AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶಾ ಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿ ಗೃಹದಲ್ಲಿ 20 ದಿನದಲ್ಲಿ 13 ಮಕ್ಕಳ ನಿಗೂಢ ಸಾವು

ದೆಹಲಿಯ ರೋಹಿಣಿಯಲ್ಲಿರುವ ಆಶಾ ಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿಗೃಹದಲ್ಲಿ ಕಳೆದ 20 ದಿನಗಳಲ್ಲಿ 13 ಮಕ್ಕಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ದೆಹಲಿ ಸರ್ಕಾರ ಈ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ. ಈ ಕುರಿತು ಸಚಿವೆ ಅತಿಶಿ ಮಾಹಿತಿ ನೀಡಿದ್ದಾರೆ, ಆರೋಗ್ಯ ಸಂಬಂಧಿ ಸಮಸ್ಯೆಗಳು ಹಾಗೂ ಅಪೌಷ್ಟಿಕತೆಯಿಂದ ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ. ಮಕ್ಕಳಿಗೆ ಸರಿಯಾದ ಸೌಲಭ್ಯಗಳು ಸಿಗುತ್ತಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಇದು ಅತ್ಯಂತ ಗಂಭೀರವಾದ ಸಮಸ್ಯೆಯಾಗಿದೆ ಎಂದು ಅತಿಶಿ ಹೇಳಿದ್ದಾರೆ, ಈ ಬಗ್ಗೆ […]

ಆಶಾ ಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿ ಗೃಹದಲ್ಲಿ 20 ದಿನದಲ್ಲಿ 13 ಮಕ್ಕಳ ನಿಗೂಢ ಸಾವು
ನಯನಾ ರಾಜೀವ್
|

Updated on: Aug 02, 2024 | 2:49 PM

Share

ದೆಹಲಿಯ ರೋಹಿಣಿಯಲ್ಲಿರುವ ಆಶಾ ಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿಗೃಹದಲ್ಲಿ ಕಳೆದ 20 ದಿನಗಳಲ್ಲಿ 13 ಮಕ್ಕಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ದೆಹಲಿ ಸರ್ಕಾರ ಈ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ. ಈ ಕುರಿತು ಸಚಿವೆ ಅತಿಶಿ ಮಾಹಿತಿ ನೀಡಿದ್ದಾರೆ, ಆರೋಗ್ಯ ಸಂಬಂಧಿ ಸಮಸ್ಯೆಗಳು ಹಾಗೂ ಅಪೌಷ್ಟಿಕತೆಯಿಂದ ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ. ಮಕ್ಕಳಿಗೆ ಸರಿಯಾದ ಸೌಲಭ್ಯಗಳು ಸಿಗುತ್ತಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಇದು ಅತ್ಯಂತ ಗಂಭೀರವಾದ ಸಮಸ್ಯೆಯಾಗಿದೆ ಎಂದು ಅತಿಶಿ ಹೇಳಿದ್ದಾರೆ, ಈ ಬಗ್ಗೆ ತಕ್ಷಣವೇ ಮ್ಯಾಜಿಸ್ಟ್ರೇಟ್ ತನಿಖೆ ಆರಂಭಿಸಿ 48 ಗಂಟೆಗಳಲ್ಲಿ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ರೋಹಿಣಿಯಲ್ಲಿರುವ ವಸತಿಗೃಹಕ್ಕೆ ಸತ್ಯಶೋಧನಾ ತಂಡವನ್ನು ಕಳುಹಿಸಿದ್ದೇವೆ ಎಂದು ಹೇಳಿದ್ದಾರೆ. ಈ ತಂಡವು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿ ಈ ಸಾವಿಗೆ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತದೆ. ರಾತ್ರಿ ಶೆಲ್ಟರ್​ ಆಡಿಟ್ ಕೂಡ ಮಾಡಲಿದ್ದೇವೆ ಎಂದರು.

ಮತ್ತಷ್ಟು ಓದಿ: ಮನೆಗೆ ನುಗ್ಗಿ ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ

ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಇದುವರೆಗೆ 27 ಮಕ್ಕಳು ಸಾವನ್ನಪ್ಪಿದ್ದಾರೆ. ಈ ಅಂಕಿ ಅಂಶ ಕಳೆದ ವರ್ಷಕ್ಕಿಂತ ಹೆಚ್ಚು. ಕುಡಿಯುವ ನೀರಿನ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ನಿಜವಾದ ಕಾರಣ ತಿಳಿಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ