AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಕಂದಮ್ಮಗಳಿಗೆ ಪೋಲಿಯೋ ಲಸಿಕೆ ಬದಲು ಸ್ಯಾನಿಟೈಸರ್ ಹನಿ ಹಾಕಿದ ಆರೋಗ್ಯ ಸಿಬ್ಬಂದಿ; ಮೂವರು ಅಮಾನತು

ನಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿದ ಸ್ಥಳದಲ್ಲಿ ಮೂವರು ಸಿಬ್ಬಂದಿ ಇ ದ್ದರು. ಮೊದಲು ಸ್ಯಾನಿಟೈಸರ್​ ಡ್ರಾಪ್​ ನೀಡಿದರು. ಆದರೆ ಅವರಿಗೆ ನಂತರ ಅದು ಗೊತ್ತಾದ ಕೂಡಲೇ, ವಾಪಸ್ ಕರೆದು ಮತ್ತೆ ಪೋಲಿಯೋ ಹನಿ ಹಾಕಿದ್ದಾರೆ ಎಂದು ಪಾಲಕ ಶಾಮಾರಾವ್​ ಗೇಡಂ ತಿಳಿಸಿದ್ದಾರೆ.

12 ಕಂದಮ್ಮಗಳಿಗೆ ಪೋಲಿಯೋ ಲಸಿಕೆ ಬದಲು ಸ್ಯಾನಿಟೈಸರ್ ಹನಿ ಹಾಕಿದ ಆರೋಗ್ಯ ಸಿಬ್ಬಂದಿ; ಮೂವರು ಅಮಾನತು
ಪ್ರಾತಿನಿಧಿಕ ಚಿತ್ರ
Lakshmi Hegde
| Updated By: ರಾಜೇಶ್ ದುಗ್ಗುಮನೆ|

Updated on: Feb 02, 2021 | 4:18 PM

Share

ಮುಂಬೈ​: ಭಾನುವಾರ ದೇಶಾದ್ಯಂತ ಮಕ್ಕಳಿಗೆ ಪೊಲೀಯೋ ಲಸಿಕೆ ನೀಡಲಾಗಿದೆ. ಈ ವೇಳೆ ಮಹಾರಾಷ್ಟ್ರದಲ್ಲಿ ಮಹಾ ದುರಂತವೊಂದು ನಡೆದುಹೋಗಿದೆ. 12 ಶಿಶುಗಳಿಗೆ ಪೋಲಿಯೋ ಹನಿಯ ಬದಲು ಸ್ಯಾನಿಟೈಸರ್​ ಹನಿಯನ್ನು ಹಾಕಲಾಗಿದ್ದು, ಸದ್ಯ ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಟ್ಟ ಮಕ್ಕಳ ಪ್ರಾಣಕ್ಕೇ ಕುತ್ತು ತಂದ ಆರೋಗ್ಯ ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಎಡವಟ್ಟು ನಡೆದಿದ್ದು, ಯವತ್ಮಲ್​ನ ಘಟಂಜಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ. ಸ್ಯಾನಿಟೈಸರ್​ ಹನಿಯಿಂದಾಗಿ ಆಸ್ಪತ್ರೆಗೆ ಸೇರಿರುವ ಮಕ್ಕಳೆಲ್ಲ 1-5ವರ್ಷದವರೆಗಿನವರು. ಭಾನುವಾರ ಮುಂಜಾನೆಯಿಂದಲೇ ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪೋಲಿಯೋ ಲಸಿಕೆ ಅಭಿಯಾನ ಶುರುವಾಗಿತ್ತು. ಅದರಲ್ಲಿ 12 ಮಕ್ಕಳಿಗೆ ಹ್ಯಾಂಡ್​ಸ್ಯಾನಿಟೈಸರ್​ ಹನಿಯನ್ನು ಬಾಯಿಗೆ ಹಾಕಲಾಗಿದೆ. ಅವರಿಗೆಲ್ಲ ರಾತ್ರಿ ಹೊತ್ತಿಗೆ ವಾಂತಿ ಶುರುವಾಗಿ, ಅಸ್ವಸ್ಥರಾಗಿದ್ದಾರೆ.

ನಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿದ ಸ್ಥಳದಲ್ಲಿ ಮೂವರು ಸಿಬ್ಬಂದಿ ಇ ದ್ದರು. ಮೊದಲು ಸ್ಯಾನಿಟೈಸರ್​ ಡ್ರಾಪ್​ ನೀಡಿದರು. ಆದರೆ ಅವರಿಗೆ ನಂತರ ಅದು ಗೊತ್ತಾದ ಕೂಡಲೇ, ವಾಪಸ್ ಕರೆದು ಮತ್ತೆ ಪೋಲಿಯೋ ಹನಿ ಹಾಕಿದ್ದಾರೆ. ನನ್ನ ಮಗ ಮತ್ತು ಮಗಳು ಇಬ್ಬರಿಗೂ ವಾಂತಿ ಶುರುವಾಗಿತ್ತು ಎಂದು ಸ್ಯಾನಿಟೈಸರ್​ ಹನಿ ಹಾಕಲಾದ ಇಬ್ಬರು ಮಕ್ಕಳ ತಂದೆ ಶಾಮಾರಾವ್​ ಗೇಡಂ ತಿಳಿಸಿದ್ದಾರೆ.

ಅಂದು ಹಾಜರಿದ್ದ ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆಯರೇ, ಸಮುದಾಯ ಆರೋಗ್ಯ ಅಧಿಕಾರಿಯೇ ಈ ಅವಘಡಕ್ಕೆ ಹೊಣೆ ಎಂದು ಹೇಳಿರುವ ಯವತ್ಮಲ್​ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಶ್ರೀಕೃಷ್ಣ ಪಾಂಚಾಲ್​, ಪ್ರಕರಣದ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ ಎಂದು ಹೇಳಿದ್ದಾರೆ.

Petrol Price ಶ್ರೀರಾಮನ ಭಾರತದಲ್ಲಿ ರೂ. 93, ಸೀತೆಯ ನೇಪಾಳದಲ್ಲಿ 53, ರಾವಣನ ಶ್ರೀಲಂಕಾದಲ್ಲಿ ಎಷ್ಟು ಗೊತ್ತಾ..!

ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ