AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾಲ್ಯಾಂಡ್​​ನಲ್ಲಿ ಭೀಕರ ಗುಂಡಿನ ದಾಳಿ, ಭದ್ರತಾ ವಾಹನಗಳಿಗೆ ಬೆಂಕಿ; ಯೋಧ ಸೇರಿ 13 ಜನರ ದುರ್ಮರಣ

ಘಟನೆಗೆ ನಿಜವಾದ ಕಾರಣ ಗೊತ್ತಾಗಿಲ್ಲ. ಗುಂಡಿನ ದಾಳಿ ನಡೆಸಿದ್ದು ಯಾರೆಂಬುದು ಇನ್ನೂ ನಿಗೂಢವಾಗಿಯೇ ಇದೆ. ಹಾಗೇ, ನಾಗಾಲ್ಯಾಂಡ್​ನ ಮುಖ್ಯಮಂತ್ರಿ ನಿಫಿಯು ರಿಯೊ ಅವರು ಉನ್ನತ ಮಟ್ಟದ ವಿಶೇಷ ತನಿಖೆಗೆ ಆದೇಶಿಸಿದ್ದಾರೆ.

ನಾಗಾಲ್ಯಾಂಡ್​​ನಲ್ಲಿ ಭೀಕರ ಗುಂಡಿನ ದಾಳಿ, ಭದ್ರತಾ ವಾಹನಗಳಿಗೆ ಬೆಂಕಿ; ಯೋಧ ಸೇರಿ 13 ಜನರ ದುರ್ಮರಣ
ಭದ್ರತಾ ಪಡೆಯ ವಾಹನಗಳಿಗೆ ಬೆಂಕಿಯಿಟ್ಟ ಸ್ಥಳೀಯರು
TV9 Web
| Edited By: |

Updated on:Dec 05, 2021 | 10:34 AM

Share

ನಾಗಾಲ್ಯಾಂಡ್​​ನ ಮೋನ್​ ಜಿಲ್ಲೆಯ ತಿರು ಗ್ರಾಮದಲ್ಲಿ ನಿನ್ನೆ ಸಂಜೆ ನಡೆದ ಗುಂಡಿನ ದಾಳಿಯಲ್ಲಿ ಯೋಧನೊಬ್ಬ ಸೇರಿ 13 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಈ ಘಟನೆಯಲ್ಲಿ 13 ಜನರು ಮೃತಪಟ್ಟಿದ್ದಾಗಿ ಪೊಲೀಸ್ ವರಿಷ್ಠಾಧಿಕಾರಿ ಇಮ್ನಾಲೆನ್ಸಾ ದೃಢಪಡಿಸಿದ್ದಾರೆ. ಇಲ್ಲಿನ ಓಟಿಂಗ್​ ಎಂಬ ಗ್ರಾಮದ ಜನರು ಒಂದು ಪಿಕ್​ ಅಪ್​ ಮಿನಿ ಟ್ರಕ್​ ಮೂಲಕ ಮನೆಗೆ ವಾಪಸ್​ ಬರುತ್ತಿದ್ದರು. ಈ ವೇಳೆ ತಿರು ಗ್ರಾಮದ ಬಳಿ ಅವರ ಮೇಲೆ ಗುಂಡಿನ ದಾಳಿಯಾಗಿದೆ. ಇವರಿನ್ನೂ ಬರಲಿಲ್ಲ ಎಂದು ಹುಡುಕುತ್ತ ಹೋದ ಸ್ಥಳೀಯರಿಗೆ ಟ್ರಕ್​ ಮತ್ತು 13 ಮಂದಿ ನಾಗರಿಕರ ಮೃತದೇಹ ಸಿಕ್ಕಿದೆ. ಅದನ್ನು ನೋಡಿ ಕೋಪಗೊಂಡ ಜನರು ಭದ್ರತಾ ಪಡೆಯ ಎರಡು ವಾಹನಕ್ಕೆ ಬೆಂಕಿ ಹಾಕಿದ್ದಾರೆ.

ಘಟನೆಗೆ ನಿಜವಾದ ಕಾರಣ ಗೊತ್ತಾಗಿಲ್ಲ. ಗುಂಡಿನ ದಾಳಿ ನಡೆಸಿದ್ದು ಯಾರೆಂಬುದು ಇನ್ನೂ ನಿಗೂಢವಾಗಿಯೇ ಇದೆ. ಹಾಗೇ, ನಾಗಾಲ್ಯಾಂಡ್​ನ ಮುಖ್ಯಮಂತ್ರಿ ನಿಫಿಯು ರಿಯೊ ಅವರು ಉನ್ನತ ಮಟ್ಟದ ವಿಶೇಷ ತನಿಖೆಗೆ ಆದೇಶಿಸಿದ್ದಾರೆ. ಈ ಗುಂಡಿನ ದಾಳಿ ತೀವ್ರ ಖಂಡನೀಯ. ಅನ್ಯಾಯವಾಗಿ ಬಲಿಯಾದವರ ಸಾವಿಗೆ ನ್ಯಾಯ ಒದಗಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲ, ಸ್ಥಳೀಯರು ಶಾಂತಿಯುತವಾಗಿರಬೇಕು ಎಂದು ಮನವಿ ಮಾಡಿದ್ದಾರೆ.

ಗೃಹ ಸಚಿವ ಅಮಿತ್​ ಶಾ ಕೂಡ ಟ್ವೀಟ್ ಮಾಡಿದ್ದು, ನಾಗಾಲ್ಯಾಂಡ್​​ನ ಓಟಿಂಗ್​​ನಲ್ಲಿ ನಡೆದ ಘಟನೆಯಿಂದ ನೋವಾಗಿದೆ. ಮೃತರ ಕುಟುಂಗಳಿಗೆ ನನ್ನ ಸಾಂತ್ವನಗಳು. ಈ ಘಟನೆ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಉನ್ನತ ಮಟ್ಟದ ಎಸ್​ಐಟಿ ರಚನೆ ಮಾಡಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶಿವರಾಂ ನಡೆದಾಡುವ ಅಯ್ಯಪ್ಪ ಸ್ವಾಮಿ ಆಗಿದ್ರು; ಅವರಿಗೆ ಹಲವು ಅಭಿಷೇಕ ಮಾಡ್ತೀವಿ’: ಡಾ. ಎನ್​. ಜಯರಾಂ

Published On - 10:32 am, Sun, 5 December 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ