AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇಯಲ್ಲಿ ಅಪಘಾತ ಸಂಖ್ಯೆ ಏರಿಕೆ: ಲೋಕಸಭೆಯಲ್ಲಿ ಸಚಿವ ನಿತಿನ್ ಗಡ್ಗರಿ ಉತ್ತರ

ಸಂಚಾರಕ್ಕೆ ಮುಕ್ತವಾದಾಗಿನಿಂದ ಇಲ್ಲಿಯವರೆಗೆ ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇಯಲ್ಲಿ ಅಪಘಾತದಿಂದ 121 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಲೋಕಸಭೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇಯಲ್ಲಿ ಅಪಘಾತ ಸಂಖ್ಯೆ ಏರಿಕೆ: ಲೋಕಸಭೆಯಲ್ಲಿ ಸಚಿವ ನಿತಿನ್ ಗಡ್ಗರಿ ಉತ್ತರ
ಸಚಿವ ನಿತಿನ್​ ಗಡ್ಕರಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jul 29, 2023 | 1:40 PM

Share

ನವದೆಹಲಿ: ಸಂಚಾರಕ್ಕೆ ಮುಕ್ತವಾದಾಗಿನಿಂದ ಇಲ್ಲಿಯವರೆಗೆ ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇಯಲ್ಲಿ (Bengaluru-Mysore Expressway) ಅಪಘಾತದಿಂದ 121 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ (Nitin Gadkari) ಲೋಕಸಭೆಯಲ್ಲಿ (Lok Sabha) ತಿಳಿಸಿದ್ದಾರೆ. ಕಳೆದ ಏಳು ತಿಂಗಳಲ್ಲಿ 398 ಅಪಘಾತಗಳು ಸಂಭವಿಸಿವೆ. ಬೆಂಗಳೂರಿನಿಂದ ಮದ್ದೂರಿನ ನಡುವೆ ಅಪಘಾತದಿಂದ 59 ಜನರು ಮೃತರಾಗಿದ್ದರೇ, ಮದ್ದೂರಿನಿಂದ ಮೈಸೂರಿನ ನಡುವೆ 62 ಜನರು ನಿಧನರಾಗಿದ್ದಾರೆ ಎಂದು ತಿಳಿಸಿದರು.

ರಾಜ್ಯ ಪೊಲೀಸರು ನೀಡಿದ ಅಂಕಿ-ಅಂಶಗಳ ಪ್ರಕಾರ ಜೂನ್​ನಲ್ಲಿ ನಿಧನರಾದ 28 ಜನರು ಸೇರಿದಂತೆ 132 ಜನರು ನಿಧನರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಜಾರಿಗೆ ತಂದಿರವ ರಸ್ತೆ ಸುರಕ್ಷತಾ ಕ್ರಮಗಳ ಪ್ರಕಾರ ಹಾಗೂ ಇಂಡಿಯನ್​ ರೋಡ್​ ಕಾಂಗ್ರೆಸ್​ (IRC) ನಿಯಮಗಳ ಪ್ರಕಾರ ನಿಯಮಿತ ಅಂತರದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಜೊತೆಗೆ ಎಕ್ಸಪ್ರೆಸ್​ವೇಗೆ ಪ್ರವೇಶಿಸುವ ಮತ್ತು ಹೆದ್ದಾರಿಯಿಂದ ನಿರ್ಗಮಿಸುವ ಸ್ಥಳಗಳಲ್ಲಿ ಹೆಚ್ಚುವರಿ ಮಾಹಿತಿ ಫಲಕಗಳನ್ನು ಅಳವಡಿಸಲಾಗಿದೆ ಎಂದರು.

ಎಕ್ಸಪ್ರೆಸ್​​ವೇಯಲ್ಲಿನ ಎರಡು ವಿಭಾಗಗಳಿಗೆ ತಲಾ ಎರಡರಂತೆ ನಾಲ್ಕು ಹೆದ್ದಾರಿ ಗಸ್ತು ವಾಹನಗಳು ಕಾರ್ಯನಿರ್ವಹಿಸುತ್ತಿವೆ. ಅಲ್ಲದೇ ಓವರ್​​​ಹೆಡ್​​ ವೇರಿಯಬಲ್​ ಮೆಸೇಜ್​ ಸಹ್ನೆ (VMS), ಕ್ಯಾಮೆರಾಗಳನ್ನು ಅವಳವಡಿಸಲಾಗಿದೆ. ಇನ್ನು ದ್ವಿಚಕ್ರ, ತ್ರಿಚಕ್ರ, ಟ್ಯಾಕ್ಟರ್​ ಮತ್ತು ಮೋಟಾರು ರಹಿತ ವಾಹನಗಳನ್ನು ಎಕ್ಸಪ್ರೆಸ್​​ವೇನಲ್ಲಿ ನಿಷೇಧಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ AI ಕ್ಯಾಮೆರಾ: ಮಿತಿಗಿಂತ ಜಾಸ್ತಿ ವೇಗವಾಗಿ ವಾಹನ ಓಡಿಸಿದ್ರೆ ಬೀಳುತ್ತೆ ಫೈನ್..!

ಇನ್ನು ಜು.17 ರಿಂದ 20 ರವರೆಗೆ ಮೂರು ದಿನಗಳ ಕಾಲ ಕೇಂದ್ರ ರಸ್ತೆ ಸುರಕ್ಷ ಸಮಿತಿಯು ಅಪಘಾತ ನಡೆದ ಸ್ಥಳಗಳಗಳಿಗೆ ಭೇಟಿ ನೀಡಿ ಪರೀಶಿಸಿ, ತೆಗೆದುಕೊಳ್ಳಬೇಕಾಗದ ಅಗತ್ಯ ಕ್ರಮಗಳ ಬಗ್ಗೆ ವರದಿ ನೀಡಿದೆ. ಅಲ್ಲದೇ ರಾಜ್ಯ ಪೊಲೀಸ್​ ಇಲಾಖೆ ಮಿತಿಗಿಂತ ಅತಿ ವೇಗದಿಂದ ವಾಹನ ಚಲಾಯಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಅಧಿವೇಶನದಲ್ಲಿ ಹೇಳಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಎಕ್ಸ್‌ಪ್ರೆಸ್ ವೇಯಲ್ಲಿ ಸಂಚರಿಸುವ ಸವಾರರ ಸುರಕ್ಷತೆ ದೃಷ್ಠಿಯಿಂದ ತೆಗೆದುಕೊಂಡ ಕ್ರಮಗಳ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು ನಾಲ್ಕು ಆಂಬ್ಯುಲೆನ್ಸ್‌ಗಳು ಮತ್ತು ಅರೆವೈದ್ಯಕೀಯ ಸಿಬ್ಬಂದಿಯನ್ನು ಹೆದ್ದಾರಿಯಲ್ಲಿ ನಿಯೋಜಿಸಲಾಗಿದೆ. ಹಾಗೇ ಟೋಲ್ ಪ್ಲಾಜಾಗಳಲ್ಲಿ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಉತ್ತರಿಸಿದರು.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?