AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಮೂಲಕ ಭಾರತಕ್ಕೆ ಸಾಗಿಸುತ್ತಿದ್ದ 1,200 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ; 6 ಇರಾನ್ ಪ್ರಜೆಗಳ ಬಂಧನ

ಭಾರತೀಯ ನೌಕಾಪಡೆ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಗುರುವಾರ ಸಮುದ್ರದಲ್ಲಿ ಕಾರ್ಯಾಚರಣೆ ನಡೆಸಿ 6 ಇರಾನ್ ಪ್ರಜೆಗಳೊಂದಿಗೆ ವಶಪಡಿಸಿಕೊಂಡ ಸರಕುಗಳನ್ನು ಕೇರಳದ ಕೊಚ್ಚಿಗೆ ತಂದಿದೆ

ಪಾಕಿಸ್ತಾನದ ಮೂಲಕ ಭಾರತಕ್ಕೆ ಸಾಗಿಸುತ್ತಿದ್ದ 1,200 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ; 6 ಇರಾನ್ ಪ್ರಜೆಗಳ ಬಂಧನ
ಹೆರಾಯಿನ್ ಅನ್ನು ಸಾಗಿಸುತ್ತಿದ್ದ ಹಡಗು
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 08, 2022 | 1:32 PM

ಕೊಚ್ಚಿ: ಅಫ್ಘಾನಿಸ್ತಾನದಲ್ಲಿ (Afghanistan) ತಯಾರಿಸಿದ ಹೆರಾಯಿನ್ ಅನ್ನು ಇರಾನ್ ಮೀನುಗಾರಿಕಾ ಹಡಗಿನಲ್ಲಿ ತುಂಬಿಕೊಂಡು ಪಾಕಿಸ್ತಾನ (Pakistan) ಮಾರ್ಗವಾಗಿ ಭಾರತಕ್ಕೆ ಸಾಗಿಸಲಾಗುತ್ತಿತ್ತು. ಈ ಮಾದಕವಸ್ತುವನ್ನು ಭಾರತ ಮತ್ತು ಶ್ರೀಲಂಕಾದಲ್ಲಿ ಮಾರಾಟ ಮಾಡುವ ಪ್ರಯತ್ನ ನಡೆದಿತ್ತು. ಆದರೆ, ಎನ್​ಸಿಬಿ (NCB) ಮತ್ತು ಭಾರತೀಯ ನೌಕಾಪಡೆ (Indian Navy) ಜಂಟಿ ಕಾರ್ಯಾಚರಣೆ ನಡೆಸಿ, 1,200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಸುಮಾರು 200 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ. ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನ ಇರಾನ್ ಪ್ರಜೆಗಳನ್ನು ಬಂಧಿಸಲಾಗಿದೆ.

ಅಫ್ಘಾನಿಸ್ತಾನದಲ್ಲಿ ತಯಾರಾದ 200 ಕೆಜಿ ಹೆರಾಯಿನ್ ಅನ್ನು ಮೊದಲು ಪಾಕಿಸ್ತಾನಕ್ಕೆ ತರಲಾಯಿತು. ಅಲ್ಲಿಂದ ಇರಾನ್ ಹಡಗಿನಲ್ಲಿ ಹಾಕಲಾಯಿತು. ಅದನ್ನು ಭಾರತ ಮತ್ತು ಶ್ರೀಲಂಕಾದಲ್ಲಿ ಮಾರಾಟ ಮಾಡಲು ಉದ್ದೇಶಿಸಲಾಗಿತ್ತು ಎಂದು ಭಾರತೀಯ ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಆ ಹಡಗನ್ನು ತಡೆದು 6 ಇರಾನ್ ಪ್ರಜೆಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಪಾಕಿಸ್ತಾನದ ಮೂವರು ಸ್ಮಗ್ಲರ್​​ಗಳನ್ನು ಹೊಡೆದುರುಳಿಸಿದ ಬಿಎಸ್​ಎಫ್ ಯೋಧರು; 36 ಕೆಜಿ ಹೆರಾಯಿನ್​ ವಶ

ಭಾರತೀಯ ನೌಕಾಪಡೆ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಗುರುವಾರ ಸಮುದ್ರದಲ್ಲಿ ಕಾರ್ಯಾಚರಣೆ ನಡೆಸಿ 6 ಇರಾನ್ ಪ್ರಜೆಗಳೊಂದಿಗೆ ವಶಪಡಿಸಿಕೊಂಡ ಸರಕುಗಳನ್ನು ಕೇರಳದ ಕೊಚ್ಚಿಗೆ ತಂದಿದೆ ಎಂದು ಎನ್‌ಸಿಬಿಯ ಸಂಜಯ್ ಕುಮಾರ್ ಸಿಂಗ್ ಹೇಳಿದ್ದಾರೆ. “ಕೆಲವು ಡ್ರಗ್ ಪ್ಯಾಕೆಟ್‌ಗಳು ‘ಸ್ಕಾರ್ಪಿಯನ್’ ಸೀಲ್ ಗುರುತುಗಳನ್ನು ಹೊಂದಿದ್ದರೆ, ಉಳಿದವು ‘ಡ್ರ್ಯಾಗನ್’ ಸೀಲ್ ಗುರುತುಗಳನ್ನು ಹೊಂದಿದ್ದವು.” ಎಂದು ಅವರು ತಿಳಿಸಿದ್ದಾರೆ.

ಇರಾನ್ ಹಡಗಿನಲ್ಲಿದ್ದ ವ್ಯಕ್ತಿಗಳು ಸಮುದ್ರಕ್ಕೆ ಹಾರಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಹಾಗೇ, ಹೆರಾಯಿನ್ ಅನ್ನು ನೀರಿನಲ್ಲಿ ಎಸೆಯಲು ಪ್ರಯತ್ನಿಸಿದರು ಎಂದು ಎನ್‌ಸಿಬಿ ಅಧಿಕಾರಿ ಹೇಳಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಅರೇಬಿಯನ್ ಸಮುದ್ರ ಮತ್ತು ಹಿಂದೂ ಮಹಾಸಾಗರದ ಸಮುದ್ರ ಮಾರ್ಗದ ಮೂಲಕ ಭಾರತಕ್ಕೆ ಅಫ್ಘಾನ್ ಹೆರಾಯಿನ್ ಸಾಗಾಟವು ಘಾತೀಯವಾಗಿ ಹೆಚ್ಚಾಗಿದೆ ಎಂದು NCB ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ