AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kinnaur Landslide: ಹಿಮಾಚಲ ಪ್ರದೇಶದ ಭೂಕುಸಿತದಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿಕೆ; ಮಣ್ಣಿನಡಿ ಸಿಲುಕಿರುವ ಬಸ್​

ಭೂಕುಸಿತ ಉಂಟಾಗುವ ಮೊದಲು ಗುಡ್ಡ ಪ್ರದೇಶದ ಪುಟ್ಟಪುಟ್ಟ ಕಲ್ಲುಗಳೆಲ್ಲ ನದಿಗೆ ಬಿದ್ದವು. ಅದಾದ ನಂತರ ಪರ್ವತಗಳ ದೊಡ್ಡದೊಡ್ಡ ಭಾಗಗಳೇ ಕುಸಿದು ರಾಷ್ಟ್ರೀಯ ಹೆದ್ದಾರಿಯ ಮೇಲೆ ಮತ್ತು ಸಮೀಪವೇ ಹರಿಯುತ್ತಿರುವ ನದಿಯಲ್ಲಿ ಬಿದ್ದಿವೆ.

Kinnaur Landslide: ಹಿಮಾಚಲ ಪ್ರದೇಶದ ಭೂಕುಸಿತದಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿಕೆ; ಮಣ್ಣಿನಡಿ ಸಿಲುಕಿರುವ ಬಸ್​
ಭೂಕುಸಿತದಿಂದ ಮಣ್ಣಿನಡಿಯಾದ ವಾಹನ
TV9 Web
| Edited By: |

Updated on:Aug 12, 2021 | 10:34 AM

Share

ಹಿಮಾಚಲ ಪ್ರದೇಶದ ಕಿನೌರ್​ ಭೂಕುಸಿತ (Kinnaur Landslide)ದಲ್ಲಿ ಮೃತಪಟ್ಟವರ ಸಂಖ್ಯೆ ಇಂದು ಬೆಳಗ್ಗೆ ಹೊತ್ತಿಗೆ 13ಕ್ಕೆ ಏರಿಕೆಯಾಗಿದೆ ಎಂದು ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್​ (ITBP) ಯ ಡೆಪ್ಯೂಟಿ ಕಮಾಂಡಂಟ್​​ ಧರ್ಮೇಂದ್ರ ಠಾಕೂರ್​ ತಿಳಿಸಿದ್ದಾರೆ. ಇನ್ನು 13 ಜನರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದ್ದು, ಅವರನ್ನೆಲ್ಲ ಸಿಎಚ್​ಸಿ ಭವನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಹೇಳಿದ್ದಾರೆ. ಕಿನೌರ್​ ಭೂಕುಸಿತ(Kinnaur Landslide)ದಿಂದ ಒಂದು ಬಸ್​ ಮತ್ತು ಬೊಲೆರೋ ವಾಹನ ಕಾಣದಂತಾಗಿದೆ. ಅದರಲ್ಲಿದ್ದ ಜನರು ಎಷ್ಟು ಜನ ಬದುಕುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದೂ ಧರ್ಮೇದ್ರ ಠಾಕೂರ್ ಮಾಹಿತಿ ನೀಡಿದ್ದಾರೆ. 

ನಿನ್ನೆ ಹಿಮಾಚಲ ಪ್ರದೇಶದ ಕಿನೌರ್​ನಲ್ಲಿ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿತ್ತು. ಇದರಿಂದಾಗಿ ಬಸ್​ ಸೇರಿ, ಕೆಲವು ವಾಹನಗಳು ಮಣ್ಣಿನಡಿ ಹೂತುಹೋಗಿವೆ. ರೆಕಾಂಗ್ ಪಿಯೋದಿಂದ ಶಿಮ್ಲಾ ಮೂಲಕ ಹರಿದ್ವಾರಕ್ಕೆ ರಾಷ್ಟ್ರೀಯ ಹೆದ್ದಾರಿ 5ರಲ್ಲಿ  ಸಾಗುತ್ತಿದ್ದ ಎಚ್​ಆರ್​ಟಿಸಿ ಬಸ್​ಗೆ ನಿಶ್ಚರ್​ ತೆಹ್ಸಿಲ್​ನ ನಿಗುಲ್​ಸಾರಿ ಬಳಿ ದೊಡ್ಡದಾದ ಬಂಡೆಯೊಂದು ಅಪ್ಪಳಿಸಿ, ಅವಘಡ ಸಂಭವಿಸಿದೆ. ಈ ದುರ್ಘಟನೆಯ ವಿಡಿಯೋ ಕ್ಲಿಪ್​ ಕೂಡ ವೈರಲ್ ಆಗಿದೆ.

ಭೂಕುಸಿತ ಉಂಟಾಗುವ ಮೊದಲು ಗುಡ್ಡ ಪ್ರದೇಶದ ಪುಟ್ಟಪುಟ್ಟ ಕಲ್ಲುಗಳೆಲ್ಲ ನದಿಗೆ ಬಿದ್ದವು. ಅದಾದ ನಂತರ ಪರ್ವತಗಳ ದೊಡ್ಡದೊಡ್ಡ ಭಾಗಗಳೇ ಕುಸಿದು ರಾಷ್ಟ್ರೀಯ ಹೆದ್ದಾರಿಯ ಮೇಲೆ ಮತ್ತು ಸಮೀಪವೇ ಹರಿಯುತ್ತಿರುವ ನದಿಯಲ್ಲಿ ಬಿದ್ದಿವೆ. ನಿನ್ನೆ ಅವಘಡ ನಡೆದ ಕೂಡಲೇ ಎನ್​ಡಿಆರ್​ಎಫ್​ ಸೇರಿ ಇತರ ರಕ್ಷಣಾ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ಪ್ರಾರಂಭವಾಗಿತ್ತು. ಆದರೆ ರಾತ್ರಿ 10ಗಂಟೆಗೆ ನಿಲ್ಲಿಸಬೇಕಾಯಿತು. ನಿನ್ನೆ 10 ಶವಗಳನ್ನು ಹೊರತೆಗೆಯಲಾಗಿತ್ತು. ಇಂದು ಮುಂಜಾನೆಯಿಂದ ಮತ್ತೆ ಕಾರ್ಯಾಚರಣೆ ಶುರುವಾಗಿದ್ದು, ಇಲ್ಲಿಯವರೆಗೆ ಒಟ್ಟು 13 ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರ ತೆಗೆಯಲಾಗಿದೆ.

ಇದನ್ನೂ ಓದಿ: Coronavirus cases in India: ದೇಶದಲ್ಲಿ 41,195 ಹೊಸ ಕೊವಿಡ್ ಪ್ರಕರಣ ಪತ್ತೆ, 490 ಮಂದಿ ಸಾವು

Published On - 9:58 am, Thu, 12 August 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?