AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಗೋಡೆ ಕುಸಿತ; 15 ಮಂದಿ ಸಾವು, ಎನ್​ಡಿಆರ್​ಎಫ್​ನಿಂದ ರಕ್ಷಣಾ ಕಾರ್ಯಾಚರಣೆ

Maharashtra: ಕಳೆದ ಹಲವು ದಿನಗಳಿಂದಲೂ ಸಿಕ್ಕಾಪಟೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಬೈ, ಮಹಾರಾಷ್ಟ್ರ ಸುತ್ತಮುತ್ತ ಹಲವು ಕಡೆ ಮಣ್ಣು ಕುಸಿತ, ಮನೆಕುಸಿತದಂಥ ಅವಘಡಗಳು ನಡೆಯುತ್ತಿವೆ ಎಂದು ಎನ್​ಡಿಆರ್​ಎಫ್​ ಡೆಪ್ಯೂಟಿ ಕಮಾಂಡಂಟ್ ಅಶೀಶ್​ ಕುಮಾರ್​ ಹೇಳಿದ್ದಾರೆ.

ಮುಂಬೈನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಗೋಡೆ ಕುಸಿತ; 15 ಮಂದಿ ಸಾವು, ಎನ್​ಡಿಆರ್​ಎಫ್​ನಿಂದ ರಕ್ಷಣಾ ಕಾರ್ಯಾಚರಣೆ
ಮಹಾರಾಷ್ಟ್ರದ ಗೋಡೆ ಕುಸಿತ
TV9 Web
| Updated By: Lakshmi Hegde|

Updated on:Jul 18, 2021 | 9:42 AM

Share

ಮುಂಬೈ: ಮಹಾರಾಷ್ಟ್ರ(Maharashtra) ದ ಚೆಂಬೂರಿನಲ್ಲಿ ಮಣ್ಣುಕುಸಿತವಾಗಿ, ಗೋಡೆಯೊಂದು ಕೆಲವು ಗುಡಿಸಲುಗಳ ಮೇಲೆ ಬಿದ್ದ ಪರಿಣಾಮ ಸುಮಾರು 12 ಮಂದಿ ಮೃತಪಟ್ಟಿದ್ದಾರೆ. ಅಲ್ಲೀಗ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ (Rescue Operations) ನಡೆಸುತ್ತಿದೆ. ಮಧ್ಯರಾತ್ರಿಯೇ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಮುಂಜಾನೆ ಎನ್​ಡಿಆರ್​ಎಫ್​ ತಂಡದವರು ಅಲ್ಲಿಗೆ ತೆರಳುವಷ್ಟರಲ್ಲಿ ಸ್ಥಳೀಯರೇ 10 ಮೃತದೇಹಗಳನ್ನು ಹೊರತೆಗೆದಿದ್ದಾರೆ. ಉಳಿದ 2 ಮೃತದೇಹಗಳನ್ನು ರಕ್ಷಣಾ ಪಡೆಗಳು ತೆಗೆದಿವೆ. ಅಲ್ಲಿ ಗುಡಿಸಲುಗಳ ಅವಶೇಷಗಳನ್ನು ಸ್ವಚ್ಛಗೊಳಿಸುವ ಕಾರ್ಯಗಳು ನಡೆಯುತ್ತಿದ್ದು, ಇನ್ನೂ ಏಳು ಮಂದಿ ಸಿಲುಕಿರಬಹುದು ಎಂದು ಶಂಕಿಸಲಾಗಿದೆ.

ಇನ್ನೊಂದು ಪ್ರಕರಣ ಹಾಗೇ ಮತ್ತೊಂದು ಇಂಥದ್ದೇ ಪ್ರಕರಣ ನಡೆದಿದ್ದು, ಮುಂಬೈನ ವಿಖ್ರೋಲಿ ಎಂಬಲ್ಲಿ ಇಂದು ಮುಂಜಾನೆ ಹೊತ್ತಿಗೆ ಒಂದು ವಸತಿ ಕಟ್ಟಡ ಕುಸಿದು ಬಿದ್ದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಅಲ್ಲೂ ಕೂಡ ಎನ್​ಡಿಆರ್​ಎಫ್​ ತಂಡದವರೇ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಬೃಹನ್​ ಮುಂಬೈ ಕಾರ್ಪೋರೇಶನ್​ ತಿಳಿಸಿದೆ.

ಕುಸಿದುಬಿದ್ದ ಕಟ್ಟಡಗಳ ಅವಶೇಷದಿಂದ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇನ್ನೂ ಆರು ಮಂದಿ ಸಿಲುಕಿರಬಹುದು ಎಂದು ಹೇಳಲಾಗಿದೆ. ಕಳೆದ ಹಲವು ದಿನಗಳಿಂದಲೂ ಸಿಕ್ಕಾಪಟೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಬೈ, ಮಹಾರಾಷ್ಟ್ರ ಸುತ್ತಮುತ್ತ ಹಲವು ಕಡೆ ಮಣ್ಣು ಕುಸಿತ, ಮನೆಕುಸಿತದಂಥ ಅವಘಡಗಳು ನಡೆಯುತ್ತಿವೆ ಎಂದು ಎನ್​ಡಿಆರ್​ಎಫ್​ ಡೆಪ್ಯೂಟಿ ಕಮಾಂಡಂಟ್ ಅಶೀಶ್​ ಕುಮಾರ್​ ಹೇಳಿದ್ದಾರೆ. ನಿನ್ನೆ ರಾತ್ರಿಯೆಲ್ಲ ಮುಂಬೈನಲ್ಲಿ ವಿಪರೀತ ಮಳೆಯಾಗಿದ್ದು, ಇಂದು ಬೆಳಗ್ಗೆ ಆಗುವಷ್ಟರಲ್ಲಿ ನಗರದ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಸ್ಥಳೀಯ ರೈಲುಗಳ ಸಂಚಾರ ನಿಲುಗಡೆಯಾಗಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಸದ್ಯ ಹವಾಮಾನ ಇಲಾಖೆ ನಗರದಲ್ಲಿ ರೆಡ್​ ಅಲರ್ಟ್​ ಘೋಷಿಸಿದೆ.

ಇದನ್ನೂ ಓದಿ: Karnataka Weather: ಕರ್ನಾಟಕದಲ್ಲಿ ಜುಲೈ 21 ರ ತನಕ ಭಾರೀ ಮಳೆ ಸಾಧ್ಯತೆ; SSLC ಪರೀಕ್ಷೆಗೆ ತೆರಳುವಾಗ ಎಚ್ಚರದಿಂದಿರಿ ಮಕ್ಕಳೇ

15 killed in two separate incidents of wall collapse in Mumbai

Published On - 9:40 am, Sun, 18 July 21

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ