AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾಲ್ಯಾಂಡ್​​ನಲ್ಲಿ ಭೀಕರ ಗುಂಡಿನ ದಾಳಿ, ಭದ್ರತಾ ವಾಹನಗಳಿಗೆ ಬೆಂಕಿ; ಯೋಧ ಸೇರಿ 13 ಜನರ ದುರ್ಮರಣ

ಘಟನೆಗೆ ನಿಜವಾದ ಕಾರಣ ಗೊತ್ತಾಗಿಲ್ಲ. ಗುಂಡಿನ ದಾಳಿ ನಡೆಸಿದ್ದು ಯಾರೆಂಬುದು ಇನ್ನೂ ನಿಗೂಢವಾಗಿಯೇ ಇದೆ. ಹಾಗೇ, ನಾಗಾಲ್ಯಾಂಡ್​ನ ಮುಖ್ಯಮಂತ್ರಿ ನಿಫಿಯು ರಿಯೊ ಅವರು ಉನ್ನತ ಮಟ್ಟದ ವಿಶೇಷ ತನಿಖೆಗೆ ಆದೇಶಿಸಿದ್ದಾರೆ.

ನಾಗಾಲ್ಯಾಂಡ್​​ನಲ್ಲಿ ಭೀಕರ ಗುಂಡಿನ ದಾಳಿ, ಭದ್ರತಾ ವಾಹನಗಳಿಗೆ ಬೆಂಕಿ; ಯೋಧ ಸೇರಿ 13 ಜನರ ದುರ್ಮರಣ
ಭದ್ರತಾ ಪಡೆಯ ವಾಹನಗಳಿಗೆ ಬೆಂಕಿಯಿಟ್ಟ ಸ್ಥಳೀಯರು
TV9 Web
| Edited By: |

Updated on:Dec 05, 2021 | 10:34 AM

Share

ನಾಗಾಲ್ಯಾಂಡ್​​ನ ಮೋನ್​ ಜಿಲ್ಲೆಯ ತಿರು ಗ್ರಾಮದಲ್ಲಿ ನಿನ್ನೆ ಸಂಜೆ ನಡೆದ ಗುಂಡಿನ ದಾಳಿಯಲ್ಲಿ ಯೋಧನೊಬ್ಬ ಸೇರಿ 13 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಈ ಘಟನೆಯಲ್ಲಿ 13 ಜನರು ಮೃತಪಟ್ಟಿದ್ದಾಗಿ ಪೊಲೀಸ್ ವರಿಷ್ಠಾಧಿಕಾರಿ ಇಮ್ನಾಲೆನ್ಸಾ ದೃಢಪಡಿಸಿದ್ದಾರೆ. ಇಲ್ಲಿನ ಓಟಿಂಗ್​ ಎಂಬ ಗ್ರಾಮದ ಜನರು ಒಂದು ಪಿಕ್​ ಅಪ್​ ಮಿನಿ ಟ್ರಕ್​ ಮೂಲಕ ಮನೆಗೆ ವಾಪಸ್​ ಬರುತ್ತಿದ್ದರು. ಈ ವೇಳೆ ತಿರು ಗ್ರಾಮದ ಬಳಿ ಅವರ ಮೇಲೆ ಗುಂಡಿನ ದಾಳಿಯಾಗಿದೆ. ಇವರಿನ್ನೂ ಬರಲಿಲ್ಲ ಎಂದು ಹುಡುಕುತ್ತ ಹೋದ ಸ್ಥಳೀಯರಿಗೆ ಟ್ರಕ್​ ಮತ್ತು 13 ಮಂದಿ ನಾಗರಿಕರ ಮೃತದೇಹ ಸಿಕ್ಕಿದೆ. ಅದನ್ನು ನೋಡಿ ಕೋಪಗೊಂಡ ಜನರು ಭದ್ರತಾ ಪಡೆಯ ಎರಡು ವಾಹನಕ್ಕೆ ಬೆಂಕಿ ಹಾಕಿದ್ದಾರೆ.

ಘಟನೆಗೆ ನಿಜವಾದ ಕಾರಣ ಗೊತ್ತಾಗಿಲ್ಲ. ಗುಂಡಿನ ದಾಳಿ ನಡೆಸಿದ್ದು ಯಾರೆಂಬುದು ಇನ್ನೂ ನಿಗೂಢವಾಗಿಯೇ ಇದೆ. ಹಾಗೇ, ನಾಗಾಲ್ಯಾಂಡ್​ನ ಮುಖ್ಯಮಂತ್ರಿ ನಿಫಿಯು ರಿಯೊ ಅವರು ಉನ್ನತ ಮಟ್ಟದ ವಿಶೇಷ ತನಿಖೆಗೆ ಆದೇಶಿಸಿದ್ದಾರೆ. ಈ ಗುಂಡಿನ ದಾಳಿ ತೀವ್ರ ಖಂಡನೀಯ. ಅನ್ಯಾಯವಾಗಿ ಬಲಿಯಾದವರ ಸಾವಿಗೆ ನ್ಯಾಯ ಒದಗಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲ, ಸ್ಥಳೀಯರು ಶಾಂತಿಯುತವಾಗಿರಬೇಕು ಎಂದು ಮನವಿ ಮಾಡಿದ್ದಾರೆ.

ಗೃಹ ಸಚಿವ ಅಮಿತ್​ ಶಾ ಕೂಡ ಟ್ವೀಟ್ ಮಾಡಿದ್ದು, ನಾಗಾಲ್ಯಾಂಡ್​​ನ ಓಟಿಂಗ್​​ನಲ್ಲಿ ನಡೆದ ಘಟನೆಯಿಂದ ನೋವಾಗಿದೆ. ಮೃತರ ಕುಟುಂಗಳಿಗೆ ನನ್ನ ಸಾಂತ್ವನಗಳು. ಈ ಘಟನೆ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಉನ್ನತ ಮಟ್ಟದ ಎಸ್​ಐಟಿ ರಚನೆ ಮಾಡಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶಿವರಾಂ ನಡೆದಾಡುವ ಅಯ್ಯಪ್ಪ ಸ್ವಾಮಿ ಆಗಿದ್ರು; ಅವರಿಗೆ ಹಲವು ಅಭಿಷೇಕ ಮಾಡ್ತೀವಿ’: ಡಾ. ಎನ್​. ಜಯರಾಂ

Published On - 10:32 am, Sun, 5 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ