AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾಲ್ಯಾಂಡ್​​ನಲ್ಲಿ ಭೀಕರ ಗುಂಡಿನ ದಾಳಿ, ಭದ್ರತಾ ವಾಹನಗಳಿಗೆ ಬೆಂಕಿ; ಯೋಧ ಸೇರಿ 13 ಜನರ ದುರ್ಮರಣ

ಘಟನೆಗೆ ನಿಜವಾದ ಕಾರಣ ಗೊತ್ತಾಗಿಲ್ಲ. ಗುಂಡಿನ ದಾಳಿ ನಡೆಸಿದ್ದು ಯಾರೆಂಬುದು ಇನ್ನೂ ನಿಗೂಢವಾಗಿಯೇ ಇದೆ. ಹಾಗೇ, ನಾಗಾಲ್ಯಾಂಡ್​ನ ಮುಖ್ಯಮಂತ್ರಿ ನಿಫಿಯು ರಿಯೊ ಅವರು ಉನ್ನತ ಮಟ್ಟದ ವಿಶೇಷ ತನಿಖೆಗೆ ಆದೇಶಿಸಿದ್ದಾರೆ.

ನಾಗಾಲ್ಯಾಂಡ್​​ನಲ್ಲಿ ಭೀಕರ ಗುಂಡಿನ ದಾಳಿ, ಭದ್ರತಾ ವಾಹನಗಳಿಗೆ ಬೆಂಕಿ; ಯೋಧ ಸೇರಿ 13 ಜನರ ದುರ್ಮರಣ
ಭದ್ರತಾ ಪಡೆಯ ವಾಹನಗಳಿಗೆ ಬೆಂಕಿಯಿಟ್ಟ ಸ್ಥಳೀಯರು
TV9 Web
| Edited By: |

Updated on:Dec 05, 2021 | 10:34 AM

Share

ನಾಗಾಲ್ಯಾಂಡ್​​ನ ಮೋನ್​ ಜಿಲ್ಲೆಯ ತಿರು ಗ್ರಾಮದಲ್ಲಿ ನಿನ್ನೆ ಸಂಜೆ ನಡೆದ ಗುಂಡಿನ ದಾಳಿಯಲ್ಲಿ ಯೋಧನೊಬ್ಬ ಸೇರಿ 13 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಈ ಘಟನೆಯಲ್ಲಿ 13 ಜನರು ಮೃತಪಟ್ಟಿದ್ದಾಗಿ ಪೊಲೀಸ್ ವರಿಷ್ಠಾಧಿಕಾರಿ ಇಮ್ನಾಲೆನ್ಸಾ ದೃಢಪಡಿಸಿದ್ದಾರೆ. ಇಲ್ಲಿನ ಓಟಿಂಗ್​ ಎಂಬ ಗ್ರಾಮದ ಜನರು ಒಂದು ಪಿಕ್​ ಅಪ್​ ಮಿನಿ ಟ್ರಕ್​ ಮೂಲಕ ಮನೆಗೆ ವಾಪಸ್​ ಬರುತ್ತಿದ್ದರು. ಈ ವೇಳೆ ತಿರು ಗ್ರಾಮದ ಬಳಿ ಅವರ ಮೇಲೆ ಗುಂಡಿನ ದಾಳಿಯಾಗಿದೆ. ಇವರಿನ್ನೂ ಬರಲಿಲ್ಲ ಎಂದು ಹುಡುಕುತ್ತ ಹೋದ ಸ್ಥಳೀಯರಿಗೆ ಟ್ರಕ್​ ಮತ್ತು 13 ಮಂದಿ ನಾಗರಿಕರ ಮೃತದೇಹ ಸಿಕ್ಕಿದೆ. ಅದನ್ನು ನೋಡಿ ಕೋಪಗೊಂಡ ಜನರು ಭದ್ರತಾ ಪಡೆಯ ಎರಡು ವಾಹನಕ್ಕೆ ಬೆಂಕಿ ಹಾಕಿದ್ದಾರೆ.

ಘಟನೆಗೆ ನಿಜವಾದ ಕಾರಣ ಗೊತ್ತಾಗಿಲ್ಲ. ಗುಂಡಿನ ದಾಳಿ ನಡೆಸಿದ್ದು ಯಾರೆಂಬುದು ಇನ್ನೂ ನಿಗೂಢವಾಗಿಯೇ ಇದೆ. ಹಾಗೇ, ನಾಗಾಲ್ಯಾಂಡ್​ನ ಮುಖ್ಯಮಂತ್ರಿ ನಿಫಿಯು ರಿಯೊ ಅವರು ಉನ್ನತ ಮಟ್ಟದ ವಿಶೇಷ ತನಿಖೆಗೆ ಆದೇಶಿಸಿದ್ದಾರೆ. ಈ ಗುಂಡಿನ ದಾಳಿ ತೀವ್ರ ಖಂಡನೀಯ. ಅನ್ಯಾಯವಾಗಿ ಬಲಿಯಾದವರ ಸಾವಿಗೆ ನ್ಯಾಯ ಒದಗಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲ, ಸ್ಥಳೀಯರು ಶಾಂತಿಯುತವಾಗಿರಬೇಕು ಎಂದು ಮನವಿ ಮಾಡಿದ್ದಾರೆ.

ಗೃಹ ಸಚಿವ ಅಮಿತ್​ ಶಾ ಕೂಡ ಟ್ವೀಟ್ ಮಾಡಿದ್ದು, ನಾಗಾಲ್ಯಾಂಡ್​​ನ ಓಟಿಂಗ್​​ನಲ್ಲಿ ನಡೆದ ಘಟನೆಯಿಂದ ನೋವಾಗಿದೆ. ಮೃತರ ಕುಟುಂಗಳಿಗೆ ನನ್ನ ಸಾಂತ್ವನಗಳು. ಈ ಘಟನೆ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಉನ್ನತ ಮಟ್ಟದ ಎಸ್​ಐಟಿ ರಚನೆ ಮಾಡಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶಿವರಾಂ ನಡೆದಾಡುವ ಅಯ್ಯಪ್ಪ ಸ್ವಾಮಿ ಆಗಿದ್ರು; ಅವರಿಗೆ ಹಲವು ಅಭಿಷೇಕ ಮಾಡ್ತೀವಿ’: ಡಾ. ಎನ್​. ಜಯರಾಂ

Published On - 10:32 am, Sun, 5 December 21

Follow Us
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ