AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದ ನದಿಯಲ್ಲಿ ಹಠಾತ್ ನೀರು ಏರಿಕೆ; ಕೊಚ್ಚಿ ಹೋದ 14 ಕಾರು, ಅಪಾಯದಿಂದ ಜನ ಪಾರು

ಎಸ್‌ಯುವಿಗಳು ಸೇರಿದಂತೆ ಕನಿಷ್ಠ 14 ಕಾರುಗಳು ನೀರಿನಲ್ಲಿ ಕೊಚ್ಚಿಹೋಗಿವೆ ಎಂದು ಅಧಿಕಾರಿ ಹೇಳಿದರು. ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳೀಯ ಗ್ರಾಮಸ್ಥರ ಟ್ರ್ಯಾಕ್ಟರ್‌ಗಳ ಸಹಾಯದಿಂದ 10 ಕಾರುಗಳು ಮತ್ತು ಎಸ್‌ಯುವಿಗಳನ್ನು ಹೊರತೆಗೆದಿದ್ದಾರೆ.

ಮಧ್ಯಪ್ರದೇಶದ ನದಿಯಲ್ಲಿ ಹಠಾತ್ ನೀರು ಏರಿಕೆ; ಕೊಚ್ಚಿ ಹೋದ 14 ಕಾರು, ಅಪಾಯದಿಂದ ಜನ ಪಾರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 08, 2022 | 8:51 PM

Share

ಖಾರ್ಗೋನ್: ಮಳೆಯ ನಂತರ ನದಿಯಲ್ಲಿ ಹಠಾತ್ ನೀರಿನ ಏರಿಕೆಯಿಂದಾಗಿ ಮಧ್ಯಪ್ರದೇಶದ (Madhya Pradesh) ಖಾರ್ಗೋನ್ ಜಿಲ್ಲೆಯಲ್ಲಿ ಸುಮಾರು 50 ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ಅರಣ್ಯ ಪ್ರದೇಶದ ಎತ್ತರದ ಸ್ಥಳಗಳಿಗೆ ಓಡಿದ್ದು ಅವರು ಬಂದಿದ್ದ 14 ಕಾರುಗಳು ನೀರಲ್ಲಿ ಕೊಚ್ಚಿ ಹೋಗಿವೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಇಂದೋರ್ ಜಿಲ್ಲೆಯ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಜನರ ಗುಂಪೊಂದು  ಭಾನುವಾರ ಸಂಜೆ ಬಲವಾಡ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಕೂಟ್ ಅರಣ್ಯದ ಸುಕ್ದಿ ನದಿಯ ಬಳಿ ಪಿಕ್ನಿಕ್ ಗಾಗಿ ಬಂದಿದ್ದರು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಸಿಂಗ್ ಪವಾರ್ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಮಳೆ ಬಂದಾಗ ನದಿಯ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದೆ. ಪಿಕ್ನಿಕ್ ಮಾಡುವವರು ತಮ್ಮ ಕಾರುಗಳು ಮತ್ತು ಎಸ್‌ಯುವಿ ಬಿಟ್ಟು ತಮ್ಮ ಪ್ರಾಣ ಉಳಿಸಿಕೊಳ್ಳಲು ಕಾಡಿನ ಎತ್ತರದ ಸ್ಥಳಗಳಿಗೆ ಧಾವಿಸಿದರು ಎಂದು ಅಧಿಕಾರಿ ಹೇಳಿದರು.

ಎಸ್‌ಯುವಿಗಳು ಸೇರಿದಂತೆ ಕನಿಷ್ಠ 14 ಕಾರುಗಳು ನೀರಿನಲ್ಲಿ ಕೊಚ್ಚಿಹೋಗಿವೆ ಎಂದು ಅಧಿಕಾರಿ ಹೇಳಿದರು. ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳೀಯ ಗ್ರಾಮಸ್ಥರ ಟ್ರ್ಯಾಕ್ಟರ್‌ಗಳ ಸಹಾಯದಿಂದ 10 ಕಾರುಗಳು ಮತ್ತು ಎಸ್‌ಯುವಿಗಳನ್ನು ಹೊರತೆಗೆದಿದ್ದಾರೆ.

ಆದಾಗ್ಯೂ, ವಾಹನಗಳಿಗೆ ನೀರು ನುಗ್ಗಿದ್ದ ಕಾರಣ ತಾಂತ್ರಿಕ ದೋಷಗಳಿಂದ ಕಾರು ಸ್ಟಾರ್ಟ್ ಆಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಪಿಕ್ನಿಕ್‌ಗೆ ಬಂದವರನ್ನು ಬೇರೆ ವಾಹನಗಳಲ್ಲಿ ಅವರ ಮನೆಗಳಿಗೆ ಕಳುಹಿಸಲಾಯಿತು.

ಇತರ ಮೂರು ಕಾರುಗಳು ದೂರ ಕೊಚ್ಚಿ ಹೋಗಿದ್ದು ಒಂದು ಸೇತುವೆಯ ಕಂಬದ ಬಳಿ ಸಿಲುಕಿಕೊಂಡಿದೆ ಎಂದು ಅವರು ಹೇಳಿದರು.  ಅಂತಹ ಸ್ಥಳಗಳಲ್ಲಿ ಹಠಾತ್ ನೀರು ಉಲ್ಬಣಗೊಳ್ಳುವ ಅಪಾಯದ ಬಗ್ಗೆ ತಿಳಿಸಲು ಈ ಪ್ರದೇಶದಲ್ಲಿ ಬೋರ್ಡ್ ಹಾಕಲು ಸ್ಥಳೀಯ ಪೊಲೀಸರನ್ನು ಕೇಳಲಾಗಿದೆ ಎಂದು ಅಧಿಕಾರಿ ಹೇಳಿದರು.

ಹೆಚ್ಚಿನ ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ