AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಗೋಡೆ ಕುಸಿತ; 15 ಮಂದಿ ಸಾವು, ಎನ್​ಡಿಆರ್​ಎಫ್​ನಿಂದ ರಕ್ಷಣಾ ಕಾರ್ಯಾಚರಣೆ

Maharashtra: ಕಳೆದ ಹಲವು ದಿನಗಳಿಂದಲೂ ಸಿಕ್ಕಾಪಟೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಬೈ, ಮಹಾರಾಷ್ಟ್ರ ಸುತ್ತಮುತ್ತ ಹಲವು ಕಡೆ ಮಣ್ಣು ಕುಸಿತ, ಮನೆಕುಸಿತದಂಥ ಅವಘಡಗಳು ನಡೆಯುತ್ತಿವೆ ಎಂದು ಎನ್​ಡಿಆರ್​ಎಫ್​ ಡೆಪ್ಯೂಟಿ ಕಮಾಂಡಂಟ್ ಅಶೀಶ್​ ಕುಮಾರ್​ ಹೇಳಿದ್ದಾರೆ.

ಮುಂಬೈನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಗೋಡೆ ಕುಸಿತ; 15 ಮಂದಿ ಸಾವು, ಎನ್​ಡಿಆರ್​ಎಫ್​ನಿಂದ ರಕ್ಷಣಾ ಕಾರ್ಯಾಚರಣೆ
ಮಹಾರಾಷ್ಟ್ರದ ಗೋಡೆ ಕುಸಿತ
TV9 Web
| Edited By: |

Updated on:Jul 18, 2021 | 9:42 AM

Share

ಮುಂಬೈ: ಮಹಾರಾಷ್ಟ್ರ(Maharashtra) ದ ಚೆಂಬೂರಿನಲ್ಲಿ ಮಣ್ಣುಕುಸಿತವಾಗಿ, ಗೋಡೆಯೊಂದು ಕೆಲವು ಗುಡಿಸಲುಗಳ ಮೇಲೆ ಬಿದ್ದ ಪರಿಣಾಮ ಸುಮಾರು 12 ಮಂದಿ ಮೃತಪಟ್ಟಿದ್ದಾರೆ. ಅಲ್ಲೀಗ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ (Rescue Operations) ನಡೆಸುತ್ತಿದೆ. ಮಧ್ಯರಾತ್ರಿಯೇ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಮುಂಜಾನೆ ಎನ್​ಡಿಆರ್​ಎಫ್​ ತಂಡದವರು ಅಲ್ಲಿಗೆ ತೆರಳುವಷ್ಟರಲ್ಲಿ ಸ್ಥಳೀಯರೇ 10 ಮೃತದೇಹಗಳನ್ನು ಹೊರತೆಗೆದಿದ್ದಾರೆ. ಉಳಿದ 2 ಮೃತದೇಹಗಳನ್ನು ರಕ್ಷಣಾ ಪಡೆಗಳು ತೆಗೆದಿವೆ. ಅಲ್ಲಿ ಗುಡಿಸಲುಗಳ ಅವಶೇಷಗಳನ್ನು ಸ್ವಚ್ಛಗೊಳಿಸುವ ಕಾರ್ಯಗಳು ನಡೆಯುತ್ತಿದ್ದು, ಇನ್ನೂ ಏಳು ಮಂದಿ ಸಿಲುಕಿರಬಹುದು ಎಂದು ಶಂಕಿಸಲಾಗಿದೆ.

ಇನ್ನೊಂದು ಪ್ರಕರಣ ಹಾಗೇ ಮತ್ತೊಂದು ಇಂಥದ್ದೇ ಪ್ರಕರಣ ನಡೆದಿದ್ದು, ಮುಂಬೈನ ವಿಖ್ರೋಲಿ ಎಂಬಲ್ಲಿ ಇಂದು ಮುಂಜಾನೆ ಹೊತ್ತಿಗೆ ಒಂದು ವಸತಿ ಕಟ್ಟಡ ಕುಸಿದು ಬಿದ್ದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಅಲ್ಲೂ ಕೂಡ ಎನ್​ಡಿಆರ್​ಎಫ್​ ತಂಡದವರೇ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಬೃಹನ್​ ಮುಂಬೈ ಕಾರ್ಪೋರೇಶನ್​ ತಿಳಿಸಿದೆ.

ಕುಸಿದುಬಿದ್ದ ಕಟ್ಟಡಗಳ ಅವಶೇಷದಿಂದ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇನ್ನೂ ಆರು ಮಂದಿ ಸಿಲುಕಿರಬಹುದು ಎಂದು ಹೇಳಲಾಗಿದೆ. ಕಳೆದ ಹಲವು ದಿನಗಳಿಂದಲೂ ಸಿಕ್ಕಾಪಟೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಬೈ, ಮಹಾರಾಷ್ಟ್ರ ಸುತ್ತಮುತ್ತ ಹಲವು ಕಡೆ ಮಣ್ಣು ಕುಸಿತ, ಮನೆಕುಸಿತದಂಥ ಅವಘಡಗಳು ನಡೆಯುತ್ತಿವೆ ಎಂದು ಎನ್​ಡಿಆರ್​ಎಫ್​ ಡೆಪ್ಯೂಟಿ ಕಮಾಂಡಂಟ್ ಅಶೀಶ್​ ಕುಮಾರ್​ ಹೇಳಿದ್ದಾರೆ. ನಿನ್ನೆ ರಾತ್ರಿಯೆಲ್ಲ ಮುಂಬೈನಲ್ಲಿ ವಿಪರೀತ ಮಳೆಯಾಗಿದ್ದು, ಇಂದು ಬೆಳಗ್ಗೆ ಆಗುವಷ್ಟರಲ್ಲಿ ನಗರದ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಸ್ಥಳೀಯ ರೈಲುಗಳ ಸಂಚಾರ ನಿಲುಗಡೆಯಾಗಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಸದ್ಯ ಹವಾಮಾನ ಇಲಾಖೆ ನಗರದಲ್ಲಿ ರೆಡ್​ ಅಲರ್ಟ್​ ಘೋಷಿಸಿದೆ.

ಇದನ್ನೂ ಓದಿ: Karnataka Weather: ಕರ್ನಾಟಕದಲ್ಲಿ ಜುಲೈ 21 ರ ತನಕ ಭಾರೀ ಮಳೆ ಸಾಧ್ಯತೆ; SSLC ಪರೀಕ್ಷೆಗೆ ತೆರಳುವಾಗ ಎಚ್ಚರದಿಂದಿರಿ ಮಕ್ಕಳೇ

15 killed in two separate incidents of wall collapse in Mumbai

Published On - 9:40 am, Sun, 18 July 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!