Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಯಾದ ಮೊಬೈಲ್ ಬಳಕೆ; ಅಮ್ಮ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

ವೈದ್ಯಕೀಯ ವರದಿಯ ಆಧಾರದ ಮೇಲೆ ಶನಿವಾರ ಆಕಸ್ಮಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಂಬರನಾಥ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಅಕ್ಟೋಬರ್ 12 ರಂದು ವೈದ್ಯಕೀಯ ವರದಿ ಆಧರಿಸಿ ಪೊಲೀಸರು ಆಕಸ್ಮಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅತಿಯಾದ ಮೊಬೈಲ್ ಬಳಕೆ; ಅಮ್ಮ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on: Oct 14, 2024 | 1:07 PM

ಮುಂಬೈ ಅಕ್ಟೋಬರ್ 14: ಮಹಾರಾಷ್ಟ್ರದಲ್ಲಿ 15 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೊಬೈಲ್ ನಲ್ಲಿ ಹೆಚ್ಚು ಹೊತ್ತು ಕಳೆಯುವುದು ಬೇಡ ಎಂದು ತಾಯಿ ಬೈದಿದ್ದಕ್ಕೆ ಬಾಲಕಿ ವಿಷ ಸೇವಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದ ಥಾಣೆಯ ಅಂಬರನಾಥ್ ಪ್ರದೇಶದ ನಿವಾಸಿಯಾದ ಬಾಲಕಿ ಸೆಪ್ಟೆಂಬರ್ 26 ರಂದು ವಿಷ ಸೇವನೆ ಮಾಡಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದಂತೆ, ಆಕೆಯನ್ನು ನೆರೆಯ ಮುಂಬೈನ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಅವಳು ಅಕ್ಟೋಬರ್ 2 ರಂದು ಸಾವನ್ನಪ್ಪಿದಳು ಎಂದು ಅಂಬರನಾಥ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವೈದ್ಯಕೀಯ ವರದಿಯ ಆಧಾರದ ಮೇಲೆ ಶನಿವಾರ ಆಕಸ್ಮಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಂಬರನಾಥ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಅಕ್ಟೋಬರ್ 12 ರಂದು ವೈದ್ಯಕೀಯ ವರದಿ ಆಧರಿಸಿ ಪೊಲೀಸರು ಆಕಸ್ಮಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾನಸಿಕ ಆರೋಗ್ಯ ಮತ್ತು ಮೊಬೈಲ್ ಬಳಕೆ

ಈ ದುರಂತ ಘಟನೆಯು ಯುವಕರ ಮಾನಸಿಕ ಆರೋಗ್ಯದ ಸುತ್ತ ಬೆಳೆಯುತ್ತಿರುವ ಸಮಸ್ಯೆಗಳು ಮತ್ತು ಮೊಬೈಲ್ ಫೋನ್‌ಗಳ ಭಾರೀ ಪ್ರಭಾವವನ್ನು ಎತ್ತಿ ತೋರಿಸುತ್ತದೆ. ಕಳೆದ ತಿಂಗಳು, ದೆಹಲಿಯಲ್ಲಿ ಹೊಸ ಸ್ಮಾರ್ಟ್‌ಫೋನ್ ನ “ಟ್ರೀಟ್” ನೀಡಲು ನಿರಾಕರಿಸಿದ್ದಕ್ಕೆ ಮೂವರು ಹುಡುಗರು ತಮ್ಮ 16 ವರ್ಷದ ಸ್ನೇಹಿತನನ್ನು ಚಾಕುವಿನಿಂದ ಇರಿದು ಕೊಂದರು.ಸಂತ್ರಸ್ತ ಮತ್ತು ಮೂವರು ಬಾಲಕರು 9ನೇ ತರಗತಿಯ ವಿದ್ಯಾರ್ಥಿಗಳು.

“ಈ ಗುಂಪು ಫೋನ್ ಖರೀದಿ ಮಾಡಿದ ನಂತರ ಪಾರ್ಟಿ ಅಥವಾ ಟ್ರೀಟ್‌ಗೆ ಬೇಡಿಕೆಯಿಟ್ಟಿತ್ತು. ಆದರೆ ಸಚಿನ್ ನಿರಾಕರಿಸಿದರು. ವಾಗ್ವಾದವು ಚೂರಿ ಇರಿತಕ್ಕೆ ಕಾರಣವಾಯಿತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ವಿಡಿಯೋ ಗೇಮ್‌ ಆಡುವ ಚಟಕ್ಕೆ ಬಿದ್ದಿದ್ದ 16ರ ಹರೆಯದ ಬಾಲಕನೊಬ್ಬ ಕಳೆದ ವರ್ಷ ತನ್ನ ತಂದೆ ಸ್ಮಾರ್ಟ್‌ಫೋನ್‌ ತೆಗೆದಿರಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದ. ಸ್ಮಾರ್ಟ್‌ಫೋನ್‌ನಲ್ಲಿ ಆಟವಾಡುವುದನ್ನು ನಿಲ್ಲಿಸಿ ತನ್ನ ಕಲಿಕೆಯತ್ತ ಗಮನ ಹರಿಸುವಂತೆ ಹೇಳಿದ ನಂತರ ಆತ ತನ್ನ ತಂದೆಯೊಂದಿಗೆ ಭಾರೀ ಜಗಳವಾಡಿದ್ದ. ನಿರಂತರವಾಗಿ ಆಟವಾಡುತ್ತಿದ್ದ ಆತನ ತಂದೆ ಆತನ ಸೆಲ್ ಫೋನ್ ತೆಗೆದುಕೊಂಡು ಹೋಗಿ ಮಲಗಲು ಹೇಳಿದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ, ತಾನೂ ಆತ್ಮಹತ್ಯೆಗೆ ಶರಣಾದ ತಂದೆ

ಹುಡುಗನಿಗೆ ತುಂಬಾ ಬೇಸರವಾಗಿತ್ತು. ಮರುದಿನ ಮನೆಯವರು ಎಚ್ಚರಗೊಂಡು ನೋಡಿದಾಗ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದು ಪತ್ತೆಯಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ