AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇತಾಜಿ ಸುಭಾಷ್ ಚಂದ್ರ ಬೋಸ್ 125ನೇ ಜನ್ಮದಿನಾಚರಣೆ ಸ್ಮರಣಾರ್ಥ ಜನವರಿ 23ನ್ನು ಪರಾಕ್ರಮ್ ದಿವಸ್ ಎಂದು ಘೋಷಿಸಿದ ಸರ್ಕಾರ

Netaji Subhas Chandra Bose: ಸ್ವಾತಂತ್ರ್ಯ ಹೋರಾಟಗಾರರ 125 ನೇ ಜನ್ಮ ದಿನಾಚರಣೆಯ ನೆನಪಿಗಾಗಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಮ್ಯೂಸಿಯಂ ಅನ್ನು ನವದೆಹಲಿಯ ಕೆಂಪು ಕೋಟೆಯಲ್ಲಿ ಸ್ಥಾಪಿಸಲಾಗಿದೆ ಎಂದು ಲಿಖಿತ ಉತ್ತರದಲ್ಲಿ ಸಚಿವರು ಮಾಹಿತಿ ನೀಡಿದರು.

ನೇತಾಜಿ ಸುಭಾಷ್ ಚಂದ್ರ ಬೋಸ್ 125ನೇ ಜನ್ಮದಿನಾಚರಣೆ ಸ್ಮರಣಾರ್ಥ ಜನವರಿ 23ನ್ನು ಪರಾಕ್ರಮ್ ದಿವಸ್ ಎಂದು ಘೋಷಿಸಿದ ಸರ್ಕಾರ
ನೇತಾಜಿ ಸುಭಾಷ್​ ಚಂದ್ರ ಬೋಸ್​
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 02, 2021 | 5:35 PM

Share

ದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮ ದಿನಾಚರಣೆಯ ಸ್ಮರಣಾರ್ಥವಾಗಿ ಸರ್ಕಾರವು ಜನವರಿ 23 ನ್ನು ಪರಾಕ್ರಮ್ ದಿವಸ್ ಎಂದು ಘೋಷಿಸಿದೆ ಎಂದು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಸೋಮವಾರ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಸಂಸ್ಕೃತಿ ಸಚಿವ ಜಿ.ಕಿಶನ್ ರೆಡ್ಡಿ, ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ನೇತಾಜಿ ಅವರ 125 ನೇ ಜನ್ಮ ದಿನಾಚರಣೆಯ ಸ್ಮರಣಾರ್ಥವಾಗಿ ವಿವಿಧ ಪ್ರಸ್ತಾವನೆಗಳಿಗೆ ತಮ್ಮ ಸರ್ಕಾರ ಅನುಮೋದನೆ ನೀಡಿದೆ ಮತ್ತು ಜನವರಿ 23 ರಂದು ಪರಾಕ್ರಮ ದಿವಸ್ ಎಂದು ಘೋಷಿಸಲು ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರರ 125 ನೇ ಜನ್ಮ ದಿನಾಚರಣೆಯ ನೆನಪಿಗಾಗಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಮ್ಯೂಸಿಯಂ ಅನ್ನು ನವದೆಹಲಿಯ ಕೆಂಪು ಕೋಟೆಯಲ್ಲಿ ಸ್ಥಾಪಿಸಲಾಗಿದೆ ಎಂದು ಲಿಖಿತ ಉತ್ತರದಲ್ಲಿ ಸಚಿವರು ಮಾಹಿತಿ ನೀಡಿದರು.

ನೇತಾಜಿಯವರ ಜನ್ಮ ದಿನಾಚರಣೆಯ ನೆನಪಿಗಾಗಿ ಅವರ ಸರ್ಕಾರದ ಕಾರ್ಯಕ್ರಮಗಳನ್ನು ಪಟ್ಟಿ ಮಾಡಿದ ರೆಡ್ಡಿ, ಜನವರಿ 23, 2021 ರಂದು ಕೋಲ್ಕತ್ತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್‌ನಲ್ಲಿ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು ಎಂದಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸ್ಮರಣಾರ್ಥ ನಾಣ್ಯ ಮತ್ತು ಅಂಚೆಚೀಟಿಗಳನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಅಂತಾರಾಷ್ಟ್ರೀಯ ಸೆಮಿನಾರ್‌ಗಳನ್ನು 23 ನೇ ಜನವರಿ 2021 ರಂದು ಕೋಲ್ಕತ್ತಾ ಮತ್ತು 5 ನೇ ಮಾರ್ಚ್ 2021 ರಂದು ಜಬಲ್ಪುರದಲ್ಲಿ ಆಯೋಜಿಸಲಾಗಿದೆ ಎಂದು ರೆಡ್ಡಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಧಾನಿ ಅಧ್ಯಕ್ಷತೆಯಲ್ಲಿ ಸ್ಮರಣಾರ್ಥ ಕಾರ್ಯಕ್ರಮಗಳ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವರು ಮಾಹಿತಿ ನೀಡಿದರು.

ಸಮಿತಿಯು ಖ್ಯಾತ ವ್ಯಕ್ತಿಗಳು, ಇತಿಹಾಸಕಾರರು, ಲೇಖಕರು, ತಜ್ಞರು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕುಟುಂಬ ಸದಸ್ಯರು ಹಾಗೂ ಆಜಾದ್ ಹಿಂದ್ ಫೌಜ್ (INA) ಗೆ ಸಂಬಂಧಿಸಿದ ಪ್ರಮುಖ ವ್ಯಕ್ತಿಗಳನ್ನು ಒಳಗೊಂಡಿದೆ.

“ನೇತಾಜಿ ಸುಭಾಷ್ ಚಂದ್ರ ಬೋಸ್‌ಗೆ ಸಂಬಂಧಿಸಿದ ಹಲವಾರು ಪ್ರಸ್ತಾವನೆಗಳನ್ನು ಭಾರತ ಸರ್ಕಾರವು ಅನುಮೋದಿಸಿದೆ. ಕೆಂಪುಕೋಟೆಯಲ್ಲಿ ಐಎನ್‌ಎ ಹುತಾತ್ಮರಿಗೆ ಸ್ಮಾರಕವನ್ನು ಸ್ಥಾಪಿಸುವುದು ಮತ್ತು ಕೋಲ್ಕತ್ತಾದ ಸಮೀಪದ ನೀಲಗಂಜ್‌ನಲ್ಲಿ, ನೇತಾಜಿ ಮತ್ತು ಐಎನ್‌ಎ ಕುರಿತು ಕಿರು ವೀಡಿಯೊಗಳು, ಐಎನ್‌ಎ ಪ್ರಯೋಗಗಳ ಕುರಿತು ಸಾಕ್ಷ್ಯಚಿತ್ರ, ಕರ್ನಲ್ ಧಿಲ್ಲೋನ್ ಅವರ ಜೀವನ ಚರಿತ್ರೆಯ ಪ್ರಕಟಣೆ ಮತ್ತು ಜನರಲ್ ಶಹನವಾಜ್ ಖಾನ್, ಐಎನ್‌ಎಯ ಫೋಟೊಗಳನ್ನು ಚಿತ್ರಾತ್ಮಕ ಪುಸ್ತಕದ ರೂಪದಲ್ಲಿ ಪ್ರಕಟಿಸುವುದು, ನೇತಾಜಿಯ ಬಗ್ಗೆ ಕಾಮಿಕ್ಸ್ ಇವುಗಳಲ್ಲಿ ಸೇರಿದೆ.

ಇದನ್ನೂ ಓದಿ: E-RUPI: ಇ-ರುಪಿ ಡಿಜಿಟಲ್ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ; ಏನಿದರ ವಿಶೇಷತೆ?

ಇದನ್ನೂ ಓದಿ: ಬಾಲ್ಯದಿಂದಲೂ ಸುಭಾಷ್‌ಚಂದ್ರ ಬೋಸ್​ ನನಗೆ ಸ್ಫೂರ್ತಿ; ನೇತಾಜಿ ಚಿಂತನೆಯಂತೆ ದೇಶ ಮುನ್ನಡೆಯುತ್ತಿದೆ-ಪ್ರಧಾನಿ ಮೋದಿ

(125th birth anniversary of Netaji Subhas Chandra Bose Government has declared January 23 as Parakram Diwas )