AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ರೈಲಿನಲ್ಲಿ 4 ಮಂದಿಯನ್ನು ಗುಂಡಿಕ್ಕಿ ಕೊಂದ ಆರ್‌ಪಿಎಫ್ ಸಿಬ್ಬಂದಿಗೆ 14 ದಿನ ನ್ಯಾಯಾಂಗ ಬಂಧನ

ಚಲಿಸುತ್ತಿದ್ದ ರೈಲಿನಲ್ಲಿ ತನ್ನ ಹಿರಿಯ ಸಹೋದ್ಯೋಗಿ ಮತ್ತು ಮೂವರು ಪ್ರಯಾಣಿಕರ ಸೇರಿದಂದತೆ ಒಟ್ಟು ನಾಲ್ಕು ಮಂದಿಯ ಮೇಲೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಕಾನ್‌ಸ್ಟೆಬಲ್ ಚೇತನ್ ಸಿಂಗ್​​ಗೆ 14 ದಿನ ನ್ಯಾಯಾಂಗ ಬಂಧನ.

ಚಲಿಸುತ್ತಿದ್ದ ರೈಲಿನಲ್ಲಿ 4 ಮಂದಿಯನ್ನು ಗುಂಡಿಕ್ಕಿ ಕೊಂದ ಆರ್‌ಪಿಎಫ್ ಸಿಬ್ಬಂದಿಗೆ 14 ದಿನ ನ್ಯಾಯಾಂಗ ಬಂಧನ
ಚೇತನ್ ಸಿಂಗ್
ಅಕ್ಷಯ್​ ಪಲ್ಲಮಜಲು​​
|

Updated on: Aug 11, 2023 | 4:11 PM

Share

ಮುಂಬೈ, ಆ. 11: ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ತನ್ನ ಹಿರಿಯ ಸಹೋದ್ಯೋಗಿ ಮತ್ತು ಮೂವರು ಪ್ರಯಾಣಿಕರ ಸೇರಿದಂತೆ ಒಟ್ಟು ನಾಲ್ಕು ಮಂದಿಯ ಮೇಲೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಕಾನ್‌ಸ್ಟೆಬಲ್ ಚೇತನ್ ಸಿಂಗ್ ಅವರನ್ನು ಬಂಧಿಸಲಾಗಿತ್ತು. ಇಂದು (ಆ.11) ಅವರನ್ನು ವಿಚಾರಣೆ ನಡೆಸಿದೆ ಮುಂಬೈ ನ್ಯಾಯಾಲಯವು  14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಚೇತನ್ ಸಿಂಗ್ ಅವರನ್ನು ಬಂಧಿಸಿದ ನಂತರ ಇಂದು ಬೊರಿವಲಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಇನ್ನೂ ಹೆಚ್ಚಿನ ದಿನಗಳವರೆಗೆ ಅವರು ಬಂಧನದಲ್ಲಿರಬೇಕು ಎಂಬ ಯಾವುದೇ ಮನವಿಯನ್ನು ಮಾಡದ ಕಾರಣ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇದನ್ನೂ ಓದಿ:ಚಲಿಸುತ್ತಿದ್ದ ಜೈಪುರ ಎಕ್ಸ್​ಪ್ರೆಸ್​ ರೈಲಿನಲ್ಲಿ ಗುಂಡಿನ ದಾಳಿ, ನಾಲ್ವರು ಸಾವು

ಚೇತನ್ ಸಿಂಗ್ ಅವರನ್ನು ಹೆಚ್ಚಿನ ತನಿಖೆ ನಡೆಸಲು ತನಿಖಾ ಸಂಸ್ಥೆ ಬ್ರೈನ್ ಮ್ಯಾಪಿಂಗ್, ಪಾಲಿಗ್ರಾಫ್ ಮತ್ತು ನಾರ್ಕೋ ವಿಶ್ಲೇಷಣೆ ಪರೀಕ್ಷೆಗೆ ಅವಕಾಶವನ್ನು ಕೇಳಿತ್ತು. ಆದರೆ ಈ ಮನವಿಯನ್ನು ನ್ಯಾಯಾಲಯ ನಿರಾಕರಿಸಿದೆ. ಆದರೆ ನ್ಯಾಯಲಯವು GRP (Gastrin-Releasing Peptide)ಪರೀಕ್ಷೆಗಳಿಗೆ ಒಪ್ಪಿಗೆ ನೀಡಿತ್ತು. ಈ ವಿಷಯವು ತುಂಬಾ ಗಂಭೀರವಾಗಿದೆ ಮತ್ತು ಸಂಪೂರ್ಣ ತನಿಖೆಯ ಅಗತ್ಯವಿದೆ ಎಂದು ನ್ಯಾಯಲಯ ಹೇಳಿದೆ.

ಜುಲೈ 31ರಂದು ಮಹಾರಾಷ್ಟ್ರದ ಪಾಲ್ಘರ್ ರೈಲು ನಿಲ್ದಾಣದ ಬಳಿ ಚಲಿಸುತ್ತಿರುವ ಜೈಪುರ-ಮುಂಬೈ ಸೆಂಟ್ರಲ್ ಎಕ್ಸ್‌ಪ್ರೆಸ್‌ನಲ್ಲಿ ತನ್ನ ಹಿರಿಯ ಸಹೋದ್ಯೋಗಿ ಮತ್ತು ಮೂವರು ಪ್ರಯಾಣಿಕರ ಮೇಲೆ ಗುಂಡು ಹಾರಿಸಿ, ಪರಾರಿಯಾಗಲು ಯತ್ನಿಸಿದಾಗ ರೈಲ್ವೆ ಪೊಲೀಸರು ಅವರನ್ನು ಹಿಡಿದು ಬಂಧಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ