AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಕಿಸಾನ್​ ಯೋಜನೆಯ 10ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ; ಹಣ ಜಮಾ ಆಗಿದ್ದನ್ನು ಚೆಕ್​ ಮಾಡಿಕೊಳ್ಳಿ

Pradhan Mantri Kisan Samman Nidhi: ಪ್ರಧಾನ ಮಂತ್ರಿ ಕಿಸಾನ್​ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರ ವರ್ಷಕ್ಕೆ 6000 ರೂ. ಹಣವನ್ನು ಅರ್ಹ ಫಲಾನುಭವಿ ರೈತರ ಖಾತೆಗೆ ಜಮಾ ಮಾಡುತ್ತದೆ. ಅದರ 9 ಕಂತುಗಳಷ್ಟನ್ನು ರೈತರು ಇದುವರೆಗೆ ಸ್ವೀಕರಿಸಿದ್ದರು. 

ಪಿಎಂ ಕಿಸಾನ್​ ಯೋಜನೆಯ 10ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ; ಹಣ ಜಮಾ ಆಗಿದ್ದನ್ನು ಚೆಕ್​ ಮಾಡಿಕೊಳ್ಳಿ
ಪಿಎಂ ಕಿಸಾನ್​ ಯೋಜನೆ 10ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ
TV9 Web
| Edited By: |

Updated on:Jan 01, 2022 | 1:11 PM

Share

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಪಿಎಂ ಕಿಸಾನ್​ ಸಮ್ಮಾನ್​ ನಿಧಿ ಯೋಜನೆ 10ನೇ ಕಂತನ್ನು ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಡಿ ದೇಶದ 10 ಕೋಟಿ ರೈತರ ಬ್ಯಾಂಕ್​ ಖಾತೆಗೆ 2 ಸಾವಿರ ರೂ.ಜಮೆಯಾಗಿದೆ. 10ನೇ ಕಂತಿನಡಿ ಹಣ ಪಡೆಯಲು ಅನೇಕ ರೈತರು ಕಾಯುತ್ತಿದ್ದರು. ಅವರಿಗೆ ಹೊಸವರ್ಷದ ಮೊದಲ ದಿನವೇ ಪ್ರಧಾನಿ ಮೋದಿ ಶುಭ ಸಮಾಚಾರ ನೀಡಿದ್ದಾರೆ.  ಇಂದು ಕಿಸಾನ್ ಸಮ್ಮಾನ್​ ಯೋಜನೆಯ 10ನೇ ಕಂತನ್ನು ಮಾತ್ರವಲ್ಲದೆ, ಪ್ರಧಾನಿ ಮೋದಿ, 351 ರೈತ ಉತ್ಪಾದನಾ ಸಂಸ್ಥೆಗಳಿಗೆ 14 ಕೋಟಿ ರೂಪಾಯಿ ಇಕ್ವಿಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಇದರಿಂದ ಸುಮಾರು 1.24 ಲಕ್ಷ ರೈತರಿಗೆ ಅನುಕೂಲವಾಗಿದೆ.  ಪ್ರಧಾನ ಮಂತ್ರಿ ಕಿಸಾನ್​ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರ ವರ್ಷಕ್ಕೆ 6000 ರೂ. ಹಣವನ್ನು ಅರ್ಹ ಫಲಾನುಭವಿ ರೈತರ ಖಾತೆಗೆ ಜಮಾ ಮಾಡುತ್ತದೆ. ಅದರ 9 ಕಂತುಗಳಷ್ಟನ್ನು ರೈತರು ಇದುವರೆಗೆ ಸ್ವೀಕರಿಸಿದ್ದರು.  

ನಿಮ್ಮ ಕಿಸಾನ್​-ಸಮ್ಮಾನ್​ ಕಂತನ್ನು ಪರಿಶೀಲನೆ ಮಾಡುವ ವಿಧಾನ ಹೀಗಿದೆ.. 1. ಮೊದಲು ಕಿಸಾನ್ ಸಮ್ಮಾನ್​ ಯೋಜನೆಯ ಅಧಿಕೃತ ವೆಬ್​ಸೈಟ್​ https://pmkisan.gov.in/. ಗೆ ಭೇಟಿ ನೀಡಿ 2.ಹೋಂ ಪೇಜ್​​ನಲ್ಲಿರುವ ‘Farmer’s Corner Section’ ಮೇಲೆ ಕ್ಲಿಕ್​ ಮಾಡಿ. 3.  ಅದರಲ್ಲಿ Beneficiary Status (ಫಲಾನುಭವಿಗಳ ಸ್ಥಿತಿ) ಎಂಬ ಆಪ್ಷನ್​ನ್ನು ಆಯ್ಕೆ ಮಾಡಿ. (ಅಲ್ಲಿ ಈ ಯೋಜನೆಯ ಫಲಾನುಭವಿ ಆತನ/ಆಕೆಯ ಅರ್ಜಿಯ ಸ್ಥಿತಿ ಪರಿಶೀಲನೆ ಮಾಡಬಹುದು. ಕಿಸಾನ್​-ಸಮ್ಮಾನ್​ ಯೋಜನೆಯ ಫಲಾನುಭವಿ ರೈತರ ಹೆಸರು ಮತ್ತು ಅವರ ಬ್ಯಾಂಕ್​ಗೆ ಕಳಿಸಲಾದ ಹಣದ ಮೊತ್ತದ ಪಟ್ಟಿ ಇರುತ್ತದೆ). 4. ಫಲಾನುಭವಿಗಳ ಸ್ಥಿತಿ ಕ್ಲಿಕ್​ ಮಾಡಿದ ಮೇಲೆ, ಅಲ್ಲಿ ನಿಮ್ಮ ಆಧಾರ್ ನಂಬರ್​ ಅಥವಾ ಫೋನ್ ನಂಬರ್​ ಅಥವಾ ಅಕೌಂಟ್ ನಂಬರ್ ನಮೂದಿಸಬೇಕು. ನಿಮ್ಮ ರಾಜ್ಯ, ಜಿಲ್ಲೆ, ಹಳ್ಳಿ ಇತ್ಯಾದಿ ಮಾಹಿತಿಗಳನ್ನೂ ನೀಡಬೇಕು. 5. ಇಷ್ಟಾದ ಮೇಲೆ ನಿಮ್ಮ ಡಾಟಾ ಪಡೆಯಬಹುದು.

4000 ರೂ.ಬರಬಹುದು ! ಇದು ಎಲ್ಲರಿಗೂ ಅಲ್ಲ. ಪಿಎಂ ಕಿಸಾನ್ ಯೋಜನೆಯ 9ನೇ ಕಂತಿನಡಿ ಯಾರು ಹಣ ಪಡೆದಿರಲಿಲ್ಲವೋ ಅವರಿಗೆ ಆ ಕಂತು ಮತ್ತು ಈ ಸಲದ 10ನೇ ಕಂತು ಸೇರಿ ಒಟ್ಟು 4 ಸಾವಿರ ರೂಪಾಯಿ ಬರಬಹುದು (ಅಂದರೆ ಎರಡೂ ಕಂತುಗಳ ತಲಾ 2000 ರೂ). ಹಾಗೇ, 9ನೇ ಕಂತಿನಲ್ಲಿ ಹಣ ಪಡೆಯದೆ ಇದ್ದವರು..ಈ ಸಲ ಒಟ್ಟಿಗೇ ಪಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: Moto G31: ಹೊಸ ವರ್ಷಕ್ಕೆ ಬಿಗ್ ಶಾಕ್: ಈ ಎರಡು ಸ್ಮಾರ್ಟ್​ಫೋನ್ ಬೆಲೆಯಲ್ಲಿ ಬರೋಬ್ಬರಿ 3000 ರೂ. ಏರಿಕೆ

Published On - 1:03 pm, Sat, 1 January 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?