AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಕಂದಮ್ಮಗಳಿಗೆ ಪೋಲಿಯೋ ಲಸಿಕೆ ಬದಲು ಸ್ಯಾನಿಟೈಸರ್ ಹನಿ ಹಾಕಿದ ಆರೋಗ್ಯ ಸಿಬ್ಬಂದಿ; ಮೂವರು ಅಮಾನತು

ನಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿದ ಸ್ಥಳದಲ್ಲಿ ಮೂವರು ಸಿಬ್ಬಂದಿ ಇ ದ್ದರು. ಮೊದಲು ಸ್ಯಾನಿಟೈಸರ್​ ಡ್ರಾಪ್​ ನೀಡಿದರು. ಆದರೆ ಅವರಿಗೆ ನಂತರ ಅದು ಗೊತ್ತಾದ ಕೂಡಲೇ, ವಾಪಸ್ ಕರೆದು ಮತ್ತೆ ಪೋಲಿಯೋ ಹನಿ ಹಾಕಿದ್ದಾರೆ ಎಂದು ಪಾಲಕ ಶಾಮಾರಾವ್​ ಗೇಡಂ ತಿಳಿಸಿದ್ದಾರೆ.

12 ಕಂದಮ್ಮಗಳಿಗೆ ಪೋಲಿಯೋ ಲಸಿಕೆ ಬದಲು ಸ್ಯಾನಿಟೈಸರ್ ಹನಿ ಹಾಕಿದ ಆರೋಗ್ಯ ಸಿಬ್ಬಂದಿ; ಮೂವರು ಅಮಾನತು
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Feb 02, 2021 | 4:18 PM

Share

ಮುಂಬೈ​: ಭಾನುವಾರ ದೇಶಾದ್ಯಂತ ಮಕ್ಕಳಿಗೆ ಪೊಲೀಯೋ ಲಸಿಕೆ ನೀಡಲಾಗಿದೆ. ಈ ವೇಳೆ ಮಹಾರಾಷ್ಟ್ರದಲ್ಲಿ ಮಹಾ ದುರಂತವೊಂದು ನಡೆದುಹೋಗಿದೆ. 12 ಶಿಶುಗಳಿಗೆ ಪೋಲಿಯೋ ಹನಿಯ ಬದಲು ಸ್ಯಾನಿಟೈಸರ್​ ಹನಿಯನ್ನು ಹಾಕಲಾಗಿದ್ದು, ಸದ್ಯ ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಟ್ಟ ಮಕ್ಕಳ ಪ್ರಾಣಕ್ಕೇ ಕುತ್ತು ತಂದ ಆರೋಗ್ಯ ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಎಡವಟ್ಟು ನಡೆದಿದ್ದು, ಯವತ್ಮಲ್​ನ ಘಟಂಜಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ. ಸ್ಯಾನಿಟೈಸರ್​ ಹನಿಯಿಂದಾಗಿ ಆಸ್ಪತ್ರೆಗೆ ಸೇರಿರುವ ಮಕ್ಕಳೆಲ್ಲ 1-5ವರ್ಷದವರೆಗಿನವರು. ಭಾನುವಾರ ಮುಂಜಾನೆಯಿಂದಲೇ ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪೋಲಿಯೋ ಲಸಿಕೆ ಅಭಿಯಾನ ಶುರುವಾಗಿತ್ತು. ಅದರಲ್ಲಿ 12 ಮಕ್ಕಳಿಗೆ ಹ್ಯಾಂಡ್​ಸ್ಯಾನಿಟೈಸರ್​ ಹನಿಯನ್ನು ಬಾಯಿಗೆ ಹಾಕಲಾಗಿದೆ. ಅವರಿಗೆಲ್ಲ ರಾತ್ರಿ ಹೊತ್ತಿಗೆ ವಾಂತಿ ಶುರುವಾಗಿ, ಅಸ್ವಸ್ಥರಾಗಿದ್ದಾರೆ.

ನಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿದ ಸ್ಥಳದಲ್ಲಿ ಮೂವರು ಸಿಬ್ಬಂದಿ ಇ ದ್ದರು. ಮೊದಲು ಸ್ಯಾನಿಟೈಸರ್​ ಡ್ರಾಪ್​ ನೀಡಿದರು. ಆದರೆ ಅವರಿಗೆ ನಂತರ ಅದು ಗೊತ್ತಾದ ಕೂಡಲೇ, ವಾಪಸ್ ಕರೆದು ಮತ್ತೆ ಪೋಲಿಯೋ ಹನಿ ಹಾಕಿದ್ದಾರೆ. ನನ್ನ ಮಗ ಮತ್ತು ಮಗಳು ಇಬ್ಬರಿಗೂ ವಾಂತಿ ಶುರುವಾಗಿತ್ತು ಎಂದು ಸ್ಯಾನಿಟೈಸರ್​ ಹನಿ ಹಾಕಲಾದ ಇಬ್ಬರು ಮಕ್ಕಳ ತಂದೆ ಶಾಮಾರಾವ್​ ಗೇಡಂ ತಿಳಿಸಿದ್ದಾರೆ.

ಅಂದು ಹಾಜರಿದ್ದ ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆಯರೇ, ಸಮುದಾಯ ಆರೋಗ್ಯ ಅಧಿಕಾರಿಯೇ ಈ ಅವಘಡಕ್ಕೆ ಹೊಣೆ ಎಂದು ಹೇಳಿರುವ ಯವತ್ಮಲ್​ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಶ್ರೀಕೃಷ್ಣ ಪಾಂಚಾಲ್​, ಪ್ರಕರಣದ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ ಎಂದು ಹೇಳಿದ್ದಾರೆ.

Petrol Price ಶ್ರೀರಾಮನ ಭಾರತದಲ್ಲಿ ರೂ. 93, ಸೀತೆಯ ನೇಪಾಳದಲ್ಲಿ 53, ರಾವಣನ ಶ್ರೀಲಂಕಾದಲ್ಲಿ ಎಷ್ಟು ಗೊತ್ತಾ..!

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್