AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಮೂಲಕ ಭಾರತಕ್ಕೆ ಸಾಗಿಸುತ್ತಿದ್ದ 1,200 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ; 6 ಇರಾನ್ ಪ್ರಜೆಗಳ ಬಂಧನ

ಭಾರತೀಯ ನೌಕಾಪಡೆ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಗುರುವಾರ ಸಮುದ್ರದಲ್ಲಿ ಕಾರ್ಯಾಚರಣೆ ನಡೆಸಿ 6 ಇರಾನ್ ಪ್ರಜೆಗಳೊಂದಿಗೆ ವಶಪಡಿಸಿಕೊಂಡ ಸರಕುಗಳನ್ನು ಕೇರಳದ ಕೊಚ್ಚಿಗೆ ತಂದಿದೆ

ಪಾಕಿಸ್ತಾನದ ಮೂಲಕ ಭಾರತಕ್ಕೆ ಸಾಗಿಸುತ್ತಿದ್ದ 1,200 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ; 6 ಇರಾನ್ ಪ್ರಜೆಗಳ ಬಂಧನ
ಹೆರಾಯಿನ್ ಅನ್ನು ಸಾಗಿಸುತ್ತಿದ್ದ ಹಡಗು
TV9 Web
| Edited By: |

Updated on: Oct 08, 2022 | 1:32 PM

Share

ಕೊಚ್ಚಿ: ಅಫ್ಘಾನಿಸ್ತಾನದಲ್ಲಿ (Afghanistan) ತಯಾರಿಸಿದ ಹೆರಾಯಿನ್ ಅನ್ನು ಇರಾನ್ ಮೀನುಗಾರಿಕಾ ಹಡಗಿನಲ್ಲಿ ತುಂಬಿಕೊಂಡು ಪಾಕಿಸ್ತಾನ (Pakistan) ಮಾರ್ಗವಾಗಿ ಭಾರತಕ್ಕೆ ಸಾಗಿಸಲಾಗುತ್ತಿತ್ತು. ಈ ಮಾದಕವಸ್ತುವನ್ನು ಭಾರತ ಮತ್ತು ಶ್ರೀಲಂಕಾದಲ್ಲಿ ಮಾರಾಟ ಮಾಡುವ ಪ್ರಯತ್ನ ನಡೆದಿತ್ತು. ಆದರೆ, ಎನ್​ಸಿಬಿ (NCB) ಮತ್ತು ಭಾರತೀಯ ನೌಕಾಪಡೆ (Indian Navy) ಜಂಟಿ ಕಾರ್ಯಾಚರಣೆ ನಡೆಸಿ, 1,200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಸುಮಾರು 200 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ. ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನ ಇರಾನ್ ಪ್ರಜೆಗಳನ್ನು ಬಂಧಿಸಲಾಗಿದೆ.

ಅಫ್ಘಾನಿಸ್ತಾನದಲ್ಲಿ ತಯಾರಾದ 200 ಕೆಜಿ ಹೆರಾಯಿನ್ ಅನ್ನು ಮೊದಲು ಪಾಕಿಸ್ತಾನಕ್ಕೆ ತರಲಾಯಿತು. ಅಲ್ಲಿಂದ ಇರಾನ್ ಹಡಗಿನಲ್ಲಿ ಹಾಕಲಾಯಿತು. ಅದನ್ನು ಭಾರತ ಮತ್ತು ಶ್ರೀಲಂಕಾದಲ್ಲಿ ಮಾರಾಟ ಮಾಡಲು ಉದ್ದೇಶಿಸಲಾಗಿತ್ತು ಎಂದು ಭಾರತೀಯ ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಆ ಹಡಗನ್ನು ತಡೆದು 6 ಇರಾನ್ ಪ್ರಜೆಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಪಾಕಿಸ್ತಾನದ ಮೂವರು ಸ್ಮಗ್ಲರ್​​ಗಳನ್ನು ಹೊಡೆದುರುಳಿಸಿದ ಬಿಎಸ್​ಎಫ್ ಯೋಧರು; 36 ಕೆಜಿ ಹೆರಾಯಿನ್​ ವಶ

ಭಾರತೀಯ ನೌಕಾಪಡೆ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಗುರುವಾರ ಸಮುದ್ರದಲ್ಲಿ ಕಾರ್ಯಾಚರಣೆ ನಡೆಸಿ 6 ಇರಾನ್ ಪ್ರಜೆಗಳೊಂದಿಗೆ ವಶಪಡಿಸಿಕೊಂಡ ಸರಕುಗಳನ್ನು ಕೇರಳದ ಕೊಚ್ಚಿಗೆ ತಂದಿದೆ ಎಂದು ಎನ್‌ಸಿಬಿಯ ಸಂಜಯ್ ಕುಮಾರ್ ಸಿಂಗ್ ಹೇಳಿದ್ದಾರೆ. “ಕೆಲವು ಡ್ರಗ್ ಪ್ಯಾಕೆಟ್‌ಗಳು ‘ಸ್ಕಾರ್ಪಿಯನ್’ ಸೀಲ್ ಗುರುತುಗಳನ್ನು ಹೊಂದಿದ್ದರೆ, ಉಳಿದವು ‘ಡ್ರ್ಯಾಗನ್’ ಸೀಲ್ ಗುರುತುಗಳನ್ನು ಹೊಂದಿದ್ದವು.” ಎಂದು ಅವರು ತಿಳಿಸಿದ್ದಾರೆ.

ಇರಾನ್ ಹಡಗಿನಲ್ಲಿದ್ದ ವ್ಯಕ್ತಿಗಳು ಸಮುದ್ರಕ್ಕೆ ಹಾರಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಹಾಗೇ, ಹೆರಾಯಿನ್ ಅನ್ನು ನೀರಿನಲ್ಲಿ ಎಸೆಯಲು ಪ್ರಯತ್ನಿಸಿದರು ಎಂದು ಎನ್‌ಸಿಬಿ ಅಧಿಕಾರಿ ಹೇಳಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಅರೇಬಿಯನ್ ಸಮುದ್ರ ಮತ್ತು ಹಿಂದೂ ಮಹಾಸಾಗರದ ಸಮುದ್ರ ಮಾರ್ಗದ ಮೂಲಕ ಭಾರತಕ್ಕೆ ಅಫ್ಘಾನ್ ಹೆರಾಯಿನ್ ಸಾಗಾಟವು ಘಾತೀಯವಾಗಿ ಹೆಚ್ಚಾಗಿದೆ ಎಂದು NCB ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ