AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದ ನದಿಯಲ್ಲಿ ಹಠಾತ್ ನೀರು ಏರಿಕೆ; ಕೊಚ್ಚಿ ಹೋದ 14 ಕಾರು, ಅಪಾಯದಿಂದ ಜನ ಪಾರು

ಎಸ್‌ಯುವಿಗಳು ಸೇರಿದಂತೆ ಕನಿಷ್ಠ 14 ಕಾರುಗಳು ನೀರಿನಲ್ಲಿ ಕೊಚ್ಚಿಹೋಗಿವೆ ಎಂದು ಅಧಿಕಾರಿ ಹೇಳಿದರು. ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳೀಯ ಗ್ರಾಮಸ್ಥರ ಟ್ರ್ಯಾಕ್ಟರ್‌ಗಳ ಸಹಾಯದಿಂದ 10 ಕಾರುಗಳು ಮತ್ತು ಎಸ್‌ಯುವಿಗಳನ್ನು ಹೊರತೆಗೆದಿದ್ದಾರೆ.

ಮಧ್ಯಪ್ರದೇಶದ ನದಿಯಲ್ಲಿ ಹಠಾತ್ ನೀರು ಏರಿಕೆ; ಕೊಚ್ಚಿ ಹೋದ 14 ಕಾರು, ಅಪಾಯದಿಂದ ಜನ ಪಾರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 08, 2022 | 8:51 PM

Share

ಖಾರ್ಗೋನ್: ಮಳೆಯ ನಂತರ ನದಿಯಲ್ಲಿ ಹಠಾತ್ ನೀರಿನ ಏರಿಕೆಯಿಂದಾಗಿ ಮಧ್ಯಪ್ರದೇಶದ (Madhya Pradesh) ಖಾರ್ಗೋನ್ ಜಿಲ್ಲೆಯಲ್ಲಿ ಸುಮಾರು 50 ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ಅರಣ್ಯ ಪ್ರದೇಶದ ಎತ್ತರದ ಸ್ಥಳಗಳಿಗೆ ಓಡಿದ್ದು ಅವರು ಬಂದಿದ್ದ 14 ಕಾರುಗಳು ನೀರಲ್ಲಿ ಕೊಚ್ಚಿ ಹೋಗಿವೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಇಂದೋರ್ ಜಿಲ್ಲೆಯ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಜನರ ಗುಂಪೊಂದು  ಭಾನುವಾರ ಸಂಜೆ ಬಲವಾಡ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಕೂಟ್ ಅರಣ್ಯದ ಸುಕ್ದಿ ನದಿಯ ಬಳಿ ಪಿಕ್ನಿಕ್ ಗಾಗಿ ಬಂದಿದ್ದರು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಸಿಂಗ್ ಪವಾರ್ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಮಳೆ ಬಂದಾಗ ನದಿಯ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದೆ. ಪಿಕ್ನಿಕ್ ಮಾಡುವವರು ತಮ್ಮ ಕಾರುಗಳು ಮತ್ತು ಎಸ್‌ಯುವಿ ಬಿಟ್ಟು ತಮ್ಮ ಪ್ರಾಣ ಉಳಿಸಿಕೊಳ್ಳಲು ಕಾಡಿನ ಎತ್ತರದ ಸ್ಥಳಗಳಿಗೆ ಧಾವಿಸಿದರು ಎಂದು ಅಧಿಕಾರಿ ಹೇಳಿದರು.

ಎಸ್‌ಯುವಿಗಳು ಸೇರಿದಂತೆ ಕನಿಷ್ಠ 14 ಕಾರುಗಳು ನೀರಿನಲ್ಲಿ ಕೊಚ್ಚಿಹೋಗಿವೆ ಎಂದು ಅಧಿಕಾರಿ ಹೇಳಿದರು. ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳೀಯ ಗ್ರಾಮಸ್ಥರ ಟ್ರ್ಯಾಕ್ಟರ್‌ಗಳ ಸಹಾಯದಿಂದ 10 ಕಾರುಗಳು ಮತ್ತು ಎಸ್‌ಯುವಿಗಳನ್ನು ಹೊರತೆಗೆದಿದ್ದಾರೆ.

ಆದಾಗ್ಯೂ, ವಾಹನಗಳಿಗೆ ನೀರು ನುಗ್ಗಿದ್ದ ಕಾರಣ ತಾಂತ್ರಿಕ ದೋಷಗಳಿಂದ ಕಾರು ಸ್ಟಾರ್ಟ್ ಆಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಪಿಕ್ನಿಕ್‌ಗೆ ಬಂದವರನ್ನು ಬೇರೆ ವಾಹನಗಳಲ್ಲಿ ಅವರ ಮನೆಗಳಿಗೆ ಕಳುಹಿಸಲಾಯಿತು.

ಇತರ ಮೂರು ಕಾರುಗಳು ದೂರ ಕೊಚ್ಚಿ ಹೋಗಿದ್ದು ಒಂದು ಸೇತುವೆಯ ಕಂಬದ ಬಳಿ ಸಿಲುಕಿಕೊಂಡಿದೆ ಎಂದು ಅವರು ಹೇಳಿದರು.  ಅಂತಹ ಸ್ಥಳಗಳಲ್ಲಿ ಹಠಾತ್ ನೀರು ಉಲ್ಬಣಗೊಳ್ಳುವ ಅಪಾಯದ ಬಗ್ಗೆ ತಿಳಿಸಲು ಈ ಪ್ರದೇಶದಲ್ಲಿ ಬೋರ್ಡ್ ಹಾಕಲು ಸ್ಥಳೀಯ ಪೊಲೀಸರನ್ನು ಕೇಳಲಾಗಿದೆ ಎಂದು ಅಧಿಕಾರಿ ಹೇಳಿದರು.

ಹೆಚ್ಚಿನ ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ