Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ನಿಮಿಷ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ: ಆಂಧ್ರ ಪ್ರದೇಶದ ಚಿತ್ತೂರಿನ ಆಸ್ಪತ್ರೆಯಲ್ಲಿ 11 ಕೊವಿಡ್​ ರೋಗಿಗಳ ಸಾವು

ಆಂಧ್ರ ಪ್ರದೇಶದ ಚಿತ್ತೂರಿನ ಸರ್ಕಾರಿ ಶ್ರೀ ವೆಂಕಟೇಶ್ವರ ರಾಮನಾರಾಯಣ್ ರುಯಿಯಾ ಆಸ್ಪತ್ರೆಯಲ್ಲಿ (ಎಸ್‌ವಿಆರ್​ಆರ್​) ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವುಂಟಾದ ಕಾರಣದಿಂದಾಗಿ, 11 ಜನ ಕೋವಿಡ್ -19 ರೋಗಿಗಳು ಸಾವನ್ನಪ್ಪಿದ್ದಾರೆ.

ಐದು ನಿಮಿಷ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ: ಆಂಧ್ರ ಪ್ರದೇಶದ ಚಿತ್ತೂರಿನ ಆಸ್ಪತ್ರೆಯಲ್ಲಿ 11 ಕೊವಿಡ್​ ರೋಗಿಗಳ ಸಾವು
Follow us
ಡಾ. ಭಾಸ್ಕರ ಹೆಗಡೆ
| Updated By: Skanda

Updated on: May 11, 2021 | 10:24 AM

ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಕಾರಣದಿಂದಾಗಿ, ಸೋಮವಾರ ಸಂಜೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಸರ್ಕಾರಿ ಶ್ರೀ ವೆಂಕಟೇಶ್ವರ ರಾಮನಾರಾಯಣ್ ರುಯಿಯಾ ಆಸ್ಪತ್ರೆಯಲ್ಲಿ (ಎಸ್‌ವಿಆರ್ಆರ್) 11 ಜನ ಕೊವಿಡ್ -19 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿತ್ತೂರು ಜಿಲ್ಲಾಧಿಕಾರಿ ಎಂ.ಹರಿನಾರಾಯಣನ್ ಈ ಕುರಿತು ಮಾತನಾಡಿ, ತಮಿಳುನಾಡಿನ ಶ್ರೀಪೆರುಂಬುದೂರಿನಿಂದ ಎಸ್‌ವಿಆರ್‌ಆರ್ ಆಸ್ಪತ್ರೆಗೆ ಆಮ್ಲಜನಕ ಟ್ಯಾಂಕರ್ ಬರಲು ವಿಳಂಬವಾಗಿತ್ತು. ಸುಮಾರು 5-10 ನಿಮಿಷಗಳ ಕಾಲ ಆಮ್ಲಜನಕದ ಪೂರೈಕೆಯಲ್ಲಿ ಅಡ್ಡಿ ಉಂಟಾಗಿದೆ. ದುರಾದೃಷ್ಟ, ಆ ಐದು ನಿಮಷದಲ್ಲಿ 11 ಜನರಿಗೆ ಆಮ್ಲಜನಕದ ಅತ್ಯವಶ್ಯಕತೆ ಇತ್ತು ಎಂದಿದ್ದಾರೆ.

ಆಸ್ಪತ್ರೆಗೆ ಟ್ಯಾಂಕರ್ ಬಂದ ಕೂಡಲೇ, ಆಮ್ಲಜನಕದ ಪೂರೈಕೆಯನ್ನು ಸರಿಪಡಿಸಲಾಯಿತು. ಆದರೆ ಆ ಹೊತ್ತಿಗೆ, ಕೊವಿಡ್ -19 ಗೆ ಚಿಕಿತ್ಸೆ ಪಡೆಯುತ್ತಿದ್ದ 11 ಜನರು ಉಸಿರುಕಟ್ಟುವಿಕೆಯಿಂದ ಸಾವನ್ನಪ್ಪಿದರು. ಆಮ್ಲಜನಕದ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಆಗದಿದ್ದರೆ ನಾವು ಪ್ರಾಣಹಾನಿಯನ್ನು ತಡೆಯಬಹುದು, ಎಂದು ಅವರು ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಸುಮಾರು 1,000 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಆಮ್ಲಜನಕದ ಪೂರೈಕೆಯಲ್ಲಿನ ಅಡ್ಡಿ ಹಲವಾರು ರೋಗಿಗಳಿಗೆ ತೀವ್ರ ಉಸಿರಾಟದ ತೊಂದರೆಯನ್ನುಂಟುಮಾಡಿದೆ. ಕಾರ್ಡಿಯೋ-ಪಲ್ಮನರಿ ಪುನರುಜ್ಜೀವನ (ಸಿಪಿಆರ್) ಮತ್ತು ಆಮ್ಲಜನಕ ಕಂಪ್ರೆಸರ್​ಗಳನ್ನು ಉಪಯೋಗಿಸುವ ಮೂಲಕ ವೈದ್ಯರು ಕೆಲವು ರೋಗಿಗಳ ಜೀವವನ್ನು ಉಳಿಸಬಹುದು.

ಇದನ್ನೂ ಓದಿ: 

ವೈದ್ಯಕೀಯ ಆಮ್ಲಜನಕ ಕೊರತೆ ನಿಭಾಯಿಸಲು ಕೇಂದ್ರ ಸರ್ಕಾರ ಏಪ್ರಿಲ್ ಮೊದಲ ವಾರದಲ್ಲೇ ಕಾರ್ಯೋನ್ಮುಖಗೊಂಡಿತ್ತು

ಆಮ್ಲಜನಕ ಕೊರತೆ ನೀಗಿಸಲು ಆಕ್ಸಿಜನ್ ಪ್ಲಾಂಟ್ ಸಿದ್ಧಪಡಿಸಿದ ಚಾಮರಾಜನಗರ ಜಿಲ್ಲಾಡಳಿತ

(11 Covid patients died in five minutes due to shortage of Oxygen in SVRR Hospital Chittoor Andhra Pradesh)

ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ