AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಬರಿಮಲೆ ಪಾದಯಾತ್ರೆ ವೇಳೆ ಕುಸಿದುಬಿದ್ದು 12 ವರ್ಷದ ಬಾಲಕಿ ಸಾವು

ಶಬರಿಮಲೆ(Sabarimala)ಯ ಅಯ್ಯಪ್ಪ ದೇಗುಲಕ್ಕೆ ಕೈಗೊಂಡಿದ್ದ ಪಾದಯಾತ್ರೆಯಲ್ಲಿ ತಮಿಳುನಾಡಿನ 12 ವರ್ಷದ ಬಾಲಕಿ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ. ತಮಿಳುನಾಡು ಮೂಲದ ಪದ್ಮಶ್ರೀ (12) ಶಬರಿಮಲೆ ಬೆಟ್ಟದ ಮೇಲಿನ ದೇಗುಲಕ್ಕೆ ಟ್ರೆಕ್ಕಿಂಗ್ ಮಾಡುತ್ತಿರುವಾಗ ಅಪ್ಪಾಚಿಮೇಡು ಎಂಬಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಶಬರಿಮಲೆ ಪಾದಯಾತ್ರೆ ವೇಳೆ ಕುಸಿದುಬಿದ್ದು 12 ವರ್ಷದ ಬಾಲಕಿ ಸಾವು
ಸಾವು-ಸಾಂದರ್ಭಿಕ ಚಿತ್ರImage Credit source: India Today
ನಯನಾ ರಾಜೀವ್
|

Updated on: Dec 10, 2023 | 11:07 AM

Share

ಶಬರಿಮಲೆ(Sabarimala)ಯ ಅಯ್ಯಪ್ಪ ದೇಗುಲಕ್ಕೆ ಕೈಗೊಂಡಿದ್ದ ಪಾದಯಾತ್ರೆಯಲ್ಲಿ ತಮಿಳುನಾಡಿನ 12 ವರ್ಷದ ಬಾಲಕಿ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ. ತಮಿಳುನಾಡು ಮೂಲದ ಪದ್ಮಶ್ರೀ (12) ಶಬರಿಮಲೆ ಬೆಟ್ಟದ ಮೇಲಿನ ದೇಗುಲಕ್ಕೆ ಟ್ರೆಕ್ಕಿಂಗ್ ಮಾಡುತ್ತಿರುವಾಗ ಅಪ್ಪಾಚಿಮೇಡು ಎಂಬಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ಪಾಚಿಮೇಡುವಿನ ಹೃದ್ರೋಗ ಚಿಕಿತ್ಸಾ ಕೇಂದ್ರದಲ್ಲಿ ಆಕೆ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ 4 ರಿಂದ 5 ಗಂಟೆಯ ನಡುವೆ ಆಕೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ಪಂಬಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಕೆಗೆ ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಗಳಿತ್ತು ಎಂಬುದು ತಿಳಿದುಬಂದಿದೆ. ಬಾಲಕಿ ಮೂರು ವರ್ಷದಿಂದ ಹೃದ್ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದಳು, ಡಯಾಲಿಸಿಸ್ ಮಾಡಿಸಿಕೊಳ್ಳುತ್ತಲೇ ಶಬರಿಮಲೆ ಏರಲು ನಿರ್ಧರಿಸಿದ್ದಳು.

ಶಬರಿಮಲೆಯಲ್ಲಿ ಕುಸಿದುಬಿದ್ದು ಸಹಾಯಕ ಅರ್ಚಕ ಸಾವು ಶಬರಿಮಲೆಯದಲ್ಲಿ ಸಹಾಯಕ ಅರ್ಚಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಡಿಸೆಂಬರ್ 7 ರಂದು ನಡೆದಿದೆ. ಮೃತರನ್ನು ತಮಿಳುನಾಡಿನ ಕುಂಭಕೋಣಂನ ರಾಮ್ ಕುಮಾರ್ (43) ಎಂದು ಗುರಿತಿಸಲಾಗಿದೆ.

ಬೆಳಗ್ಗೆ ಕೋಣೆಯಲ್ಲಿ ಕುಸಿದು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಕ್ಷಣ ಇವರನ್ನು ಸನ್ನಿಧಾನಂ ಆಸ್ಪತ್ರೆಗೆ ಕರೆದೊಯ್ದರೂ ಜೀವ ಉಳಿಸಲಾಗಲಿಲ್ಲ. ಘಟನೆ ಹಿನ್ನೆಲೆಯಲ್ಲಿ ಇಂದು 20 ನಿಮಿಷ ತಡವಾಗಿ ದೇವಸ್ಥಾನ ತೆರೆಯಲಾಗಿದೆ. ಶುದ್ಧೀಕರಣದ ನಂತರ ದೇವಾಲಯವನ್ನು ತೆರೆಯಲಾಗಿದೆ. ದೇವಸ್ಥಾನ ತೆರೆಯಲು ವಿಳಂಬವಾದ ಕಾರಣ ಯಾತ್ರಾರ್ಥಿಗಳು ಬಹಳ ಹೊತ್ತು ಕಾಯಬೇಕಾಯಿತು.

ಪುರಷರಷ್ಟೇ ಅಲ್ಲದೇ ಈ ಬಾರಿ ಶಬರಿಮಲೆಗೆ ಬರುವ ಮಹಿಳೆಯರ ಸಂಖ್ಯೆ ಕೂಡ ಹೆಚ್ಚಾಗಿದೆ. ಪ್ರತಿ ವರ್ಷಕ್ಕಿಂತ ಈ ಬಾರಿ ಶಬರಿಮಲೆಯಕ್ಕೆ ಬರುವ ಮಹಿಳೆಯರ ಸಂಖ್ಯೆ ಶೇಕಡ 20ರಷ್ಟು ಹೆಚ್ಚಾಗಿದೆ ಎಂದು ದೇವಸ್ವಂ ಮಂಡಳಿ ಮಾಹಿತಿ ನೀಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​