AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಭಾಗಪತ್‌ನಲ್ಲಿ ಭೀಕರ ರಸ್ತೆ ಅಪಘಾತ; ಪಿಕ್‌ಅಪ್ ಪಲ್ಟಿಯಾಗಿ 12 ಜನ ಸಾವು

ಪಿಕಪ್ ವಾಹನ ಡಿವೈಡರ್​ಗೆ ಡಿಕ್ಕಿಯಾಗಿ 12 ಜನ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಭಾಗಪತ್​ ಜಿಲ್ಲೆಯಲ್ಲಿ ನಡೆದಿದೆ. ಈ ದುರಂತದಲ್ಲಿ 22 ಜನರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ದೇವಸ್ಥಾನಕ್ಕೆ ಭೇಟಿ ನೀಡಿ ವಾಪಾಸ್ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ರಾಜಸ್ಥಾನದ ಗೋಗಾಮೆಡಿಯಲ್ಲಿರೋ ಬಗಡ್ ಧಾಮಕ್ಕೆ ತೆರಳಿದ್ದ ಜನರು ಉತ್ತರ ಪ್ರದೇಶದ ಬದಾಯು ಜಿಲ್ಲೆಗೆ ವಾಪಾಸ್​ ಬರುತ್ತಿದ್ದಾಗ ಅಪಘಾತ ನಡೆದಿದೆ.

ಉತ್ತರ ಪ್ರದೇಶದ ಭಾಗಪತ್‌ನಲ್ಲಿ ಭೀಕರ ರಸ್ತೆ ಅಪಘಾತ; ಪಿಕ್‌ಅಪ್ ಪಲ್ಟಿಯಾಗಿ 12 ಜನ ಸಾವು
ಭಾಗಪತ್‌ನಲ್ಲಿ ಭೀಕರ ರಸ್ತೆ ಅಪಘಾತImage Credit source: x
ಸುಷ್ಮಾ ಚಕ್ರೆ
|

Updated on: Sep 07, 2026 | 6:10 PM

Share

ಭಾಗಪತ್, ಸೆಪ್ಟೆಂಬರ್ 7: ಉತ್ತರ ಪ್ರದೇಶದ ಭಾಗಪತ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಜಸ್ಥಾನದಿಂದ ಬುಡೌನ್‌ಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಪಿಕ್‌ಅಪ್ ವಾಹನವೊಂದು ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 12 ಜನರು ಮೃತಪಟ್ಟಿದ್ದಾರೆ ಮತ್ತು 22 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆ ಹಚ್ಚುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.

ಖೇಕ್ರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಮಧ್ಯರಾತ್ರಿ ಸುಮಾರು 12.30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಸುಮಾರು 32 ಪ್ರಯಾಣಿಕರಿದ್ದ ವಾಹನವು ಪಲ್ಟಿಯಾದ ಮಾಹಿತಿ ತಿಳಿಯುತ್ತಿದ್ದಂತೆಯೇ ಆ್ಯಂಬುಲೆನ್ಸ್ ಮತ್ತು ಖೇಕ್ರಾ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತಕ್ಷಣವೇ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆ ಆರಂಭಿಸಿದರು. ಗಾಯಗೊಂಡವರನ್ನು ಖೇಕ್ರಾ ಮತ್ತು ಭಾಗಪತ್‌ನ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಹಾಗೂ ಭಾಗಪತ್ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಹಾಗೂ ವಿಶೇಷ ಚಿಕಿತ್ಸೆಗೆ ಉನ್ನತ ವೈದ್ಯಕೀಯ ಕೇಂದ್ರಗಳಿಗೆ ರವಾನಿಸಲಾಗಿದೆ.

ಇದನ್ನೂ ಓದಿ: ಅಡುಗೆ ಮಾಡದೆ ಡ್ಯಾನ್ಸ್ ಕ್ಲಾಸ್‌ಗೆ ಹೋಗುತ್ತೇನೆಂದ ಪತ್ನಿಗೆ ಮಕ್ಕಳ ಎದುರೇ ಇರಿದು ಕೊಂದ ಗಂಡ!

ಅಪಘಾತದ ವೇಳೆ ಹೆಚ್ಚಿನ ಪ್ರಯಾಣಿಕರು ನಿದ್ರೆಯಲ್ಲಿದ್ದರು. “ದಿಢೀರನೆ ಭಾರಿ ಸದ್ದು ಕೇಳಿಸಿತು ಮತ್ತು ವಾಹನ ಪಲ್ಟಿಯಾಯಿತು. ತಕ್ಷಣವೇ ಸ್ಥಳದಲ್ಲಿದ್ದವರ ಚೀರಾಟ ಮುಗಿಲು ಮುಟ್ಟಿತು” ಎಂದು ಗಾಯಗೊಂಡ ಪ್ರಯಾಣಿಕ ಕುಂವರ್ ಪಾಲ್ ಅಪಘಾತದ ಘಟನೆಯ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ