AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಕಂದಮ್ಮಗಳಿಗೆ ಪೋಲಿಯೋ ಲಸಿಕೆ ಬದಲು ಸ್ಯಾನಿಟೈಸರ್ ಹನಿ ಹಾಕಿದ ಆರೋಗ್ಯ ಸಿಬ್ಬಂದಿ; ಮೂವರು ಅಮಾನತು

ನಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿದ ಸ್ಥಳದಲ್ಲಿ ಮೂವರು ಸಿಬ್ಬಂದಿ ಇ ದ್ದರು. ಮೊದಲು ಸ್ಯಾನಿಟೈಸರ್​ ಡ್ರಾಪ್​ ನೀಡಿದರು. ಆದರೆ ಅವರಿಗೆ ನಂತರ ಅದು ಗೊತ್ತಾದ ಕೂಡಲೇ, ವಾಪಸ್ ಕರೆದು ಮತ್ತೆ ಪೋಲಿಯೋ ಹನಿ ಹಾಕಿದ್ದಾರೆ ಎಂದು ಪಾಲಕ ಶಾಮಾರಾವ್​ ಗೇಡಂ ತಿಳಿಸಿದ್ದಾರೆ.

12 ಕಂದಮ್ಮಗಳಿಗೆ ಪೋಲಿಯೋ ಲಸಿಕೆ ಬದಲು ಸ್ಯಾನಿಟೈಸರ್ ಹನಿ ಹಾಕಿದ ಆರೋಗ್ಯ ಸಿಬ್ಬಂದಿ; ಮೂವರು ಅಮಾನತು
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Feb 02, 2021 | 4:18 PM

Share

ಮುಂಬೈ​: ಭಾನುವಾರ ದೇಶಾದ್ಯಂತ ಮಕ್ಕಳಿಗೆ ಪೊಲೀಯೋ ಲಸಿಕೆ ನೀಡಲಾಗಿದೆ. ಈ ವೇಳೆ ಮಹಾರಾಷ್ಟ್ರದಲ್ಲಿ ಮಹಾ ದುರಂತವೊಂದು ನಡೆದುಹೋಗಿದೆ. 12 ಶಿಶುಗಳಿಗೆ ಪೋಲಿಯೋ ಹನಿಯ ಬದಲು ಸ್ಯಾನಿಟೈಸರ್​ ಹನಿಯನ್ನು ಹಾಕಲಾಗಿದ್ದು, ಸದ್ಯ ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಟ್ಟ ಮಕ್ಕಳ ಪ್ರಾಣಕ್ಕೇ ಕುತ್ತು ತಂದ ಆರೋಗ್ಯ ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಎಡವಟ್ಟು ನಡೆದಿದ್ದು, ಯವತ್ಮಲ್​ನ ಘಟಂಜಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ. ಸ್ಯಾನಿಟೈಸರ್​ ಹನಿಯಿಂದಾಗಿ ಆಸ್ಪತ್ರೆಗೆ ಸೇರಿರುವ ಮಕ್ಕಳೆಲ್ಲ 1-5ವರ್ಷದವರೆಗಿನವರು. ಭಾನುವಾರ ಮುಂಜಾನೆಯಿಂದಲೇ ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪೋಲಿಯೋ ಲಸಿಕೆ ಅಭಿಯಾನ ಶುರುವಾಗಿತ್ತು. ಅದರಲ್ಲಿ 12 ಮಕ್ಕಳಿಗೆ ಹ್ಯಾಂಡ್​ಸ್ಯಾನಿಟೈಸರ್​ ಹನಿಯನ್ನು ಬಾಯಿಗೆ ಹಾಕಲಾಗಿದೆ. ಅವರಿಗೆಲ್ಲ ರಾತ್ರಿ ಹೊತ್ತಿಗೆ ವಾಂತಿ ಶುರುವಾಗಿ, ಅಸ್ವಸ್ಥರಾಗಿದ್ದಾರೆ.

ನಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿದ ಸ್ಥಳದಲ್ಲಿ ಮೂವರು ಸಿಬ್ಬಂದಿ ಇ ದ್ದರು. ಮೊದಲು ಸ್ಯಾನಿಟೈಸರ್​ ಡ್ರಾಪ್​ ನೀಡಿದರು. ಆದರೆ ಅವರಿಗೆ ನಂತರ ಅದು ಗೊತ್ತಾದ ಕೂಡಲೇ, ವಾಪಸ್ ಕರೆದು ಮತ್ತೆ ಪೋಲಿಯೋ ಹನಿ ಹಾಕಿದ್ದಾರೆ. ನನ್ನ ಮಗ ಮತ್ತು ಮಗಳು ಇಬ್ಬರಿಗೂ ವಾಂತಿ ಶುರುವಾಗಿತ್ತು ಎಂದು ಸ್ಯಾನಿಟೈಸರ್​ ಹನಿ ಹಾಕಲಾದ ಇಬ್ಬರು ಮಕ್ಕಳ ತಂದೆ ಶಾಮಾರಾವ್​ ಗೇಡಂ ತಿಳಿಸಿದ್ದಾರೆ.

ಅಂದು ಹಾಜರಿದ್ದ ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆಯರೇ, ಸಮುದಾಯ ಆರೋಗ್ಯ ಅಧಿಕಾರಿಯೇ ಈ ಅವಘಡಕ್ಕೆ ಹೊಣೆ ಎಂದು ಹೇಳಿರುವ ಯವತ್ಮಲ್​ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಶ್ರೀಕೃಷ್ಣ ಪಾಂಚಾಲ್​, ಪ್ರಕರಣದ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ ಎಂದು ಹೇಳಿದ್ದಾರೆ.

Petrol Price ಶ್ರೀರಾಮನ ಭಾರತದಲ್ಲಿ ರೂ. 93, ಸೀತೆಯ ನೇಪಾಳದಲ್ಲಿ 53, ರಾವಣನ ಶ್ರೀಲಂಕಾದಲ್ಲಿ ಎಷ್ಟು ಗೊತ್ತಾ..!

Follow Us
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್