನು ಮಾಡಿಕೊಂಡಿದೆ. ಹರಿಯಾಣದಲ್ಲಿ 9 ಲಕ್ಷ ಜನರ ಈ ಬಾರಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಈ ಕಾರ್ಯಕ್ರಮಕ್ಕಾಗಿ ರಾಜ್ಯದಾದ್ಯಂತ 9,000ಕ್ಕೂ ಹೆಚ್ಚು ಸ್ಥಳಗಳನ್ನು ನಿಯೋಜನೆ ಮಾಡಲಾಗಿದೆ.

ಹರಿಯಾಣ ಬಿಜೆಪಿ ಮುಖ್ಯಸ್ಥ ಓಂ ಪ್ರಕಾಶ್ ಧನಕರ್ ಅವರು ರೂಪಿಸಿರುವ ಈ ಕಾರ್ಯಕ್ರಮದಡಿಯಲ್ಲಿ ಪಕ್ಷವು 13 ಲಕ್ಷ ಆಮಂತ್ರಣ ಪತ್ರಗಳನ್ನು ಮುದ್ರಿಸಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 100 ವಿವಿಧ ಸ್ಥಳಗಳಲ್ಲಿ ಪಾಲ್ಗೊಳ್ಳುವವರಿಗೆ ರೆಡ್ ಕಾರ್ಪೆಟ್ ಹಾಸಲಿದೆ. ಹರಿಯಾಣ 90 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಬಿಜೆಪಿಯ 4.50 ಲಕ್ಷ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಜ್ಜುಗೊಂಡಿದ್ದಾರೆ.

ಈ ಬಾರಿಯ ಮನ್​​​ ಕಿ ಬಾತ್​ ಲೈವ್ 9 ಸಾವಿರ ವೇದಿಕೆಗಳಲ್ಲಿ ಪ್ರದರ್ಶನಗೊಳ್ಳಲಿದೆ. ಪ್ರತಿ ಕ್ಷೇತ್ರದಿಂದ 100 ಜನರ ಉಪಸ್ಥಿತಿ ಇರುವಂತೆ ಬಿಜೆಪಿ ಕಾರ್ಯಕರ್ತರಿಗೆ ತಿಳಿಸಲಾಗಿದೆ. ಆಹ್ವಾನ ಪ್ರತಿಕೆಯನ್ನು ಹಂಚಲು ಸಾವಿರಾರೂ ಕಾರ್ಯಕರ್ತರು ರಾಜ್ಯಾದ್ಯಂತ ಹೋಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ 5,000 ಹೆಚ್ಚು ಕಾರ್ಯಕರ್ತರು ಶ್ರಮಿಸಲಿದ್ದಾರೆ ಎಂದು ಧನಕರ್ ಹೇಳಿದರು.

ಇದನ್ನೂ ಓದಿ:Narendra Modi Interaction: ಕರ್ನಾಟಕದ ವಿಧಾನಸಭಾ ಚುನಾವಣೆಗೆ ಪ್ರಧಾನಿ ಮೋದಿಯ ಡಬಲ್​ ಇಂಜಿನ್ ಸೂತ್ರ

ಈ ಬಾರಿ ಮನ್​​ ಕಿ ಬಾತ್​​ನಲ್ಲಿ 9 ಲಕ್ಷ ಜನರ ಉಪಸ್ಥಿತಿರುವ ನಿರೀಕ್ಷೆ ಇದೆ ಎಂದು ಧನಕರ್ ಹೇಳಿದ್ದಾರೆ. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ವಿಧಾನಸಭಾ ಸ್ಪೀಕರ್ ಜಿಯಾನ್ ಚಂದ್ ಗುಪ್ತಾ ಅವರು ಪಂಚಕುದಿಂದಲ್ಲೇ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ

ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸಂಸದರು, ಶಾಸಕರು ಮತ್ತು ಸಚಿವರು ಭಾನುವಾರದಂದು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಮನ್​​ ಕಿ ಬಾತ್​ ಬಗ್ಗೆ ಜನರಿಗೆ ದೊಡ್ಡ ನಿರೀಕ್ಷೆ ಮತ್ತು ಉತ್ಸಾಹದಿಂದ ಭಾಗವಹಿಸಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:12 am, Sat, 29 April 23

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ