AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾದಲ್ಲಿ ಸಿಡಿಲು ಬಡಿದು 12 ಮಂದಿ ಸಾವು, 14 ಜನರಿಗೆ ಗಂಭೀರ ಗಾಯ

ಒಡಿಶಾದಲ್ಲಿ ಸಿಡಿಲು ಬಡಿದು 12 ಮಂದಿ ಸಾವನ್ನಪ್ಪಿದ್ದು, 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಡಿಲು ಬಡಿದು ಖುರ್ದಾ ಜಿಲ್ಲೆಯಲ್ಲಿ ನಾಲ್ವರು, ಬೋಲಂಗೀರ್‌ನಲ್ಲಿ ಇಬ್ಬರು ಮತ್ತು ಅಂಗುಲ್, ಬೌಧ್, ಜಗತ್‌ಸಿಂಗ್‌ಪುರ ಮತ್ತು ಧೆಂಕನಾಲ್‌ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವಳಿ ನಗರಗಳಾದ ಭುವನೇಶ್ವರ ಮತ್ತು ಕಟಕ್ ಸೇರಿದಂತೆ ಒಡಿಶಾದ ಕರಾವಳಿ ಪ್ರದೇಶದಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಭಾರೀ ಮಳೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಒಡಿಶಾದಲ್ಲಿ ಸಿಡಿಲು ಬಡಿದು 12 ಮಂದಿ ಸಾವು, 14 ಜನರಿಗೆ ಗಂಭೀರ ಗಾಯ
ಸಿಡಿಲು
ನಯನಾ ರಾಜೀವ್
|

Updated on:Sep 04, 2023 | 10:49 AM

Share

ಭುವನೇಶ್ವರ, ಸೆಪ್ಟೆಂಬರ್ 4: ಒಡಿಶಾದಲ್ಲಿ ಸಿಡಿಲು ಬಡಿದು 12 ಮಂದಿ ಸಾವನ್ನಪ್ಪಿದ್ದು, 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಡಿಲು ಬಡಿದು ಖುರ್ದಾ ಜಿಲ್ಲೆಯಲ್ಲಿ ನಾಲ್ವರು, ಬೋಲಂಗೀರ್‌ನಲ್ಲಿ ಇಬ್ಬರು ಮತ್ತು ಅಂಗುಲ್, ಬೌಧ್, ಜಗತ್‌ಸಿಂಗ್‌ಪುರ ಮತ್ತು ಧೆಂಕನಾಲ್‌ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವಳಿ ನಗರಗಳಾದ ಭುವನೇಶ್ವರ ಮತ್ತು ಕಟಕ್ ಸೇರಿದಂತೆ ಒಡಿಶಾದ ಕರಾವಳಿ ಪ್ರದೇಶದಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಭಾರೀ ಮಳೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಇದೇ ರೀತಿಯ ಪರಿಸ್ಥಿತಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಮುಂಗಾರು ಚುರುಕಾಗಿದೆ. ಅವಳಿ ನಗರಗಳಾದ ಭುವನೇಶ್ವರ ಮತ್ತು ಕಟಕ್‌ನಲ್ಲಿ ಮಧ್ಯಾಹ್ನದ 90 ನಿಮಿಷಗಳ ಕಾಲಾವಧಿಯಲ್ಲಿ ಕ್ರಮವಾಗಿ 126 ಮಿಮೀ ಮತ್ತು 95.8 ಮಿಮೀ ಮಳೆಯಾಗಿದೆ. ಗಜಪತಿ ಮತ್ತು ಕಂಧಮಾಲ್ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಎಂಟು ಜಾನುವಾರುಗಳು ಸಾವನ್ನಪ್ಪಿವೆ.

ಶನಿವಾರ ಕೇವಲ 2 ಗಂಟೆಗಳಲ್ಲಿ 61,000 ಬಾರಿ ಸಿಡಿಲು ಬಡಿದಿದೆ. ರಾಜಧಾನಿ ಭುವನೇಶ್ವರದಲ್ಲಿ ಅತಿ ಹೆಚ್ಚು ಸಿಡಿಲು ಸಂಭವಿಸಿದೆ ಎಂದು ವರದಿಯಾಗಿದೆ.ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರಾಜ್ಯದಲ್ಲಿ ಸೆಪ್ಟೆಂಬರ್ 7 ರವರೆಗೆ ತೀವ್ರ ಹವಾಮಾನ ಎಚ್ಚರಿಕೆ ನೀಡಿದೆ.

ಮತ್ತಷ್ಟು ಓದಿ: Karnataka Weather: ಮುಂದಿನ 3 ದಿನ ಕರ್ನಾಟಕದ 12 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಬಂಗಾಳಕೊಲ್ಲಿಯಲ್ಲಿನ ಸಕ್ರಿಯ ಚಂಡಮಾರುತವು ಮುಂದಿನ 48 ಗಂಟೆಗಳಲ್ಲಿ ಕಡಿಮೆ ಒತ್ತಡದ ಪ್ರದೇಶವಾಗಿ ಬದಲಾಗಬಹುದು ಮತ್ತು ಅದರ ಪ್ರಭಾವದಿಂದ, ಒಡಿಶಾದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.ಹೆಚ್ಚಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಹಳದಿ ಅಲರ್ಟ್ ನೀಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:48 am, Mon, 4 September 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ