AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ನಲ್ಲಿ ಇನ್ನೂ ಇದ್ದಾರೆ 15-20 ಮಂದಿ ಭಾರತೀಯರು, ತಾಯ್ನಾಡಿಗೆ ಮರಳಲು ಕಾಯುತ್ತಿದ್ದಾರೆ: ಕೇಂದ್ರ ಸರ್ಕಾರದಿಂದ ಮಾಹಿತಿ

ಆಪರೇಶನ್​ ಗಂಗಾ ಕಾರ್ಯಾಚರಣೆ ಮುಕ್ತಾಯಗೊಂಡಿಲ್ಲ.  ಈಗ ಅಲ್ಲಿ ಉಳಿದಿರುವ ಭಾರತೀಯರಿಗೆ ಎಲ್ಲ ರೀತಿಯ ನೆರವು ನೀಡುತ್ತೇವೆ. ಖೆರ್ಸನ್​ ಸಿಟಿಯಲ್ಲಿ ಸಿಲುಕಿರುವ ಅವರನ್ನೂ ದೇಶಕ್ಕೆ ವಾಪಸ್​ ಕರೆತರಲಾಗುವುದು

ಉಕ್ರೇನ್​ನಲ್ಲಿ ಇನ್ನೂ ಇದ್ದಾರೆ 15-20 ಮಂದಿ ಭಾರತೀಯರು, ತಾಯ್ನಾಡಿಗೆ ಮರಳಲು ಕಾಯುತ್ತಿದ್ದಾರೆ: ಕೇಂದ್ರ ಸರ್ಕಾರದಿಂದ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 17, 2022 | 6:44 PM

Share

ಯುದ್ಧ ನೆಲ ಉಕ್ರೇನ್​​ನಿಂದ ಭಾರತೀಯರನ್ನು ಸ್ಥಳಾಂತರ ಮಾಡುವ ಕಾರ್ಯಾಚರಣೆ ಆಪರೇಶನ್​ ಗಂಗಾ ನಾಲ್ಕೈದು ದಿನಗಳ ಹಿಂದೆ ಮುಕ್ತಾಯಗೊಂಡಿದೆ. ಕೊನೇ ದಿನ ಸುಮಿ ಯುದ್ಧವಲಯದಲ್ಲಿದ್ದ 674 ಭಾರತೀಯರನ್ನು ವಾಪಸ್ ಕರೆತರಲಾಗಿದೆ. ಹೀಗಿದ್ದಾಗ್ಯೂ ಇನ್ನೂ 15-20 ಭಾರತೀಯರು ಉಕ್ರೇನ್​ನಲ್ಲಿಯೇ ಉಳಿದು ಹೋಗಿದ್ದಾರೆ. ಅವರೂ ಭಾರತಕ್ಕೆ ಮರಳಲು ಕಾಯುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಇಂದು ತಿಳಿಸಿದೆ. ಅಷ್ಟೇ ಅಲ್ಲ, ಆಪರೇಶನ್​ ಗಂಗಾ ಕಾರ್ಯಾಚರಣೆ ಮುಕ್ತಾಯಗೊಂಡಿಲ್ಲ.  ಈಗ ಅಲ್ಲಿ ಉಳಿದಿರುವ ಭಾರತೀಯರಿಗೆ ಎಲ್ಲ ರೀತಿಯ ನೆರವು ನೀಡುತ್ತೇವೆ. ಖೆರ್ಸನ್​ ಸಿಟಿಯಲ್ಲಿ ಸಿಲುಕಿರುವ ಅವರನ್ನೂ ದೇಶಕ್ಕೆ ವಾಪಸ್​ ಕರೆತರಲಾಗುವುದು ಎಂದು ಕೇಂದ್ರ ವಿದೇಶಾಂಗ ಇಲಾಖೆ ವಕ್ತಾರ ಅರಿಂದಮ್​ ಬಾಗ್ಚಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. 

ಉಕ್ರೇನ್​​ನಲ್ಲಿ ರಷ್ಯಾದ ಆಕ್ರಮಣ ತೀವ್ರಗೊಳ್ಳುತ್ತಿದ್ದಂತೆಯೇ ಭಾರತೀಯರನ್ನು ರಕ್ಷಿಸುವ ಕಾರ್ಯಾಚರಣೆಯನ್ನು ಕೇಂದ್ರ ಸರ್ಕಾರ ಶುರುವಿಟ್ಟುಕೊಂಡಿತ್ತು. ಉಕ್ರೇನ್​ ಗಡಿ ರಾಷ್ಟ್ರಗಳಾದ ಹಂಗೇರಿ, ರೊಮೇನಿಯಾ, ಪೋಲ್ಯಾಂಡ್​ ಸೇರಿ ಇತರ ದೇಶಗಳ ಮೂಲಕ, ಆಪರೇಶನ್​ ಗಂಗಾ ಎಂಬ ಹೆಸರಿನ ಕಾರ್ಯಾಚರಣೆ ನಡೆಸಿ ಸುಮಾರು 20 ಸಾವಿರ ವಿದ್ಯಾರ್ಥಿಗಳನ್ನು ಭಾರತಕ್ಕೆ ಸ್ಥಳಾಂತರ ಮಾಡಲಾಗಿದೆ. ಭಾರತದ ಒಬ್ಬ ವಿದ್ಯಾರ್ಥಿ ನವೀನ್ (ಕರ್ನಾಟಕದ ಹಾವೇರಿ ಮೂಲದವನು) ರಷ್ಯಾ ದಾಳಿಗೆ ಮೃತಪಟ್ಟಿದ್ದ. ಅದು ಬಿಟ್ಟರೆ ಇನ್ನೊಬ್ಬ ವಿದ್ಯಾರ್ಥಿಗೆ ಗುಂಡೇಟು ತಗುಲಿತ್ತು, ಆದರೆ ಪ್ರಾಣಾಪಾಯ ಆಗಿರಲಿಲ್ಲ.

ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದು ಉಕ್ರೇನ್​​ನ ಪೂರ್ವದ ನಗರಗಳಲ್ಲೇ ಆಗಿತ್ತು. ಹಾಗೇ ಯುದ್ಧ ತೀವ್ರತೆ ಅಲ್ಲಿ ಜಾಸ್ತಿಯಿತ್ತು. ಅವರನ್ನು ರಕ್ಷಿಸಲು ಭಾರತ ರಷ್ಯಾ ಮತ್ತು ಉಕ್ರೇನ್​ ಜತೆ ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಿ, ಎಲ್ಲ ಭಾರತೀಯರನ್ನೂ ಯಶಸ್ವಿಯಾಗಿ ರಕ್ಷಣೆ ಮಾಡಿದೆ. ನಿನ್ನೆ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದ ಕೇಂದ್ರ ವಿದೇಶಾಂಗ ಇಲಾಖೆ ಸಚಿವ ಎಸ್.ಜೈಶಂಕರ್​, ನಾವು ಸುಮಾರು 20 ಸಾವಿರ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಿದ್ದೇವೆ. ಹಾಗಿದ್ದಾಗ್ಯೂ ಇನ್ನೂ ಅನೇಕರು ಅಲ್ಲಿಯೇ ನೆಲೆಸಲು ತೀರ್ಮಾನ ಮಾಡಿದ್ದಾರೆ. ನಾವು ಅವರ ನಿರ್ಧಾರವನ್ನು ಗೌರವಿಸುತ್ತೇವೆ. ಕೆಲವು ಯೂನಿವರ್ಸಿಟಿಗಳು ಆನ್​ಲೈನ್ ಕ್ಲಾಸ್​ ನಡೆಸಲು ನಿರಾಕರಿಸುತ್ತಿವೆ. ಹೀಗಾಗಿ ತಮ್ಮ ಶಿಕ್ಷಣದ ದೃಷ್ಟಿಯಿಂದ ಅವರು ಅಲ್ಲೇ ಉಳಿದುಕೊಂಡಿದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ: ಐಪಿಎಸ್​ ಅಧಿಕಾರಿಗೆ ಬ್ಯಾಗ್ ಓಪನ್ ಮಾಡಿ ಎಂದ ಏರ್​ಪೋರ್ಟ್​ ಸಿಬ್ಬಂದಿ; ಅದರಲ್ಲೇನಿತ್ತು ಎಂದು ನೀವು ಊಹಿಸಲೂ ಅಸಾಧ್ಯ!

Published On - 6:29 pm, Thu, 17 March 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ