AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾಲ್ಯಾಂಡ್​​ನಲ್ಲಿ ಭೀಕರ ಗುಂಡಿನ ದಾಳಿ, ಭದ್ರತಾ ವಾಹನಗಳಿಗೆ ಬೆಂಕಿ; ಯೋಧ ಸೇರಿ 13 ಜನರ ದುರ್ಮರಣ

ಘಟನೆಗೆ ನಿಜವಾದ ಕಾರಣ ಗೊತ್ತಾಗಿಲ್ಲ. ಗುಂಡಿನ ದಾಳಿ ನಡೆಸಿದ್ದು ಯಾರೆಂಬುದು ಇನ್ನೂ ನಿಗೂಢವಾಗಿಯೇ ಇದೆ. ಹಾಗೇ, ನಾಗಾಲ್ಯಾಂಡ್​ನ ಮುಖ್ಯಮಂತ್ರಿ ನಿಫಿಯು ರಿಯೊ ಅವರು ಉನ್ನತ ಮಟ್ಟದ ವಿಶೇಷ ತನಿಖೆಗೆ ಆದೇಶಿಸಿದ್ದಾರೆ.

ನಾಗಾಲ್ಯಾಂಡ್​​ನಲ್ಲಿ ಭೀಕರ ಗುಂಡಿನ ದಾಳಿ, ಭದ್ರತಾ ವಾಹನಗಳಿಗೆ ಬೆಂಕಿ; ಯೋಧ ಸೇರಿ 13 ಜನರ ದುರ್ಮರಣ
ಭದ್ರತಾ ಪಡೆಯ ವಾಹನಗಳಿಗೆ ಬೆಂಕಿಯಿಟ್ಟ ಸ್ಥಳೀಯರು
TV9 Web
| Edited By: |

Updated on:Dec 05, 2021 | 10:34 AM

Share

ನಾಗಾಲ್ಯಾಂಡ್​​ನ ಮೋನ್​ ಜಿಲ್ಲೆಯ ತಿರು ಗ್ರಾಮದಲ್ಲಿ ನಿನ್ನೆ ಸಂಜೆ ನಡೆದ ಗುಂಡಿನ ದಾಳಿಯಲ್ಲಿ ಯೋಧನೊಬ್ಬ ಸೇರಿ 13 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಈ ಘಟನೆಯಲ್ಲಿ 13 ಜನರು ಮೃತಪಟ್ಟಿದ್ದಾಗಿ ಪೊಲೀಸ್ ವರಿಷ್ಠಾಧಿಕಾರಿ ಇಮ್ನಾಲೆನ್ಸಾ ದೃಢಪಡಿಸಿದ್ದಾರೆ. ಇಲ್ಲಿನ ಓಟಿಂಗ್​ ಎಂಬ ಗ್ರಾಮದ ಜನರು ಒಂದು ಪಿಕ್​ ಅಪ್​ ಮಿನಿ ಟ್ರಕ್​ ಮೂಲಕ ಮನೆಗೆ ವಾಪಸ್​ ಬರುತ್ತಿದ್ದರು. ಈ ವೇಳೆ ತಿರು ಗ್ರಾಮದ ಬಳಿ ಅವರ ಮೇಲೆ ಗುಂಡಿನ ದಾಳಿಯಾಗಿದೆ. ಇವರಿನ್ನೂ ಬರಲಿಲ್ಲ ಎಂದು ಹುಡುಕುತ್ತ ಹೋದ ಸ್ಥಳೀಯರಿಗೆ ಟ್ರಕ್​ ಮತ್ತು 13 ಮಂದಿ ನಾಗರಿಕರ ಮೃತದೇಹ ಸಿಕ್ಕಿದೆ. ಅದನ್ನು ನೋಡಿ ಕೋಪಗೊಂಡ ಜನರು ಭದ್ರತಾ ಪಡೆಯ ಎರಡು ವಾಹನಕ್ಕೆ ಬೆಂಕಿ ಹಾಕಿದ್ದಾರೆ.

ಘಟನೆಗೆ ನಿಜವಾದ ಕಾರಣ ಗೊತ್ತಾಗಿಲ್ಲ. ಗುಂಡಿನ ದಾಳಿ ನಡೆಸಿದ್ದು ಯಾರೆಂಬುದು ಇನ್ನೂ ನಿಗೂಢವಾಗಿಯೇ ಇದೆ. ಹಾಗೇ, ನಾಗಾಲ್ಯಾಂಡ್​ನ ಮುಖ್ಯಮಂತ್ರಿ ನಿಫಿಯು ರಿಯೊ ಅವರು ಉನ್ನತ ಮಟ್ಟದ ವಿಶೇಷ ತನಿಖೆಗೆ ಆದೇಶಿಸಿದ್ದಾರೆ. ಈ ಗುಂಡಿನ ದಾಳಿ ತೀವ್ರ ಖಂಡನೀಯ. ಅನ್ಯಾಯವಾಗಿ ಬಲಿಯಾದವರ ಸಾವಿಗೆ ನ್ಯಾಯ ಒದಗಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲ, ಸ್ಥಳೀಯರು ಶಾಂತಿಯುತವಾಗಿರಬೇಕು ಎಂದು ಮನವಿ ಮಾಡಿದ್ದಾರೆ.

ಗೃಹ ಸಚಿವ ಅಮಿತ್​ ಶಾ ಕೂಡ ಟ್ವೀಟ್ ಮಾಡಿದ್ದು, ನಾಗಾಲ್ಯಾಂಡ್​​ನ ಓಟಿಂಗ್​​ನಲ್ಲಿ ನಡೆದ ಘಟನೆಯಿಂದ ನೋವಾಗಿದೆ. ಮೃತರ ಕುಟುಂಗಳಿಗೆ ನನ್ನ ಸಾಂತ್ವನಗಳು. ಈ ಘಟನೆ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಉನ್ನತ ಮಟ್ಟದ ಎಸ್​ಐಟಿ ರಚನೆ ಮಾಡಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶಿವರಾಂ ನಡೆದಾಡುವ ಅಯ್ಯಪ್ಪ ಸ್ವಾಮಿ ಆಗಿದ್ರು; ಅವರಿಗೆ ಹಲವು ಅಭಿಷೇಕ ಮಾಡ್ತೀವಿ’: ಡಾ. ಎನ್​. ಜಯರಾಂ

Published On - 10:32 am, Sun, 5 December 21

Follow Us
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ