AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಕಂದಮ್ಮಗಳಿಗೆ ಪೋಲಿಯೋ ಲಸಿಕೆ ಬದಲು ಸ್ಯಾನಿಟೈಸರ್ ಹನಿ ಹಾಕಿದ ಆರೋಗ್ಯ ಸಿಬ್ಬಂದಿ; ಮೂವರು ಅಮಾನತು

ನಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿದ ಸ್ಥಳದಲ್ಲಿ ಮೂವರು ಸಿಬ್ಬಂದಿ ಇ ದ್ದರು. ಮೊದಲು ಸ್ಯಾನಿಟೈಸರ್​ ಡ್ರಾಪ್​ ನೀಡಿದರು. ಆದರೆ ಅವರಿಗೆ ನಂತರ ಅದು ಗೊತ್ತಾದ ಕೂಡಲೇ, ವಾಪಸ್ ಕರೆದು ಮತ್ತೆ ಪೋಲಿಯೋ ಹನಿ ಹಾಕಿದ್ದಾರೆ ಎಂದು ಪಾಲಕ ಶಾಮಾರಾವ್​ ಗೇಡಂ ತಿಳಿಸಿದ್ದಾರೆ.

12 ಕಂದಮ್ಮಗಳಿಗೆ ಪೋಲಿಯೋ ಲಸಿಕೆ ಬದಲು ಸ್ಯಾನಿಟೈಸರ್ ಹನಿ ಹಾಕಿದ ಆರೋಗ್ಯ ಸಿಬ್ಬಂದಿ; ಮೂವರು ಅಮಾನತು
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Feb 02, 2021 | 4:18 PM

Share

ಮುಂಬೈ​: ಭಾನುವಾರ ದೇಶಾದ್ಯಂತ ಮಕ್ಕಳಿಗೆ ಪೊಲೀಯೋ ಲಸಿಕೆ ನೀಡಲಾಗಿದೆ. ಈ ವೇಳೆ ಮಹಾರಾಷ್ಟ್ರದಲ್ಲಿ ಮಹಾ ದುರಂತವೊಂದು ನಡೆದುಹೋಗಿದೆ. 12 ಶಿಶುಗಳಿಗೆ ಪೋಲಿಯೋ ಹನಿಯ ಬದಲು ಸ್ಯಾನಿಟೈಸರ್​ ಹನಿಯನ್ನು ಹಾಕಲಾಗಿದ್ದು, ಸದ್ಯ ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಟ್ಟ ಮಕ್ಕಳ ಪ್ರಾಣಕ್ಕೇ ಕುತ್ತು ತಂದ ಆರೋಗ್ಯ ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಎಡವಟ್ಟು ನಡೆದಿದ್ದು, ಯವತ್ಮಲ್​ನ ಘಟಂಜಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ. ಸ್ಯಾನಿಟೈಸರ್​ ಹನಿಯಿಂದಾಗಿ ಆಸ್ಪತ್ರೆಗೆ ಸೇರಿರುವ ಮಕ್ಕಳೆಲ್ಲ 1-5ವರ್ಷದವರೆಗಿನವರು. ಭಾನುವಾರ ಮುಂಜಾನೆಯಿಂದಲೇ ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪೋಲಿಯೋ ಲಸಿಕೆ ಅಭಿಯಾನ ಶುರುವಾಗಿತ್ತು. ಅದರಲ್ಲಿ 12 ಮಕ್ಕಳಿಗೆ ಹ್ಯಾಂಡ್​ಸ್ಯಾನಿಟೈಸರ್​ ಹನಿಯನ್ನು ಬಾಯಿಗೆ ಹಾಕಲಾಗಿದೆ. ಅವರಿಗೆಲ್ಲ ರಾತ್ರಿ ಹೊತ್ತಿಗೆ ವಾಂತಿ ಶುರುವಾಗಿ, ಅಸ್ವಸ್ಥರಾಗಿದ್ದಾರೆ.

ನಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿದ ಸ್ಥಳದಲ್ಲಿ ಮೂವರು ಸಿಬ್ಬಂದಿ ಇ ದ್ದರು. ಮೊದಲು ಸ್ಯಾನಿಟೈಸರ್​ ಡ್ರಾಪ್​ ನೀಡಿದರು. ಆದರೆ ಅವರಿಗೆ ನಂತರ ಅದು ಗೊತ್ತಾದ ಕೂಡಲೇ, ವಾಪಸ್ ಕರೆದು ಮತ್ತೆ ಪೋಲಿಯೋ ಹನಿ ಹಾಕಿದ್ದಾರೆ. ನನ್ನ ಮಗ ಮತ್ತು ಮಗಳು ಇಬ್ಬರಿಗೂ ವಾಂತಿ ಶುರುವಾಗಿತ್ತು ಎಂದು ಸ್ಯಾನಿಟೈಸರ್​ ಹನಿ ಹಾಕಲಾದ ಇಬ್ಬರು ಮಕ್ಕಳ ತಂದೆ ಶಾಮಾರಾವ್​ ಗೇಡಂ ತಿಳಿಸಿದ್ದಾರೆ.

ಅಂದು ಹಾಜರಿದ್ದ ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆಯರೇ, ಸಮುದಾಯ ಆರೋಗ್ಯ ಅಧಿಕಾರಿಯೇ ಈ ಅವಘಡಕ್ಕೆ ಹೊಣೆ ಎಂದು ಹೇಳಿರುವ ಯವತ್ಮಲ್​ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಶ್ರೀಕೃಷ್ಣ ಪಾಂಚಾಲ್​, ಪ್ರಕರಣದ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ ಎಂದು ಹೇಳಿದ್ದಾರೆ.

Petrol Price ಶ್ರೀರಾಮನ ಭಾರತದಲ್ಲಿ ರೂ. 93, ಸೀತೆಯ ನೇಪಾಳದಲ್ಲಿ 53, ರಾವಣನ ಶ್ರೀಲಂಕಾದಲ್ಲಿ ಎಷ್ಟು ಗೊತ್ತಾ..!

Follow Us
Lakshmi Hegde
Lakshmi Hegde
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ