AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯೂಷನ್​ಗೆ ಹೋದ 5ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಶಿಕ್ಷಕಿಯ ಮಗನೇ ಆರೋಪಿ

ಈ ವಿಚಾರವನ್ನು ಹುಡುಗಿ ಮನೆಗೆ ಹೋಗಿ ತಾಯಿಯ ಬಳಿ ಹೇಳಿಕೊಂಡಿದ್ದಾಳೆ. ತನ್ನ ಕೆಳಹೊಟ್ಟೆ ನೋಯುತ್ತಿರುವುದಾಗಿಯೂ ತಿಳಿಸಿದ್ದಾಳೆ. ಪುಟ್ಟ ಹುಡುಗಿಯ ಬಟ್ಟೆಯ ಮೇಲೆಲ್ಲ ರಕ್ತದ ಕಲೆಗಳು ಉಂಟಾಗಿದ್ದವು.

ಟ್ಯೂಷನ್​ಗೆ ಹೋದ 5ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಶಿಕ್ಷಕಿಯ ಮಗನೇ ಆರೋಪಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 28, 2021 | 4:19 PM

Share

5 ವರ್ಷದ ಬಾಲಕಿ ಮೇಲೆ 13 ವರ್ಷದ ಬಾಲಕನೊಬ್ಬ ಅತ್ಯಾಚಾರ ಮಾಡಿದ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್​​ನಲ್ಲಿ ನಡೆದಿದೆ. ಮಂಗಳವಾರ ದುರ್ಘಟನೆ ನಡೆದಿದ್ದರೂ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.  ಆರೋಪಿ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದು ಬಾಲಾಪರಾಧ ನ್ಯಾಯಾಲಯದ ಎದುರು ಹಾಜರುಪಡಿಸಿದ್ದರು. ಸದ್ಯ ಆತನನ್ನು ನೊಯ್ಡಾದ ಬಾಲಾಪರಾಧಿ ಕೇಂದ್ರದಲ್ಲಿ ಇರಿಸಲಾಗಿದೆ. 

ಬಾಲಕಿ ತನ್ನ ಸೋದರನೊಂದಿಗೆ ಟ್ಯೂಷನ್​ಗೆ ಹೋಗಿದ್ದಳು. ಆದರೆ ಅಲ್ಲಿಗೆ ಹೋಗುವಷ್ಟರಲ್ಲಿ ಶಿಕ್ಷಕಿ ಮನೆಯಲ್ಲಿ ಇರಲಿಲ್ಲ. ಬದಲಿಗೆ ಅವರ ಮಗ ಇದ್ದ. ಬಾಲಕಿಯನ್ನು ಕರೆದುಕೊಂಡು ಹೋಗಿದ್ದ ಆಕೆಯ ಸೋದರ, ತನಗೆ ಮಾರ್ಕೆಟ್​ಗೆ ಹೋಗಬೇಕು ಎಂದು ಅವಳನ್ನು ಅಲ್ಲೇ ಬಿಟ್ಟು ವಾಪಸ್​ ಮನೆಗೆ ಬಂದ. ಆದರೆ ಹಾಗೆ ಮಾಡಿದ್ದೇ ತಪ್ಪಾಯ್ತು. ಶಿಕ್ಷಕಿಯ 13ವರ್ಷದ ಬಾಲಕ ಆ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ.

ಈ ವಿಚಾರವನ್ನು ಹುಡುಗಿ ಮನೆಗೆ ಹೋಗಿ ತಾಯಿಯ ಬಳಿ ಹೇಳಿಕೊಂಡಿದ್ದಾಳೆ. ತನ್ನ ಕೆಳಹೊಟ್ಟೆ ನೋಯುತ್ತಿರುವುದಾಗಿಯೂ ತಿಳಿಸಿದ್ದಾಳೆ. ಪುಟ್ಟ ಹುಡುಗಿಯ ಬಟ್ಟೆಯ ಮೇಲೆಲ್ಲ ರಕ್ತದ ಕಲೆಗಳು ಉಂಟಾಗಿದ್ದವು. ನಂತರ ತಾಯಿ ಕೂಡಲೇ ಹೋಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಾಲಕಿ ಆಸ್ಪತ್ರೆಯಲ್ಲೇ ಇದ್ದು, ವೈದ್ಯಕೀಯ ತಪಾಸಣೆ ಮಾಡಲಾಗುತ್ತಿದೆ.

ಇದನ್ನೂ ಓದಿ: Hampi: ಹಾಯ್, ಹಲೋ ಎನ್ನುವ ಬದಲು ಸ್ವಚ್ಛ ಭಾರತ ಎಂದು ಮಾತು ಶುರು ಮಾಡಿ: ಸಚಿವ ನಾರಾಯಣ ಗೌಡ ಕರೆ

ನವೆಂಬರ್ 1ರಿಂದ ಅನಕ್ಷರಸ್ಥ ಖೈದಿಗಳಿಗೆ ಶಿಕ್ಷಣ; ಜೈಲಿನೊಳಗಿನ ಅಕ್ಷರಸ್ಥರಿಂದಲೇ ಪಾಠ: ಗೃಹ ಸಚಿವ ಆರಗ ಜ್ಞಾನೇಂದ್ರ

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು