AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಕೊರೊನಾ ಮಧ್ಯೆ ಮಿತಿಮೀರಿದ ಡೆಂಗ್ಯೂ ಪ್ರಕರಣ; 4 ವರ್ಷಗಳಲ್ಲೇ ಅತಿ ಹೆಚ್ಚು ಕೇಸ್​ ದಾಖಲು

ಡೆಂಗ್ಯೂ ಸೊಳ್ಳೆಯಿಂದ ಹರಡುವ ರೋಗವಾಗಿದ್ದು, ಇದಕ್ಕೆ ಸಂಬಂಧಪಟ್ಟ ಡಾಟಾವನ್ನು ದಕ್ಷಿಣ ದೆಹಲಿ ಮುನ್ಸಿಪಲ್​ ಕಾರ್ಪೋರೇಶನ್​ ಸೋಮವಾರ ಬಿಡುಗಡೆ ಮಾಡಿದೆ. ಅದರ ಅನ್ವಯ ಅಕ್ಟೋಬರ್​ 30ರವರೆಗೆ ದೆಹಲಿಯಲ್ಲಿ 1537 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. 

ದೆಹಲಿಯಲ್ಲಿ ಕೊರೊನಾ ಮಧ್ಯೆ ಮಿತಿಮೀರಿದ ಡೆಂಗ್ಯೂ ಪ್ರಕರಣ; 4 ವರ್ಷಗಳಲ್ಲೇ ಅತಿ ಹೆಚ್ಚು ಕೇಸ್​ ದಾಖಲು
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Nov 03, 2021 | 10:46 AM

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಡೆಂಗ್ಯೂ ಜ್ವರ (Dengue Cases)ದ ಆತಂಕ ಹೆಚ್ಚಾಗಿದೆ. ಅಕ್ಟೋಬರ್​ ಒಂದೇ ತಿಂಗಳಲ್ಲಿ ಬರೋಬ್ಬರಿ 1200 ಮಂದಿಯಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಈ ವರ್ಷ ಇಲ್ಲಿಯವರೆಗೆ 1530 ಮಂದಿ ಈ ಜ್ವರ ಪೀಡಿತರಾಗಿದ್ದಾರೆ. ಅದರಲ್ಲೂ ಕಳೆದ ನಾಲ್ಕು ವರ್ಷದಲ್ಲಿ ಒಂದು ತಿಂಗಳಲ್ಲಿ ಇಷ್ಟು ಸಂಖ್ಯೆಯ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು ಇದೇ ಮೊದಲಬಾರಿ ಎಂದು ಹೇಳಲಾಗಿದೆ. 

ರಾಷ್ಟ್ರರಾಜಧಾನಿ ದೆಹಲಿಯಲ್ಲಿ 2017ರ ಅಕ್ಟೋಬರ್​ ತಿಂಗಳಲ್ಲಿ 2022 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದವು. ಅದಾದ ಮೇಲೆ ಇದೇ ಮೊದಲ ಬಾರಿಗೆ ಒಂದೇ ತಿಂಗಳಲ್ಲಿ 1200 ಜನರಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ. ಸೋಮವಾರ ಡೆಂಗ್ಯೂದಿಂದ ಐದು ಮಂದಿ ಮೃತಪಟ್ಟಿದ್ದಾರೆ. ಅಲ್ಲಿಗೆ ಡೆಂಗ್ಯೂದಿಂದ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿದ್ದು, ಇದೂ ಕೂಡ 2017ರಿಂದ ಈಚೆಗೆ ಅತಿಹೆಚ್ಚಿನ ಸಂಖ್ಯೆಯ ಡೆಂಗ್ಯೂ ಸಾವಾಗಿದೆ. 2017ರಲ್ಲಿ ಒಟ್ಟು 10 ಮಂದಿ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದರು.

ಡೆಂಗ್ಯೂ ಸೊಳ್ಳೆಯಿಂದ ಹರಡುವ ರೋಗವಾಗಿದ್ದು, ಇದಕ್ಕೆ ಸಂಬಂಧಪಟ್ಟ ಡಾಟಾವನ್ನು ದಕ್ಷಿಣ ದೆಹಲಿ ಮುನ್ಸಿಪಲ್​ ಕಾರ್ಪೋರೇಶನ್​ ಸೋಮವಾರ ಬಿಡುಗಡೆ ಮಾಡಿದೆ. ಅದರ ಅನ್ವಯ ಅಕ್ಟೋಬರ್​ 30ರವರೆಗೆ ದೆಹಲಿಯಲ್ಲಿ 1537 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.  ಹಿಂದಿನ ಡಾಟಾ ಅವಲೋಕಿಸುವುದಾದರೆ 2020ರಲ್ಲಿ ಜನವರಿ 1ರಿಂದ ಅಕ್ಟೋಬರ್​ 30ರವರೆಗೆ 612 ಡೆಂಗ್ಯೂ ಪ್ರಕರಣಗಳಷ್ಟೇ ಪತ್ತೆಯಾಗಿದ್ದವು. 2019ರಲ್ಲಿ ಈ ಅವಧಿಯಲ್ಲಿ 1069 ಹಾಗೂ 2018ರ ಈ ಅವಧಿಯಲ್ಲಿ 1595 ಕೇಸ್​ಗಳು ದಾಖಲಾಗಿದ್ದವು. 2018ಕ್ಕೆ ಹೋಲಿಸಿದರೆ ಈ ಅವಧಿಯ ಒಟ್ಟಾರೆ ಪ್ರಕರಣ ಕಡಿಮೆಯಾದರೂ ಅಕ್ಟೋಬರ್​ ಒಂದೇ ತಿಂಗಳಲ್ಲಿ ಪತ್ತೆಯಾದ ಕೇಸ್​ಗಳ ಸಂಖ್ಯೆ ಹೆಚ್ಚಾಗಿದೆ.

ಸೊಳ್ಳೆಗಳಿಂದ ಬರುವ ಡೆಂಗ್ಯೂ ರೋಗ ದೆಹಲಿಯಲ್ಲಿ ಹೆಚ್ಚುತ್ತಿರುವ ಬೆನ್ನಲ್ಲೇ ನಿನ್ನೆ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಪರಿಶೀಲನಾ ಸಭೆ ನಡೆಸಿದ್ದಾರೆ. ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಮತ್ತು ಈಗಾಗಲೇ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸ್ಥಳೀಯ ಅಧಿಕಾರಿಗಳು, ಸಚಿವರೊಂದಿಗೆ ಚರ್ಚಿಸಿದ್ದಾರೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ ತವರಿನಲ್ಲಿ ಬಿಜೆಪಿಗೆ ಸೋಲು: ರಾಜ್ಯ ಬಿಜೆಪಿ ಘಟಕಕ್ಕೆ ಅಭಿನಂದನೆ ಸಲ್ಲಿಸದ ಜೆ.ಪಿ.ನಡ್ಡಾ-ಅಮಿತ್ ಶಾ!

ಈ ಎಂಡೋಮೆಂಟ್ ಪಾಲಿಸಿಯಲ್ಲಿ ದಿನಕ್ಕೆ 95 ರೂಪಾಯಿ ಪಾವತಿಸಿ ಮೆಚ್ಯೂರಿಟಿ ವೇಳೆ 14 ಲಕ್ಷ ರೂ. ಪಡೆಯಿರಿ

Published On - 10:45 am, Wed, 3 November 21

ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ