AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo | ಪಟ್ಟು ಸಡಿಲಿಸದ ಕೇಂದ್ರ-ರೈತ ಸಂಘಟನೆಗಳು; 10ನೇ ಸುತ್ತಿನ ಮಾತುಕತೆಯೂ ವಿಫಲ

ರೈತರು ಬೆಳೆದ ಬೆಲೆಗೆ ಕನಿಷ್ಠ ಬೆಂಬಲ ಬೆಲೆ ನೀಡುವ ವಿಚಾರದಲ್ಲಿ ಸರ್ಕಾರ ಕಾನೂನು ಖಾತರಿ ನೀಡುವ ಬಗ್ಗೆ ಮಾತುಕತೆ ನಡೆಯಬೇಕಿದೆ. ಆದರೆ, ಸರ್ಕಾರ ಇದನ್ನು ನಿರ್ಲಕ್ಷ್ಯ ಮಾಡುತ್ತಿದ್ದು, ಉಳಿದೆಲ್ಲ ವಿಚಾರಗಳ ಬಗ್ಗೆ ಮಾತನಾಡುತ್ತಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

Delhi Chalo | ಪಟ್ಟು ಸಡಿಲಿಸದ ಕೇಂದ್ರ-ರೈತ ಸಂಘಟನೆಗಳು; 10ನೇ ಸುತ್ತಿನ ಮಾತುಕತೆಯೂ ವಿಫಲ
ರೈತರ ಪ್ರತಿಭಟನೆ (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
| Edited By: |

Updated on: Jan 20, 2021 | 7:52 PM

Share

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ರೈತ ಸಂಘಟನೆಗಳು ಹಾಗೂ ಕೇಂದ್ರ ಸರ್ಕಾರ ನಡುವೆ ನಡೆದ 10ನೇ ಸುತ್ತಿನ ಮಾತುಕತೆಯಲ್ಲಿ ಇಬ್ಬರೂ ತಮ್ಮ ಪಟ್ಟು ಸಡಿಲಿಸಲು ನಿರಾಕರಿಸಿವೆ. ಹೀಗಾಗಿ, ಇಂದಿನ ಮಾತುಕತೆಯೂ ವಿಫಲವಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ರೈತರು ಬೆಳೆದ ಬೆಲೆಗೆ ಕನಿಷ್ಠ ಬೆಂಬಲ ಬೆಲೆ ನೀಡುವ ವಿಚಾರದಲ್ಲಿ ಸರ್ಕಾರವು ಕಾನೂನಿನ ಖಾತರಿ ನೀಡುವ ಬಗ್ಗೆ ಮಾತುಕತೆ ನಡೆಯಬೇಕಿದೆ. ಆದರೆ, ಸರ್ಕಾರ ಇದನ್ನು ನಿರ್ಲಕ್ಷ್ಯ ಮಾಡುತ್ತಿದ್ದು, ಉಳಿದ ವಿಚಾರಗಳ ಬಗ್ಗೆ ಮಾತನಾಡುತ್ತಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

ಕೃಷಿ ತಿದ್ದುಪಡಿ ಕಾಯ್ದೆ ರದ್ದು ಮಾಡುವವರೆಗೂ ನಮ್ಮ ಪ್ರತಿಭಟನೆ ನಿಲ್ಲದು ಎಂದು ರೈತ ಸಂಘಟನೆಗಳು ಹೇಳಿವೆ. ಆದರೆ, ಸರ್ಕಾರ ಯಾವುದೇ ಕಾರಣಕ್ಕೂ ನಾವು ಕೃಷಿ ತಿದ್ದುಪಡಿ ಕಾಯ್ದೆ ರದ್ದು ಮಾಡುವುದಿಲ್ಲ. ನೀವು ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ಗೆ ಹೋಗಬಹುದು ಎಂದು ಕಡ್ಡಿಮುರಿದಂತೆ ಹೇಳಿದೆ. ಇದರಿಂದ ರೈತರು ಮತ್ತೆ ಕೇಂದ್ರದ ನಡುವೆ ನಡೆಯುತ್ತಿರುವ ಸಮರ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆ ಇದೆ.

ಈ ಮಧ್ಯೆ, ಸುಪ್ರೀಂಕೋರ್ಟ್​ ನೇಮಿಸಿರುವ ಸಮಿತಿಯು ವರದಿ ಸಲ್ಲಿಸುವವರೆಗೂ ಕೃಷಿ ಕಾಯ್ದೆಗಳನ್ನು ಜಾರಿ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ರೈತರಿಗೆ ಭರವಸೆ ನೀಡಿದೆ ಎಂದು ಮೂಲಗಳು ತಿಳಿವೆ. ಆದರೆ, ಈ ಭರವಸೆಗಳಿಗೆ ಸುಪ್ರೀಂಕೋರ್ಟ್​ ಸೊಪ್ಪು ಹಾಕಿಲ್ಲ.

ಇದು ರೈತರ ಪ್ರತಿಭಟನೆಯಲ್ಲ, ಕಾಂಗ್ರೆಸ್ ಪ್ರತಿಭಟನೆ: ಸಿ.ಟಿ.ರವಿ ವಾಗ್ದಾಳಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ