ಒಡಿಶಾದಲ್ಲಿ ಸಿಡಿಲು ಬಡಿದು 12 ಮಂದಿ ಸಾವು, 14 ಜನರಿಗೆ ಗಂಭೀರ ಗಾಯ

ಒಡಿಶಾದಲ್ಲಿ ಸಿಡಿಲು ಬಡಿದು 12 ಮಂದಿ ಸಾವನ್ನಪ್ಪಿದ್ದು, 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಡಿಲು ಬಡಿದು ಖುರ್ದಾ ಜಿಲ್ಲೆಯಲ್ಲಿ ನಾಲ್ವರು, ಬೋಲಂಗೀರ್‌ನಲ್ಲಿ ಇಬ್ಬರು ಮತ್ತು ಅಂಗುಲ್, ಬೌಧ್, ಜಗತ್‌ಸಿಂಗ್‌ಪುರ ಮತ್ತು ಧೆಂಕನಾಲ್‌ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವಳಿ ನಗರಗಳಾದ ಭುವನೇಶ್ವರ ಮತ್ತು ಕಟಕ್ ಸೇರಿದಂತೆ ಒಡಿಶಾದ ಕರಾವಳಿ ಪ್ರದೇಶದಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಭಾರೀ ಮಳೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಒಡಿಶಾದಲ್ಲಿ ಸಿಡಿಲು ಬಡಿದು 12 ಮಂದಿ ಸಾವು, 14 ಜನರಿಗೆ ಗಂಭೀರ ಗಾಯ
ಸಿಡಿಲು

Updated on: Sep 04, 2023 | 10:49 AM

ಭುವನೇಶ್ವರ, ಸೆಪ್ಟೆಂಬರ್ 4: ಒಡಿಶಾದಲ್ಲಿ ಸಿಡಿಲು ಬಡಿದು 12 ಮಂದಿ ಸಾವನ್ನಪ್ಪಿದ್ದು, 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಡಿಲು ಬಡಿದು ಖುರ್ದಾ ಜಿಲ್ಲೆಯಲ್ಲಿ ನಾಲ್ವರು, ಬೋಲಂಗೀರ್‌ನಲ್ಲಿ ಇಬ್ಬರು ಮತ್ತು ಅಂಗುಲ್, ಬೌಧ್, ಜಗತ್‌ಸಿಂಗ್‌ಪುರ ಮತ್ತು ಧೆಂಕನಾಲ್‌ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವಳಿ ನಗರಗಳಾದ ಭುವನೇಶ್ವರ ಮತ್ತು ಕಟಕ್ ಸೇರಿದಂತೆ ಒಡಿಶಾದ ಕರಾವಳಿ ಪ್ರದೇಶದಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಭಾರೀ ಮಳೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಇದೇ ರೀತಿಯ ಪರಿಸ್ಥಿತಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಮುಂಗಾರು ಚುರುಕಾಗಿದೆ. ಅವಳಿ ನಗರಗಳಾದ ಭುವನೇಶ್ವರ ಮತ್ತು ಕಟಕ್‌ನಲ್ಲಿ ಮಧ್ಯಾಹ್ನದ 90 ನಿಮಿಷಗಳ ಕಾಲಾವಧಿಯಲ್ಲಿ ಕ್ರಮವಾಗಿ 126 ಮಿಮೀ ಮತ್ತು 95.8 ಮಿಮೀ ಮಳೆಯಾಗಿದೆ. ಗಜಪತಿ ಮತ್ತು ಕಂಧಮಾಲ್ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಎಂಟು ಜಾನುವಾರುಗಳು ಸಾವನ್ನಪ್ಪಿವೆ.

ಶನಿವಾರ ಕೇವಲ 2 ಗಂಟೆಗಳಲ್ಲಿ 61,000 ಬಾರಿ ಸಿಡಿಲು ಬಡಿದಿದೆ. ರಾಜಧಾನಿ ಭುವನೇಶ್ವರದಲ್ಲಿ ಅತಿ ಹೆಚ್ಚು ಸಿಡಿಲು ಸಂಭವಿಸಿದೆ ಎಂದು ವರದಿಯಾಗಿದೆ.ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರಾಜ್ಯದಲ್ಲಿ ಸೆಪ್ಟೆಂಬರ್ 7 ರವರೆಗೆ ತೀವ್ರ ಹವಾಮಾನ ಎಚ್ಚರಿಕೆ ನೀಡಿದೆ.

ಮತ್ತಷ್ಟು ಓದಿ: Karnataka Weather: ಮುಂದಿನ 3 ದಿನ ಕರ್ನಾಟಕದ 12 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಬಂಗಾಳಕೊಲ್ಲಿಯಲ್ಲಿನ ಸಕ್ರಿಯ ಚಂಡಮಾರುತವು ಮುಂದಿನ 48 ಗಂಟೆಗಳಲ್ಲಿ ಕಡಿಮೆ ಒತ್ತಡದ ಪ್ರದೇಶವಾಗಿ ಬದಲಾಗಬಹುದು ಮತ್ತು ಅದರ ಪ್ರಭಾವದಿಂದ, ಒಡಿಶಾದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.ಹೆಚ್ಚಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಹಳದಿ ಅಲರ್ಟ್ ನೀಡಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:48 am, Mon, 4 September 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us