AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಕದ ಮನೆಯ ನಾಯಿ ಕಚ್ಚಿದ್ದ ವಿಷಯ ಮುಚ್ಚಿಟ್ಟಿದ್ದ ಬಾಲಕ, ಒಂದೂವರೆ ತಿಂಗಳ ಬಳಿಕ ರೇಬಿಸ್​ನಿಂದ ಸಾವು

ಪಕ್ಕದ ಮನೆಯ ನಾಯಿ ಕಚ್ಚಿದ್ದ ವಿಷಯವನ್ನು ಪೋಷಕರಿಂದ ಮುಚ್ಚಿಟ್ಟಿದ್ದ 14 ವರ್ಷದ ಬಾಲಕ ಒಂದೂವರೆ ತಿಂಗಳ ಬಳಿಕ ರೇಬಿಸ್​ನಿಂದ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ನಡೆದಿದೆ. ಸಬೆಜ್‌ನ ಪಕ್ಕದ ಮನೆಯ ಮಹಿಳೆಯೊಬ್ಬರು ಬೀದಿನಾಯಿಗಳನ್ನು ಸಾಕುತ್ತಾರೆ ಮತ್ತು ಆಹಾರ ನೀಡುತ್ತಾರೆ ಮತ್ತು ಐದರಿಂದ ಆರು ನಾಯಿಗಳು ಈ ಪ್ರದೇಶದಲ್ಲೇ ಇರುತ್ತದೆ. ಸಬೇಜ್ ಎಂಬ ಬಾಲಕನನ್ನು ಆ ನಾಯಿಗಳಲ್ಲಿ ಒಂದು ನಾಯಿ ಕಚ್ಚಿದೆ ಎನ್ನಲಾಗಿದೆ. ಈ ಹಿಂದೆಯೂ ಈ ನಾಯಿಗಳು ಇತರರಿಗೆ ಕಚ್ಚಿವೆ ಎನ್ನಲಾಗಿದೆ.

ಪಕ್ಕದ ಮನೆಯ ನಾಯಿ ಕಚ್ಚಿದ್ದ ವಿಷಯ ಮುಚ್ಚಿಟ್ಟಿದ್ದ ಬಾಲಕ, ಒಂದೂವರೆ ತಿಂಗಳ ಬಳಿಕ ರೇಬಿಸ್​ನಿಂದ ಸಾವು
ರೇಬಿಸ್​ಗೆ ಬಾಲಕ ಬಲಿImage Credit source: India Today
ನಯನಾ ರಾಜೀವ್
|

Updated on:Sep 06, 2023 | 9:14 AM

Share

ಪಕ್ಕದ ಮನೆಯ ನಾಯಿ ಕಚ್ಚಿದ್ದ ವಿಷಯವನ್ನು ಪೋಷಕರಿಂದ ಮುಚ್ಚಿಟ್ಟಿದ್ದ 14 ವರ್ಷದ ಬಾಲಕ ಒಂದೂವರೆ ತಿಂಗಳ ಬಳಿಕ ರೇಬಿಸ್​(Rabies)ನಿಂದ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ನಡೆದಿದೆ. ಶಾವೇಜ್​ನ ಪಕ್ಕದ ಮನೆಯ ಮಹಿಳೆಯೊಬ್ಬರು ಬೀದಿನಾಯಿಗಳನ್ನು ಸಾಕುತ್ತಾರೆ ಮತ್ತು ಆಹಾರ ನೀಡುತ್ತಾರೆ ಮತ್ತು ಐದರಿಂದ ಆರು ನಾಯಿಗಳು ಈ ಪ್ರದೇಶದಲ್ಲೇ ಇರುತ್ತದೆ. ಸಬೇಜ್ ಎಂಬ ಬಾಲಕನನ್ನು ಆ ನಾಯಿಗಳಲ್ಲಿ ಒಂದು ನಾಯಿ ಕಚ್ಚಿದೆ ಎನ್ನಲಾಗಿದೆ. ಈ ಹಿಂದೆಯೂ ಈ ನಾಯಿಗಳು ಇತರರಿಗೆ ಕಚ್ಚಿವೆ ಎನ್ನಲಾಗಿದೆ.

ಭಯದಿಂದ, ಸಬೆಜ್ ತನ್ನ ಕುಟುಂಬಕ್ಕೆ ಘಟನೆಯ ಬಗ್ಗೆ ಹೇಳಲಿಲ್ಲ ಮತ್ತು ನಾಲ್ಕು ದಿನಗಳ ನಂತರ ರೇಬೀಸ್ ರೋಗಲಕ್ಷಣಗಳು ಕಾಣಿಸಿಕೊಳ್ಳಲಾರಂಭಿಸಿತ್ತು ಎಂದು ಆತನ ಅಜ್ಜ ಮತ್ಲುಬ್ ಅಹ್ಮದ್ ಹೇಳಿದ್ದಾರೆ. ಕ್ರಮೇಣವಾಗಿ ಸಬೇಜ್ ಗಾಳಿ ಮತ್ತು ನೀರನ್ನು ಕಂಡರೆ ಭಯಪಡುತ್ತಿದ್ದ, ಸದಾ ಕತ್ತಲೆಯಲ್ಲಿಯೇ ಇರುತ್ತಿದ್ದ, ಆಗಾಗ ಭಯಗೊಂಡು ಗಲಾಟೆ ಮಾಡುತ್ತಿದ್ದ ಎಂದು ಹೇಳಿದ್ದಾರೆ.

ಸಬೇಜ್ ಅವರನ್ನು ಘಾಜಿಯಾಬಾದ್, ಮೀರತ್ ಮತ್ತು ದೆಹಲಿಯ ಏಮ್ಸ್‌ನ ಹಲವಾರು ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು. ಚಿಕಿತ್ಸೆಗಾಗಿ ಬುಲಂದ್‌ಶಹರ್‌ಗೆ ಕೂಡ ಕರೆದೊಯ್ಯಲಾಯಿತು. ತನ್ನ ತಂದೆ ಯಾಕೂಬ್‌ನೊಂದಿಗೆ ಬುಲಂದ್‌ಶಹರ್‌ನಿಂದ ಹಿಂದಿರುಗುತ್ತಿದ್ದಾಗ ಶಾವೇಜ್ ಮೃತಪಟ್ಟಿದ್ದಾನೆ.

ಶಾವೇಜ್ ಅವರ ಕುಟುಂಬವು ಘಟನೆಯ ಬಗ್ಗೆ ಕ್ರಮಕ್ಕೆ ಒತ್ತಾಯಿಸಿದೆ ಮತ್ತು ಇಂತಹ ಘಟನೆಗಳು ನಡೆಯದಂತೆ ಆಡಳಿತ ಮತ್ತು ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಘಾಜಿಯಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಮಹಿಳೆಗೆ ನೋಟಿಸ್ ಜಾರಿ ಮಾಡಿದೆ, ಅವರು ಅನಧಿಕೃತವಾಗಿ ನಾಯಿಯನ್ನು ಸಾಕುತ್ತಿದ್ದು, ಅವು ಬೀದಿಯಲ್ಲಿ ಓಡಾಡುವವರನ್ನು ಕಚ್ಚುತ್ತಿದೆ ಎಂದು ಹೇಳಿದ್ದಾರೆ.

ಈ ನಾಯಿಗಳಿಗೆ ರೇಬಿಸ್ ಲಸಿಕೆಗಳನ್ನು ನೀಡಲಾಗಿದೆಯೇ ಎಂದು ಕಾರ್ಪೊರೇಷನ್ ಪ್ರಶ್ನಿಸಿದೆ. ಘಾಜಿಯಾಬಾದ್​ ಮುನ್ಸಿಪಲ್ ಕಾರ್ಪೊರೇಷನ್ ಅಡಿಯಲ್ಲಿ, ಸಾಕು ನಾಯಿಗಳಿಗೆ ನೋಂದಣಿ ಮತ್ತು ಲಸಿಕೆ ಹಾಕುವುದು ಕಡ್ಡಾಯವಾಗಿದೆ.

ನಾಯಿಗಳ ನೋಂದಣಿ ವಿವರಗಳೊಂದಿಗೆ ನೋಟಿಸ್‌ಗೆ ಪ್ರತಿಕ್ರಿಯಿಸಲು ಮಹಿಳೆಗೆ ಮೂರು ದಿನಗಳ ಕಾಲಾವಕಾಶ ನೀಡಲಾಗಿದೆ, ವಿಫಲವಾದರೆ 5,000 ರೂ. ದಂಡ ವಿಧಿಸಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:14 am, Wed, 6 September 23

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್