AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ನಿಮಿಷ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ: ಆಂಧ್ರ ಪ್ರದೇಶದ ಚಿತ್ತೂರಿನ ಆಸ್ಪತ್ರೆಯಲ್ಲಿ 11 ಕೊವಿಡ್​ ರೋಗಿಗಳ ಸಾವು

ಆಂಧ್ರ ಪ್ರದೇಶದ ಚಿತ್ತೂರಿನ ಸರ್ಕಾರಿ ಶ್ರೀ ವೆಂಕಟೇಶ್ವರ ರಾಮನಾರಾಯಣ್ ರುಯಿಯಾ ಆಸ್ಪತ್ರೆಯಲ್ಲಿ (ಎಸ್‌ವಿಆರ್​ಆರ್​) ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವುಂಟಾದ ಕಾರಣದಿಂದಾಗಿ, 11 ಜನ ಕೋವಿಡ್ -19 ರೋಗಿಗಳು ಸಾವನ್ನಪ್ಪಿದ್ದಾರೆ.

ಐದು ನಿಮಿಷ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ: ಆಂಧ್ರ ಪ್ರದೇಶದ ಚಿತ್ತೂರಿನ ಆಸ್ಪತ್ರೆಯಲ್ಲಿ 11 ಕೊವಿಡ್​ ರೋಗಿಗಳ ಸಾವು
ಡಾ. ಭಾಸ್ಕರ ಹೆಗಡೆ
| Edited By: |

Updated on: May 11, 2021 | 10:24 AM

Share

ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಕಾರಣದಿಂದಾಗಿ, ಸೋಮವಾರ ಸಂಜೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಸರ್ಕಾರಿ ಶ್ರೀ ವೆಂಕಟೇಶ್ವರ ರಾಮನಾರಾಯಣ್ ರುಯಿಯಾ ಆಸ್ಪತ್ರೆಯಲ್ಲಿ (ಎಸ್‌ವಿಆರ್ಆರ್) 11 ಜನ ಕೊವಿಡ್ -19 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿತ್ತೂರು ಜಿಲ್ಲಾಧಿಕಾರಿ ಎಂ.ಹರಿನಾರಾಯಣನ್ ಈ ಕುರಿತು ಮಾತನಾಡಿ, ತಮಿಳುನಾಡಿನ ಶ್ರೀಪೆರುಂಬುದೂರಿನಿಂದ ಎಸ್‌ವಿಆರ್‌ಆರ್ ಆಸ್ಪತ್ರೆಗೆ ಆಮ್ಲಜನಕ ಟ್ಯಾಂಕರ್ ಬರಲು ವಿಳಂಬವಾಗಿತ್ತು. ಸುಮಾರು 5-10 ನಿಮಿಷಗಳ ಕಾಲ ಆಮ್ಲಜನಕದ ಪೂರೈಕೆಯಲ್ಲಿ ಅಡ್ಡಿ ಉಂಟಾಗಿದೆ. ದುರಾದೃಷ್ಟ, ಆ ಐದು ನಿಮಷದಲ್ಲಿ 11 ಜನರಿಗೆ ಆಮ್ಲಜನಕದ ಅತ್ಯವಶ್ಯಕತೆ ಇತ್ತು ಎಂದಿದ್ದಾರೆ.

ಆಸ್ಪತ್ರೆಗೆ ಟ್ಯಾಂಕರ್ ಬಂದ ಕೂಡಲೇ, ಆಮ್ಲಜನಕದ ಪೂರೈಕೆಯನ್ನು ಸರಿಪಡಿಸಲಾಯಿತು. ಆದರೆ ಆ ಹೊತ್ತಿಗೆ, ಕೊವಿಡ್ -19 ಗೆ ಚಿಕಿತ್ಸೆ ಪಡೆಯುತ್ತಿದ್ದ 11 ಜನರು ಉಸಿರುಕಟ್ಟುವಿಕೆಯಿಂದ ಸಾವನ್ನಪ್ಪಿದರು. ಆಮ್ಲಜನಕದ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಆಗದಿದ್ದರೆ ನಾವು ಪ್ರಾಣಹಾನಿಯನ್ನು ತಡೆಯಬಹುದು, ಎಂದು ಅವರು ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಸುಮಾರು 1,000 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಆಮ್ಲಜನಕದ ಪೂರೈಕೆಯಲ್ಲಿನ ಅಡ್ಡಿ ಹಲವಾರು ರೋಗಿಗಳಿಗೆ ತೀವ್ರ ಉಸಿರಾಟದ ತೊಂದರೆಯನ್ನುಂಟುಮಾಡಿದೆ. ಕಾರ್ಡಿಯೋ-ಪಲ್ಮನರಿ ಪುನರುಜ್ಜೀವನ (ಸಿಪಿಆರ್) ಮತ್ತು ಆಮ್ಲಜನಕ ಕಂಪ್ರೆಸರ್​ಗಳನ್ನು ಉಪಯೋಗಿಸುವ ಮೂಲಕ ವೈದ್ಯರು ಕೆಲವು ರೋಗಿಗಳ ಜೀವವನ್ನು ಉಳಿಸಬಹುದು.

ಇದನ್ನೂ ಓದಿ: 

ವೈದ್ಯಕೀಯ ಆಮ್ಲಜನಕ ಕೊರತೆ ನಿಭಾಯಿಸಲು ಕೇಂದ್ರ ಸರ್ಕಾರ ಏಪ್ರಿಲ್ ಮೊದಲ ವಾರದಲ್ಲೇ ಕಾರ್ಯೋನ್ಮುಖಗೊಂಡಿತ್ತು

ಆಮ್ಲಜನಕ ಕೊರತೆ ನೀಗಿಸಲು ಆಕ್ಸಿಜನ್ ಪ್ಲಾಂಟ್ ಸಿದ್ಧಪಡಿಸಿದ ಚಾಮರಾಜನಗರ ಜಿಲ್ಲಾಡಳಿತ

(11 Covid patients died in five minutes due to shortage of Oxygen in SVRR Hospital Chittoor Andhra Pradesh)

Follow Us
Dr Bhaskar Hegde
Dr Bhaskar Hegde

ಟಿವಿ9 ಡಿಜಿಟಲ್​ ಸಂಪಾದಕ. 28 ವರ್ಷಗಳಿಂದ ಇಂಗ್ಲಿಷ್ ಮುದ್ರಣ ಮಾಧ್ಯಮ​ ಮತ್ತು ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಸುದ್ದಿ, ದೀರ್ಘ ಲೇಖನ, ನುಡಿಚಿತ್ರ, ವಿಶ್ಲೇಷಣೆ, ಅಂಕಣ ಸ್ಕೂಪ್​ ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಎರಡು ಕಥಾ ಸಂಕಲನಗಳ ಪ್ರಕಟಣೆ. ಸಾರ್ವಜನಿಕ ನೀತಿ ಮತ್ತು ಆಡಳಿತಕ್ಕೆ ಸಂಬಂಧಿಸಿದ ವಿಷಯದಲ್ಲಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್​ಡಿ ಪದವಿ. ಹಿಂದೂಸ್ತಾನಿ ಸಂಗೀತ, ಕ್ರಿಕೆಟ್​, ತತ್ವಶಾಸ್ತ್ರ ಮತ್ತು ಕಾನೂನಿನ ವಿಷಯದ ತೀವ್ರ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!