AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಕದ ಮನೆಯ ನಾಯಿ ಕಚ್ಚಿದ್ದ ವಿಷಯ ಮುಚ್ಚಿಟ್ಟಿದ್ದ ಬಾಲಕ, ಒಂದೂವರೆ ತಿಂಗಳ ಬಳಿಕ ರೇಬಿಸ್​ನಿಂದ ಸಾವು

ಪಕ್ಕದ ಮನೆಯ ನಾಯಿ ಕಚ್ಚಿದ್ದ ವಿಷಯವನ್ನು ಪೋಷಕರಿಂದ ಮುಚ್ಚಿಟ್ಟಿದ್ದ 14 ವರ್ಷದ ಬಾಲಕ ಒಂದೂವರೆ ತಿಂಗಳ ಬಳಿಕ ರೇಬಿಸ್​ನಿಂದ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ನಡೆದಿದೆ. ಸಬೆಜ್‌ನ ಪಕ್ಕದ ಮನೆಯ ಮಹಿಳೆಯೊಬ್ಬರು ಬೀದಿನಾಯಿಗಳನ್ನು ಸಾಕುತ್ತಾರೆ ಮತ್ತು ಆಹಾರ ನೀಡುತ್ತಾರೆ ಮತ್ತು ಐದರಿಂದ ಆರು ನಾಯಿಗಳು ಈ ಪ್ರದೇಶದಲ್ಲೇ ಇರುತ್ತದೆ. ಸಬೇಜ್ ಎಂಬ ಬಾಲಕನನ್ನು ಆ ನಾಯಿಗಳಲ್ಲಿ ಒಂದು ನಾಯಿ ಕಚ್ಚಿದೆ ಎನ್ನಲಾಗಿದೆ. ಈ ಹಿಂದೆಯೂ ಈ ನಾಯಿಗಳು ಇತರರಿಗೆ ಕಚ್ಚಿವೆ ಎನ್ನಲಾಗಿದೆ.

ಪಕ್ಕದ ಮನೆಯ ನಾಯಿ ಕಚ್ಚಿದ್ದ ವಿಷಯ ಮುಚ್ಚಿಟ್ಟಿದ್ದ ಬಾಲಕ, ಒಂದೂವರೆ ತಿಂಗಳ ಬಳಿಕ ರೇಬಿಸ್​ನಿಂದ ಸಾವು
ರೇಬಿಸ್​ಗೆ ಬಾಲಕ ಬಲಿImage Credit source: India Today
ನಯನಾ ರಾಜೀವ್
|

Updated on:Sep 06, 2023 | 9:14 AM

Share

ಪಕ್ಕದ ಮನೆಯ ನಾಯಿ ಕಚ್ಚಿದ್ದ ವಿಷಯವನ್ನು ಪೋಷಕರಿಂದ ಮುಚ್ಚಿಟ್ಟಿದ್ದ 14 ವರ್ಷದ ಬಾಲಕ ಒಂದೂವರೆ ತಿಂಗಳ ಬಳಿಕ ರೇಬಿಸ್​(Rabies)ನಿಂದ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ನಡೆದಿದೆ. ಶಾವೇಜ್​ನ ಪಕ್ಕದ ಮನೆಯ ಮಹಿಳೆಯೊಬ್ಬರು ಬೀದಿನಾಯಿಗಳನ್ನು ಸಾಕುತ್ತಾರೆ ಮತ್ತು ಆಹಾರ ನೀಡುತ್ತಾರೆ ಮತ್ತು ಐದರಿಂದ ಆರು ನಾಯಿಗಳು ಈ ಪ್ರದೇಶದಲ್ಲೇ ಇರುತ್ತದೆ. ಸಬೇಜ್ ಎಂಬ ಬಾಲಕನನ್ನು ಆ ನಾಯಿಗಳಲ್ಲಿ ಒಂದು ನಾಯಿ ಕಚ್ಚಿದೆ ಎನ್ನಲಾಗಿದೆ. ಈ ಹಿಂದೆಯೂ ಈ ನಾಯಿಗಳು ಇತರರಿಗೆ ಕಚ್ಚಿವೆ ಎನ್ನಲಾಗಿದೆ.

ಭಯದಿಂದ, ಸಬೆಜ್ ತನ್ನ ಕುಟುಂಬಕ್ಕೆ ಘಟನೆಯ ಬಗ್ಗೆ ಹೇಳಲಿಲ್ಲ ಮತ್ತು ನಾಲ್ಕು ದಿನಗಳ ನಂತರ ರೇಬೀಸ್ ರೋಗಲಕ್ಷಣಗಳು ಕಾಣಿಸಿಕೊಳ್ಳಲಾರಂಭಿಸಿತ್ತು ಎಂದು ಆತನ ಅಜ್ಜ ಮತ್ಲುಬ್ ಅಹ್ಮದ್ ಹೇಳಿದ್ದಾರೆ. ಕ್ರಮೇಣವಾಗಿ ಸಬೇಜ್ ಗಾಳಿ ಮತ್ತು ನೀರನ್ನು ಕಂಡರೆ ಭಯಪಡುತ್ತಿದ್ದ, ಸದಾ ಕತ್ತಲೆಯಲ್ಲಿಯೇ ಇರುತ್ತಿದ್ದ, ಆಗಾಗ ಭಯಗೊಂಡು ಗಲಾಟೆ ಮಾಡುತ್ತಿದ್ದ ಎಂದು ಹೇಳಿದ್ದಾರೆ.

ಸಬೇಜ್ ಅವರನ್ನು ಘಾಜಿಯಾಬಾದ್, ಮೀರತ್ ಮತ್ತು ದೆಹಲಿಯ ಏಮ್ಸ್‌ನ ಹಲವಾರು ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು. ಚಿಕಿತ್ಸೆಗಾಗಿ ಬುಲಂದ್‌ಶಹರ್‌ಗೆ ಕೂಡ ಕರೆದೊಯ್ಯಲಾಯಿತು. ತನ್ನ ತಂದೆ ಯಾಕೂಬ್‌ನೊಂದಿಗೆ ಬುಲಂದ್‌ಶಹರ್‌ನಿಂದ ಹಿಂದಿರುಗುತ್ತಿದ್ದಾಗ ಶಾವೇಜ್ ಮೃತಪಟ್ಟಿದ್ದಾನೆ.

ಶಾವೇಜ್ ಅವರ ಕುಟುಂಬವು ಘಟನೆಯ ಬಗ್ಗೆ ಕ್ರಮಕ್ಕೆ ಒತ್ತಾಯಿಸಿದೆ ಮತ್ತು ಇಂತಹ ಘಟನೆಗಳು ನಡೆಯದಂತೆ ಆಡಳಿತ ಮತ್ತು ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಘಾಜಿಯಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಮಹಿಳೆಗೆ ನೋಟಿಸ್ ಜಾರಿ ಮಾಡಿದೆ, ಅವರು ಅನಧಿಕೃತವಾಗಿ ನಾಯಿಯನ್ನು ಸಾಕುತ್ತಿದ್ದು, ಅವು ಬೀದಿಯಲ್ಲಿ ಓಡಾಡುವವರನ್ನು ಕಚ್ಚುತ್ತಿದೆ ಎಂದು ಹೇಳಿದ್ದಾರೆ.

ಈ ನಾಯಿಗಳಿಗೆ ರೇಬಿಸ್ ಲಸಿಕೆಗಳನ್ನು ನೀಡಲಾಗಿದೆಯೇ ಎಂದು ಕಾರ್ಪೊರೇಷನ್ ಪ್ರಶ್ನಿಸಿದೆ. ಘಾಜಿಯಾಬಾದ್​ ಮುನ್ಸಿಪಲ್ ಕಾರ್ಪೊರೇಷನ್ ಅಡಿಯಲ್ಲಿ, ಸಾಕು ನಾಯಿಗಳಿಗೆ ನೋಂದಣಿ ಮತ್ತು ಲಸಿಕೆ ಹಾಕುವುದು ಕಡ್ಡಾಯವಾಗಿದೆ.

ನಾಯಿಗಳ ನೋಂದಣಿ ವಿವರಗಳೊಂದಿಗೆ ನೋಟಿಸ್‌ಗೆ ಪ್ರತಿಕ್ರಿಯಿಸಲು ಮಹಿಳೆಗೆ ಮೂರು ದಿನಗಳ ಕಾಲಾವಕಾಶ ನೀಡಲಾಗಿದೆ, ವಿಫಲವಾದರೆ 5,000 ರೂ. ದಂಡ ವಿಧಿಸಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:14 am, Wed, 6 September 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ