AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂಡಮಾರುತಗಳಿಂದ ನಲುಗಿದ ತಮಿಳುನಾಡಿಗೆ ಅಮ್ಮಾ ಕ್ಯಾಂಟೀನ್ ಆಸರೆ

ಪ್ರವಾಹ ಪೀಡಿತ ಪ್ರದೇಶಗಳಲ್ಲಿರುವ ಅಮ್ಮಾ ಕ್ಯಾಂಟೀನ್​ಗಳಲ್ಲಿ ಉಚಿತ ಆಹಾರ ವಿತರಿಸುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿತ್ತು. ಘೋಷಿಸಿದ 12 ಘಂಟೆಗಳಲ್ಲಿ ಚೆನ್ನೈನಲ್ಲಿ ಇಂದು ಬೆಳಿಗ್ಗೆ 11 ಲಕ್ಷ ಜನರು ಉಪಹಾರ ಮಾಡಿದ್ದರು.

ಚಂಡಮಾರುತಗಳಿಂದ ನಲುಗಿದ ತಮಿಳುನಾಡಿಗೆ ಅಮ್ಮಾ ಕ್ಯಾಂಟೀನ್ ಆಸರೆ
ಅಮ್ಮಾ ಕ್ಯಾಂಟೀನ್
guruganesh bhat
| Edited By: |

Updated on: Dec 06, 2020 | 7:08 PM

Share

ಚೆನ್ನೈ: ನಿವಾರ್ ಮತ್ತು ಬುವೇರಿ ಚಂಡಮಾರುತಗಳಿಗೆ ನಲುಗಿರುವ ತಮಿಳುನಾಡಿನ ಜನರಿಗೆ ‘ಅಮ್ಮಾ ಕ್ಯಾಂಟೀನ್’ ವರದಾನವಾಗಿ ಪರಿಣಮಿಸಿದೆ. ಒಂದರ ಹಿಂದೊಂದರಂತೆ ಅಬ್ಬರಿಸಿದ ಚಂಡಮಾರುತಗಳು ತಮಿಳುನಾಡಿನಲ್ಲಿ ಅಪಾರ ಹಾನಿ ಉಂಟುಮಾಡಿದ್ದವು.

ಪ್ರವಾಹ ಪೀಡಿತ ಪ್ರದೇಶಗಳಲ್ಲಿರುವ ಅಮ್ಮಾ ಕ್ಯಾಂಟೀನ್​ಗಳಲ್ಲಿ ಉಚಿತ ಆಹಾರ ವಿತರಿಸುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿತ್ತು. ಘೋಷಿಸಿದ 12 ಘಂಟೆಗಳಲ್ಲಿ ಚೆನ್ನೈನಲ್ಲಿ ಇಂದು ಬೆಳಿಗ್ಗೆ 11 ಲಕ್ಷ ಜನರು ಉಪಹಾರ ಮಾಡಿರುವುದಾಗಿ ಸಚಿವ ಡಿ.ಜಯಕುಮಾರ್ ತಿಳಿಸಿದ್ದಾರೆ.

ನಿವಾರ್ ಮತ್ತು ಬುವೇರಿ ಚಂಡಮಾರುತಗಳು ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಹಾನಿಯುಂಟು ಮಾಡಿವೆ. ನಿವಾರ್ ಚಂಡಮಾರುತದ ವೇಳೆ 2.50 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹ ಪೀಡಿತ ಪ್ರದೇಶಗಳಿಂದ ಸ್ಥಳಾಂತರವಾಗಿದ್ದರು. 100ಕ್ಕೂ ಹೆಚ್ಚು ಮರಗಳು ಧರೆಗುರುಳಿದ್ದವು. ಚಂಡಮಾರುತದಿಂದ ಆದ ಹಾನಿಯ ಬಗ್ಗೆ ಪ್ರಧಾನಿ ಮೋದಿ ತಮಿಳುನಾಡು ಸಿಎಂ ಕೆ ಪಳನಿಸ್ವಾಮಿಯರಿಗೆ ಕರೆ ಮಾಡಿ ವಿವರ ಪಡೆದಿದ್ದರು.

ಅಲ್ಲದೇ ಬುವೇರಿ ಚಂಡಮಾರುತವೂ ತಮಿಳುನಾಡನ್ನು ಹೈರಾಣು ಮಾಡಿತ್ತು. ದಕ್ಷಿಣ ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. 217 ಪುನರ್ವಸತಿ ಕೇಂದ್ರಗಳಲ್ಲಿ 15,840 ಜನರಿಗೆ ವಸತಿ ಕಲ್ಪಿಸಲಾಗಿತ್ತು.

ಅಮ್ಮಾ ಕ್ಯಾಂಟೀನ್​ನಲ್ಲಿ ಕೊರೊನಾ ಲಾಕ್​ಡೌನ್ ಸಮಯದಲ್ಲೂ ಉಚಿತ ಆಹಾರ ವಿತರಿಸಲಾಗಿತ್ತು ಎಂದು ಇಲ್ಲಿ ಸ್ಮರಿಸಬಹುದು.

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ