AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​​ನಲ್ಲಿ ಚಾರಣಕ್ಕೆ ಹೋದ 12 ಮಂದಿ ಸಾವು; ಇನ್ನೂ ಹಲವರು ನಾಪತ್ತೆ

ಸಮುದ್ರಮಟ್ಟದಿಂದ 16,500 ಅಡಿ ಎತ್ತರದಲ್ಲಿರುವ ಲಮ್​ಖಗಾ ಪಾಸ್​​ನಲ್ಲಿ ನಿನ್ನೆ ಐಎಎಫ್​​ ಐದು ಮೃತದೇಹಗಳನ್ನು ಪತ್ತೆ ಮಾಡಿತ್ತು. ಹಾಗೇ ಬದುಕುಳಿದವರನ್ನು ರಕ್ಷಿಸಿತ್ತು. ಇದು 17 ಟ್ರೆಕ್ಕರ್ಸ್​​ ಇರುವ ಗುಂಪಾಗಿದ್ದು, ದಾರಿತಪ್ಪಿಸಿಕೊಂಡಿದ್ದರು.

ಉತ್ತರಾಖಂಡ್​​ನಲ್ಲಿ ಚಾರಣಕ್ಕೆ ಹೋದ 12 ಮಂದಿ ಸಾವು; ಇನ್ನೂ ಹಲವರು ನಾಪತ್ತೆ
ಉತ್ತರಾಖಂಡ್​ ಹಿಮಪಾತದ ದೃಶ್ಯ
TV9 Web
| Edited By: |

Updated on:Oct 23, 2021 | 11:15 AM

Share

ಡೆಹ್ರಾಡೂನ್​: ಉತ್ತರಾಖಂಡ್​​ನಲ್ಲಿ ವಿಪರೀತ ಮಳೆ ಸುರಿಯುತ್ತಿದೆ. ಈ ಮಧ್ಯೆ ಒಟ್ಟು 12 ಮಂದಿ ಚಾರಣಿಗರ ಮೃತದೇಹ ಪತ್ತೆಯಾಗಿದ್ದು, ಇನ್ನೂ ಹಲವರು ನಾಪತ್ತೆಯಾಗಿದ್ದಾರೆ. ಅವರಿಗೆ ಭಾರತೀಯ ವಾಯುಪಡೆ (IAF) ಹುಡುಕಾಟ ನಡೆಸುತ್ತಿದೆ. ಉತ್ತರಾಖಂಡ್​​ನ ಗುಡ್ಡಗಾಡು ಪ್ರದೇಶಗಳಲ್ಲಿ ಹುಡುಕಾಟ ನಡೆಯುತ್ತಿದ್ದು, ಟ್ರೆಕ್ಕಿಂಗ್​ ಹೋಗಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆಗೆ ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ.  ಈಗ ಸಿಕ್ಕಿರುವ 12 ಮೃತದೇಹಗಳಲ್ಲಿ ಮಹಿಳೆಯೊಬ್ಬರ ಶವವೂ ಇದ್ದು, ಇವರು ದೆಹಲಿಯವರು ಎನ್ನಲಾಗಿದೆ. ಹಾಗೇ 9 ಮಂದಿ ಪಶ್ಚಿಮ ಬಂಗಾಳದವರಾಗಿದ್ದಾರೆ. ಇನ್ನಿಬ್ಬರು ಎಲ್ಲಿಯವರು ಎಂಬ ಮಾಹಿತಿ ಲಭ್ಯವಾಗಿಲ್ಲ.  

ಉತ್ತರಾಖಂಡ ಡಿಜಿಪಿ ಅಶೋಕ್​ ಕುಮಾರ್​ ಈ ಬಗ್ಗೆ ಮಾಹಿತಿ ನೀಡಿದ್ದು, ಇಲ್ಲಿ ಚಾರಣ ಗುಂಪುಗುಂಪಾಗಿ ನಡೆಯುತ್ತದೆ. 11 ಚಾರಣಿಗರನ್ನೊಳಗೊಂಡ ಒಂದು ಗುಂಪು ಹರ್ಸ್ಲಿಯಿಂದ ನಾಪತ್ತೆಯಾಗಿತ್ತು. ಇವರಲ್ಲಿ ಏಳು ಮಂದಿ ಮೃತಪಟ್ಟಿದ್ದು, ಎಲ್ಲರ ಮೃತದೇಹಗಳೂ ಪತ್ತೆಯಾಗಿವೆ. ಇಬ್ಬರನ್ನು ರಕ್ಷಿಸಲಾಗಿದೆ ಮತ್ತು ಇಬ್ಬರು ಇನ್ನೂ ಸಿಕ್ಕಿಲ್ಲ. ಹಾಗೇ, ಇನ್ನೊಂದು 11 ಚಾರಣಿಗರನ್ನೊಳಗೊಂಡ ಗುಂಪು ಕೂಡ ಟ್ರೆಕಿಂಗ್​​ಗೆ ಹೋಗಿತ್ತು. ಅವರು ಲಮಖಾಗ ಪಾಸ್​ ಬಳಿ ನಾಪತ್ತೆಯಾಗಿದ್ದರು. ಅವರಲ್ಲಿ 5 ಮಂದಿ ಮೃತಪಟ್ಟಿದ್ದು, ಎಲ್ಲರ ಶವಗಳೂ ಪತ್ತೆಯಾಗಿವೆ ಎಂದು ಮಾಹಿತಿ ನೀಡಿದ್ದಾರೆ. ಎರಡೂ ಗುಂಪಿನವರೂ ಅಕ್ಟೋಬರ್​ 11ರಂದು ಚಾರಣ ಶುರು ಮಾಡಿದ್ದರು ಎಂದೂ ಮಾಹಿತಿ ನೀಡಿದ್ದಾರೆ.

ಸಮುದ್ರಮಟ್ಟದಿಂದ 16,500 ಅಡಿ ಎತ್ತರದಲ್ಲಿರುವ ಲಮ್​ಖಗಾ ಪಾಸ್​​ನಲ್ಲಿ ನಿನ್ನೆ ಐಎಎಫ್​​ ಐದು ಮೃತದೇಹಗಳನ್ನು ಪತ್ತೆ ಮಾಡಿತ್ತು. ಹಾಗೇ ಬದುಕುಳಿದವರನ್ನು ರಕ್ಷಿಸಿತ್ತು. ಇದು 17 ಟ್ರೆಕ್ಕರ್ಸ್​​ ಇರುವ ಗುಂಪಾಗಿದ್ದು, ದಾರಿತಪ್ಪಿಸಿಕೊಂಡಿದ್ದರು. ಭಾರಿ ಹಿಮಪಾತ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಎಲ್ಲಿಯೂ ಹೋಗಲಾಗದೆ ಪರದಾಡುತ್ತಿದ್ದರು. ಸದ್ಯಕ್ಕಂತೂ ಉತ್ತರಾಖಂಡ್​​​ನಲ್ಲಿ ಹಲವು ಕಡೆಗಳಲ್ಲಿ ಹೀಗೆ ಚಾರಣಿಗರು ಸಿಲುಕಿದ್ದು, ಅವರ ರಕ್ಷಣೆಗಾಗಿ ಐಎಎಫ್​ ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.

ಇದನ್ನೂ ಓದಿ: ಅನ್ಯ ಕೋಮಿನ ಯುವತಿ ಜತೆಗೆ ಯುವಕನ ಪ್ರೀತಿ ಪ್ರೇಮ; ಪೋಷಕರು ವಾರ್ನ್ ಮಾಡಿದ ಬಳಿಕ ಯುವಕ ನಾಪತ್ತೆ

Smuggling: ಪುರಾತನ ವಿಗ್ರಹ ಜಪಾನ್​ಗೆ ಸಾಗಿಸುವ ಯತ್ನ, 1 ಕೆಜಿ ಚಿನ್ನದ ಬಿಸ್ಕೆಟ್​ಗಳು ವಶಕ್ಕೆ, ಪ್ರಯಾಣಿಕನ ಬಾಯೊಳಗೆ ಚಿನ್ನದ ತುಣುಕುಗಳು!

Published On - 11:14 am, Sat, 23 October 21

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ