AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದ ನದಿಯಲ್ಲಿ ಹಠಾತ್ ನೀರು ಏರಿಕೆ; ಕೊಚ್ಚಿ ಹೋದ 14 ಕಾರು, ಅಪಾಯದಿಂದ ಜನ ಪಾರು

ಎಸ್‌ಯುವಿಗಳು ಸೇರಿದಂತೆ ಕನಿಷ್ಠ 14 ಕಾರುಗಳು ನೀರಿನಲ್ಲಿ ಕೊಚ್ಚಿಹೋಗಿವೆ ಎಂದು ಅಧಿಕಾರಿ ಹೇಳಿದರು. ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳೀಯ ಗ್ರಾಮಸ್ಥರ ಟ್ರ್ಯಾಕ್ಟರ್‌ಗಳ ಸಹಾಯದಿಂದ 10 ಕಾರುಗಳು ಮತ್ತು ಎಸ್‌ಯುವಿಗಳನ್ನು ಹೊರತೆಗೆದಿದ್ದಾರೆ.

ಮಧ್ಯಪ್ರದೇಶದ ನದಿಯಲ್ಲಿ ಹಠಾತ್ ನೀರು ಏರಿಕೆ; ಕೊಚ್ಚಿ ಹೋದ 14 ಕಾರು, ಅಪಾಯದಿಂದ ಜನ ಪಾರು
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 08, 2022 | 8:51 PM

Share

ಖಾರ್ಗೋನ್: ಮಳೆಯ ನಂತರ ನದಿಯಲ್ಲಿ ಹಠಾತ್ ನೀರಿನ ಏರಿಕೆಯಿಂದಾಗಿ ಮಧ್ಯಪ್ರದೇಶದ (Madhya Pradesh) ಖಾರ್ಗೋನ್ ಜಿಲ್ಲೆಯಲ್ಲಿ ಸುಮಾರು 50 ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ಅರಣ್ಯ ಪ್ರದೇಶದ ಎತ್ತರದ ಸ್ಥಳಗಳಿಗೆ ಓಡಿದ್ದು ಅವರು ಬಂದಿದ್ದ 14 ಕಾರುಗಳು ನೀರಲ್ಲಿ ಕೊಚ್ಚಿ ಹೋಗಿವೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಇಂದೋರ್ ಜಿಲ್ಲೆಯ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಜನರ ಗುಂಪೊಂದು  ಭಾನುವಾರ ಸಂಜೆ ಬಲವಾಡ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಕೂಟ್ ಅರಣ್ಯದ ಸುಕ್ದಿ ನದಿಯ ಬಳಿ ಪಿಕ್ನಿಕ್ ಗಾಗಿ ಬಂದಿದ್ದರು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಸಿಂಗ್ ಪವಾರ್ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಮಳೆ ಬಂದಾಗ ನದಿಯ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದೆ. ಪಿಕ್ನಿಕ್ ಮಾಡುವವರು ತಮ್ಮ ಕಾರುಗಳು ಮತ್ತು ಎಸ್‌ಯುವಿ ಬಿಟ್ಟು ತಮ್ಮ ಪ್ರಾಣ ಉಳಿಸಿಕೊಳ್ಳಲು ಕಾಡಿನ ಎತ್ತರದ ಸ್ಥಳಗಳಿಗೆ ಧಾವಿಸಿದರು ಎಂದು ಅಧಿಕಾರಿ ಹೇಳಿದರು.

ಎಸ್‌ಯುವಿಗಳು ಸೇರಿದಂತೆ ಕನಿಷ್ಠ 14 ಕಾರುಗಳು ನೀರಿನಲ್ಲಿ ಕೊಚ್ಚಿಹೋಗಿವೆ ಎಂದು ಅಧಿಕಾರಿ ಹೇಳಿದರು. ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳೀಯ ಗ್ರಾಮಸ್ಥರ ಟ್ರ್ಯಾಕ್ಟರ್‌ಗಳ ಸಹಾಯದಿಂದ 10 ಕಾರುಗಳು ಮತ್ತು ಎಸ್‌ಯುವಿಗಳನ್ನು ಹೊರತೆಗೆದಿದ್ದಾರೆ.

ಆದಾಗ್ಯೂ, ವಾಹನಗಳಿಗೆ ನೀರು ನುಗ್ಗಿದ್ದ ಕಾರಣ ತಾಂತ್ರಿಕ ದೋಷಗಳಿಂದ ಕಾರು ಸ್ಟಾರ್ಟ್ ಆಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಪಿಕ್ನಿಕ್‌ಗೆ ಬಂದವರನ್ನು ಬೇರೆ ವಾಹನಗಳಲ್ಲಿ ಅವರ ಮನೆಗಳಿಗೆ ಕಳುಹಿಸಲಾಯಿತು.

ಇತರ ಮೂರು ಕಾರುಗಳು ದೂರ ಕೊಚ್ಚಿ ಹೋಗಿದ್ದು ಒಂದು ಸೇತುವೆಯ ಕಂಬದ ಬಳಿ ಸಿಲುಕಿಕೊಂಡಿದೆ ಎಂದು ಅವರು ಹೇಳಿದರು.  ಅಂತಹ ಸ್ಥಳಗಳಲ್ಲಿ ಹಠಾತ್ ನೀರು ಉಲ್ಬಣಗೊಳ್ಳುವ ಅಪಾಯದ ಬಗ್ಗೆ ತಿಳಿಸಲು ಈ ಪ್ರದೇಶದಲ್ಲಿ ಬೋರ್ಡ್ ಹಾಕಲು ಸ್ಥಳೀಯ ಪೊಲೀಸರನ್ನು ಕೇಳಲಾಗಿದೆ ಎಂದು ಅಧಿಕಾರಿ ಹೇಳಿದರು.

ಹೆಚ್ಚಿನ ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ

Follow Us
Web contact
Web contact

TV9 Kannada

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು