AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯೂಷನ್​ಗೆ ಹೋದ 5ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಶಿಕ್ಷಕಿಯ ಮಗನೇ ಆರೋಪಿ

ಈ ವಿಚಾರವನ್ನು ಹುಡುಗಿ ಮನೆಗೆ ಹೋಗಿ ತಾಯಿಯ ಬಳಿ ಹೇಳಿಕೊಂಡಿದ್ದಾಳೆ. ತನ್ನ ಕೆಳಹೊಟ್ಟೆ ನೋಯುತ್ತಿರುವುದಾಗಿಯೂ ತಿಳಿಸಿದ್ದಾಳೆ. ಪುಟ್ಟ ಹುಡುಗಿಯ ಬಟ್ಟೆಯ ಮೇಲೆಲ್ಲ ರಕ್ತದ ಕಲೆಗಳು ಉಂಟಾಗಿದ್ದವು.

ಟ್ಯೂಷನ್​ಗೆ ಹೋದ 5ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಶಿಕ್ಷಕಿಯ ಮಗನೇ ಆರೋಪಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 28, 2021 | 4:19 PM

Share

5 ವರ್ಷದ ಬಾಲಕಿ ಮೇಲೆ 13 ವರ್ಷದ ಬಾಲಕನೊಬ್ಬ ಅತ್ಯಾಚಾರ ಮಾಡಿದ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್​​ನಲ್ಲಿ ನಡೆದಿದೆ. ಮಂಗಳವಾರ ದುರ್ಘಟನೆ ನಡೆದಿದ್ದರೂ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.  ಆರೋಪಿ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದು ಬಾಲಾಪರಾಧ ನ್ಯಾಯಾಲಯದ ಎದುರು ಹಾಜರುಪಡಿಸಿದ್ದರು. ಸದ್ಯ ಆತನನ್ನು ನೊಯ್ಡಾದ ಬಾಲಾಪರಾಧಿ ಕೇಂದ್ರದಲ್ಲಿ ಇರಿಸಲಾಗಿದೆ. 

ಬಾಲಕಿ ತನ್ನ ಸೋದರನೊಂದಿಗೆ ಟ್ಯೂಷನ್​ಗೆ ಹೋಗಿದ್ದಳು. ಆದರೆ ಅಲ್ಲಿಗೆ ಹೋಗುವಷ್ಟರಲ್ಲಿ ಶಿಕ್ಷಕಿ ಮನೆಯಲ್ಲಿ ಇರಲಿಲ್ಲ. ಬದಲಿಗೆ ಅವರ ಮಗ ಇದ್ದ. ಬಾಲಕಿಯನ್ನು ಕರೆದುಕೊಂಡು ಹೋಗಿದ್ದ ಆಕೆಯ ಸೋದರ, ತನಗೆ ಮಾರ್ಕೆಟ್​ಗೆ ಹೋಗಬೇಕು ಎಂದು ಅವಳನ್ನು ಅಲ್ಲೇ ಬಿಟ್ಟು ವಾಪಸ್​ ಮನೆಗೆ ಬಂದ. ಆದರೆ ಹಾಗೆ ಮಾಡಿದ್ದೇ ತಪ್ಪಾಯ್ತು. ಶಿಕ್ಷಕಿಯ 13ವರ್ಷದ ಬಾಲಕ ಆ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ.

ಈ ವಿಚಾರವನ್ನು ಹುಡುಗಿ ಮನೆಗೆ ಹೋಗಿ ತಾಯಿಯ ಬಳಿ ಹೇಳಿಕೊಂಡಿದ್ದಾಳೆ. ತನ್ನ ಕೆಳಹೊಟ್ಟೆ ನೋಯುತ್ತಿರುವುದಾಗಿಯೂ ತಿಳಿಸಿದ್ದಾಳೆ. ಪುಟ್ಟ ಹುಡುಗಿಯ ಬಟ್ಟೆಯ ಮೇಲೆಲ್ಲ ರಕ್ತದ ಕಲೆಗಳು ಉಂಟಾಗಿದ್ದವು. ನಂತರ ತಾಯಿ ಕೂಡಲೇ ಹೋಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಾಲಕಿ ಆಸ್ಪತ್ರೆಯಲ್ಲೇ ಇದ್ದು, ವೈದ್ಯಕೀಯ ತಪಾಸಣೆ ಮಾಡಲಾಗುತ್ತಿದೆ.

ಇದನ್ನೂ ಓದಿ: Hampi: ಹಾಯ್, ಹಲೋ ಎನ್ನುವ ಬದಲು ಸ್ವಚ್ಛ ಭಾರತ ಎಂದು ಮಾತು ಶುರು ಮಾಡಿ: ಸಚಿವ ನಾರಾಯಣ ಗೌಡ ಕರೆ

ನವೆಂಬರ್ 1ರಿಂದ ಅನಕ್ಷರಸ್ಥ ಖೈದಿಗಳಿಗೆ ಶಿಕ್ಷಣ; ಜೈಲಿನೊಳಗಿನ ಅಕ್ಷರಸ್ಥರಿಂದಲೇ ಪಾಠ: ಗೃಹ ಸಚಿವ ಆರಗ ಜ್ಞಾನೇಂದ್ರ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ