AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ನಲ್ಲಿ ಇನ್ನೂ ಇದ್ದಾರೆ 15-20 ಮಂದಿ ಭಾರತೀಯರು, ತಾಯ್ನಾಡಿಗೆ ಮರಳಲು ಕಾಯುತ್ತಿದ್ದಾರೆ: ಕೇಂದ್ರ ಸರ್ಕಾರದಿಂದ ಮಾಹಿತಿ

ಆಪರೇಶನ್​ ಗಂಗಾ ಕಾರ್ಯಾಚರಣೆ ಮುಕ್ತಾಯಗೊಂಡಿಲ್ಲ.  ಈಗ ಅಲ್ಲಿ ಉಳಿದಿರುವ ಭಾರತೀಯರಿಗೆ ಎಲ್ಲ ರೀತಿಯ ನೆರವು ನೀಡುತ್ತೇವೆ. ಖೆರ್ಸನ್​ ಸಿಟಿಯಲ್ಲಿ ಸಿಲುಕಿರುವ ಅವರನ್ನೂ ದೇಶಕ್ಕೆ ವಾಪಸ್​ ಕರೆತರಲಾಗುವುದು

ಉಕ್ರೇನ್​ನಲ್ಲಿ ಇನ್ನೂ ಇದ್ದಾರೆ 15-20 ಮಂದಿ ಭಾರತೀಯರು, ತಾಯ್ನಾಡಿಗೆ ಮರಳಲು ಕಾಯುತ್ತಿದ್ದಾರೆ: ಕೇಂದ್ರ ಸರ್ಕಾರದಿಂದ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Updated By: Lakshmi Hegde|

Updated on:Mar 17, 2022 | 6:44 PM

Share

ಯುದ್ಧ ನೆಲ ಉಕ್ರೇನ್​​ನಿಂದ ಭಾರತೀಯರನ್ನು ಸ್ಥಳಾಂತರ ಮಾಡುವ ಕಾರ್ಯಾಚರಣೆ ಆಪರೇಶನ್​ ಗಂಗಾ ನಾಲ್ಕೈದು ದಿನಗಳ ಹಿಂದೆ ಮುಕ್ತಾಯಗೊಂಡಿದೆ. ಕೊನೇ ದಿನ ಸುಮಿ ಯುದ್ಧವಲಯದಲ್ಲಿದ್ದ 674 ಭಾರತೀಯರನ್ನು ವಾಪಸ್ ಕರೆತರಲಾಗಿದೆ. ಹೀಗಿದ್ದಾಗ್ಯೂ ಇನ್ನೂ 15-20 ಭಾರತೀಯರು ಉಕ್ರೇನ್​ನಲ್ಲಿಯೇ ಉಳಿದು ಹೋಗಿದ್ದಾರೆ. ಅವರೂ ಭಾರತಕ್ಕೆ ಮರಳಲು ಕಾಯುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಇಂದು ತಿಳಿಸಿದೆ. ಅಷ್ಟೇ ಅಲ್ಲ, ಆಪರೇಶನ್​ ಗಂಗಾ ಕಾರ್ಯಾಚರಣೆ ಮುಕ್ತಾಯಗೊಂಡಿಲ್ಲ.  ಈಗ ಅಲ್ಲಿ ಉಳಿದಿರುವ ಭಾರತೀಯರಿಗೆ ಎಲ್ಲ ರೀತಿಯ ನೆರವು ನೀಡುತ್ತೇವೆ. ಖೆರ್ಸನ್​ ಸಿಟಿಯಲ್ಲಿ ಸಿಲುಕಿರುವ ಅವರನ್ನೂ ದೇಶಕ್ಕೆ ವಾಪಸ್​ ಕರೆತರಲಾಗುವುದು ಎಂದು ಕೇಂದ್ರ ವಿದೇಶಾಂಗ ಇಲಾಖೆ ವಕ್ತಾರ ಅರಿಂದಮ್​ ಬಾಗ್ಚಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. 

ಉಕ್ರೇನ್​​ನಲ್ಲಿ ರಷ್ಯಾದ ಆಕ್ರಮಣ ತೀವ್ರಗೊಳ್ಳುತ್ತಿದ್ದಂತೆಯೇ ಭಾರತೀಯರನ್ನು ರಕ್ಷಿಸುವ ಕಾರ್ಯಾಚರಣೆಯನ್ನು ಕೇಂದ್ರ ಸರ್ಕಾರ ಶುರುವಿಟ್ಟುಕೊಂಡಿತ್ತು. ಉಕ್ರೇನ್​ ಗಡಿ ರಾಷ್ಟ್ರಗಳಾದ ಹಂಗೇರಿ, ರೊಮೇನಿಯಾ, ಪೋಲ್ಯಾಂಡ್​ ಸೇರಿ ಇತರ ದೇಶಗಳ ಮೂಲಕ, ಆಪರೇಶನ್​ ಗಂಗಾ ಎಂಬ ಹೆಸರಿನ ಕಾರ್ಯಾಚರಣೆ ನಡೆಸಿ ಸುಮಾರು 20 ಸಾವಿರ ವಿದ್ಯಾರ್ಥಿಗಳನ್ನು ಭಾರತಕ್ಕೆ ಸ್ಥಳಾಂತರ ಮಾಡಲಾಗಿದೆ. ಭಾರತದ ಒಬ್ಬ ವಿದ್ಯಾರ್ಥಿ ನವೀನ್ (ಕರ್ನಾಟಕದ ಹಾವೇರಿ ಮೂಲದವನು) ರಷ್ಯಾ ದಾಳಿಗೆ ಮೃತಪಟ್ಟಿದ್ದ. ಅದು ಬಿಟ್ಟರೆ ಇನ್ನೊಬ್ಬ ವಿದ್ಯಾರ್ಥಿಗೆ ಗುಂಡೇಟು ತಗುಲಿತ್ತು, ಆದರೆ ಪ್ರಾಣಾಪಾಯ ಆಗಿರಲಿಲ್ಲ.

ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದು ಉಕ್ರೇನ್​​ನ ಪೂರ್ವದ ನಗರಗಳಲ್ಲೇ ಆಗಿತ್ತು. ಹಾಗೇ ಯುದ್ಧ ತೀವ್ರತೆ ಅಲ್ಲಿ ಜಾಸ್ತಿಯಿತ್ತು. ಅವರನ್ನು ರಕ್ಷಿಸಲು ಭಾರತ ರಷ್ಯಾ ಮತ್ತು ಉಕ್ರೇನ್​ ಜತೆ ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಿ, ಎಲ್ಲ ಭಾರತೀಯರನ್ನೂ ಯಶಸ್ವಿಯಾಗಿ ರಕ್ಷಣೆ ಮಾಡಿದೆ. ನಿನ್ನೆ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದ ಕೇಂದ್ರ ವಿದೇಶಾಂಗ ಇಲಾಖೆ ಸಚಿವ ಎಸ್.ಜೈಶಂಕರ್​, ನಾವು ಸುಮಾರು 20 ಸಾವಿರ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಿದ್ದೇವೆ. ಹಾಗಿದ್ದಾಗ್ಯೂ ಇನ್ನೂ ಅನೇಕರು ಅಲ್ಲಿಯೇ ನೆಲೆಸಲು ತೀರ್ಮಾನ ಮಾಡಿದ್ದಾರೆ. ನಾವು ಅವರ ನಿರ್ಧಾರವನ್ನು ಗೌರವಿಸುತ್ತೇವೆ. ಕೆಲವು ಯೂನಿವರ್ಸಿಟಿಗಳು ಆನ್​ಲೈನ್ ಕ್ಲಾಸ್​ ನಡೆಸಲು ನಿರಾಕರಿಸುತ್ತಿವೆ. ಹೀಗಾಗಿ ತಮ್ಮ ಶಿಕ್ಷಣದ ದೃಷ್ಟಿಯಿಂದ ಅವರು ಅಲ್ಲೇ ಉಳಿದುಕೊಂಡಿದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ: ಐಪಿಎಸ್​ ಅಧಿಕಾರಿಗೆ ಬ್ಯಾಗ್ ಓಪನ್ ಮಾಡಿ ಎಂದ ಏರ್​ಪೋರ್ಟ್​ ಸಿಬ್ಬಂದಿ; ಅದರಲ್ಲೇನಿತ್ತು ಎಂದು ನೀವು ಊಹಿಸಲೂ ಅಸಾಧ್ಯ!

Published On - 6:29 pm, Thu, 17 March 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?