AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂಡಮಾರುತಗಳಿಂದ ನಲುಗಿದ ತಮಿಳುನಾಡಿಗೆ ಅಮ್ಮಾ ಕ್ಯಾಂಟೀನ್ ಆಸರೆ

ಪ್ರವಾಹ ಪೀಡಿತ ಪ್ರದೇಶಗಳಲ್ಲಿರುವ ಅಮ್ಮಾ ಕ್ಯಾಂಟೀನ್​ಗಳಲ್ಲಿ ಉಚಿತ ಆಹಾರ ವಿತರಿಸುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿತ್ತು. ಘೋಷಿಸಿದ 12 ಘಂಟೆಗಳಲ್ಲಿ ಚೆನ್ನೈನಲ್ಲಿ ಇಂದು ಬೆಳಿಗ್ಗೆ 11 ಲಕ್ಷ ಜನರು ಉಪಹಾರ ಮಾಡಿದ್ದರು.

ಚಂಡಮಾರುತಗಳಿಂದ ನಲುಗಿದ ತಮಿಳುನಾಡಿಗೆ ಅಮ್ಮಾ ಕ್ಯಾಂಟೀನ್ ಆಸರೆ
ಅಮ್ಮಾ ಕ್ಯಾಂಟೀನ್
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 06, 2020 | 7:08 PM

Share

ಚೆನ್ನೈ: ನಿವಾರ್ ಮತ್ತು ಬುವೇರಿ ಚಂಡಮಾರುತಗಳಿಗೆ ನಲುಗಿರುವ ತಮಿಳುನಾಡಿನ ಜನರಿಗೆ ‘ಅಮ್ಮಾ ಕ್ಯಾಂಟೀನ್’ ವರದಾನವಾಗಿ ಪರಿಣಮಿಸಿದೆ. ಒಂದರ ಹಿಂದೊಂದರಂತೆ ಅಬ್ಬರಿಸಿದ ಚಂಡಮಾರುತಗಳು ತಮಿಳುನಾಡಿನಲ್ಲಿ ಅಪಾರ ಹಾನಿ ಉಂಟುಮಾಡಿದ್ದವು.

ಪ್ರವಾಹ ಪೀಡಿತ ಪ್ರದೇಶಗಳಲ್ಲಿರುವ ಅಮ್ಮಾ ಕ್ಯಾಂಟೀನ್​ಗಳಲ್ಲಿ ಉಚಿತ ಆಹಾರ ವಿತರಿಸುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿತ್ತು. ಘೋಷಿಸಿದ 12 ಘಂಟೆಗಳಲ್ಲಿ ಚೆನ್ನೈನಲ್ಲಿ ಇಂದು ಬೆಳಿಗ್ಗೆ 11 ಲಕ್ಷ ಜನರು ಉಪಹಾರ ಮಾಡಿರುವುದಾಗಿ ಸಚಿವ ಡಿ.ಜಯಕುಮಾರ್ ತಿಳಿಸಿದ್ದಾರೆ.

ನಿವಾರ್ ಮತ್ತು ಬುವೇರಿ ಚಂಡಮಾರುತಗಳು ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಹಾನಿಯುಂಟು ಮಾಡಿವೆ. ನಿವಾರ್ ಚಂಡಮಾರುತದ ವೇಳೆ 2.50 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹ ಪೀಡಿತ ಪ್ರದೇಶಗಳಿಂದ ಸ್ಥಳಾಂತರವಾಗಿದ್ದರು. 100ಕ್ಕೂ ಹೆಚ್ಚು ಮರಗಳು ಧರೆಗುರುಳಿದ್ದವು. ಚಂಡಮಾರುತದಿಂದ ಆದ ಹಾನಿಯ ಬಗ್ಗೆ ಪ್ರಧಾನಿ ಮೋದಿ ತಮಿಳುನಾಡು ಸಿಎಂ ಕೆ ಪಳನಿಸ್ವಾಮಿಯರಿಗೆ ಕರೆ ಮಾಡಿ ವಿವರ ಪಡೆದಿದ್ದರು.

ಅಲ್ಲದೇ ಬುವೇರಿ ಚಂಡಮಾರುತವೂ ತಮಿಳುನಾಡನ್ನು ಹೈರಾಣು ಮಾಡಿತ್ತು. ದಕ್ಷಿಣ ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. 217 ಪುನರ್ವಸತಿ ಕೇಂದ್ರಗಳಲ್ಲಿ 15,840 ಜನರಿಗೆ ವಸತಿ ಕಲ್ಪಿಸಲಾಗಿತ್ತು.

ಅಮ್ಮಾ ಕ್ಯಾಂಟೀನ್​ನಲ್ಲಿ ಕೊರೊನಾ ಲಾಕ್​ಡೌನ್ ಸಮಯದಲ್ಲೂ ಉಚಿತ ಆಹಾರ ವಿತರಿಸಲಾಗಿತ್ತು ಎಂದು ಇಲ್ಲಿ ಸ್ಮರಿಸಬಹುದು.

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್