
ನವದೆಹಲಿ, ಜುಲೈ 22: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ (NEET Paper Leak) ಇಡೀ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗುತ್ತಿದ್ದರೂ ಕೇಂದ್ರ ಸರ್ಕಾರದ ನಾಯಕರು ಈ ಬಗ್ಗೆ ಯಾವುದೇ ಗಟ್ಟಿ ನಿಲುವನ್ನು ತಳೆದಿಲ್ಲ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆಯಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವಿಪಕ್ಷಗಳು ಒತ್ತಡ ಹೇರುತ್ತಲೇ ಇದ್ದರೂ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮಂಗಳವಾರ ಈ ಕುರಿತು ಧರಣಿ ನಡೆಸುತ್ತಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದರ ಬೆನ್ನಲ್ಲೇ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ.
ಇಂದು (ಬುಧವಾರ) ನಡೆಸಿದ ಮಾಧ್ಯಮ ಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಯುವ ಮೋರ್ಚಾ ಮತ್ತು ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲವಾಗಿ 3 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ರಾಷ್ಟ್ರ ರಾಜಧಾನಿ ಹಾಗೂ ಹಲವು ರಾಜ್ಯಗಳಲ್ಲಿ ಭಾರಿ ಪ್ರತಿಭಟನೆಗೆ ಕಾರಣವಾಗಿರುವ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹಿನ್ನೆಲೆಯಲ್ಲಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ನೀಡಬೇಕೆಂದು ರಾಹುಲ್ ಗಾಂಧಿ ತಮ್ಮ ಮೊದಲ ಹಾಗೂ ಪ್ರಮುಖ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.
ಇದನ್ನೂ ಓದಿ: ಪ್ರಧಾನಿ ನಿವಾಸದ ಬಳಿ ಧರಣಿ ನಡೆಸುತ್ತಿದ್ದ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
“ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ ಘಟನೆಗಳು ಸಂಭವಿಸಿವೆ. ಆದರೆ ಈವರೆಗೆ ಯಾರೊಬ್ಬರಿಗೂ ಶಿಕ್ಷೆಯಾಗಿಲ್ಲ. ಯಾರೋ ಒಬ್ಬರು ಅಥವಾ ಜನರ ಗುಂಪು ಭಾರತದ ಅತ್ಯಂತ ಮೌಲ್ಯಯುತ ಆಸ್ತಿಯಾಗಿರುವ ಶಿಕ್ಷಣ ವ್ಯವಸ್ಥೆಯನ್ನು ನಾಶಪಡಿಸುತ್ತಿದೆ. ನಮ್ಮ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡುತ್ತಿದೆ. ಆದರೆ ಸರ್ಕಾರ ಏನು ಮಾಡುತ್ತಿದೆ? ಯಾರೊಬ್ಬರಿಗೂ ಶಿಕ್ಷೆ ವಿಧಿಸಿಲ್ಲ. ಆದ್ದರಿಂದಲೇ ನಮ್ಮ ಯುವಕರು ಪ್ರತಿಭಟನೆ ನಡೆಸುತ್ತಿದ್ದಾರೆ, ಇದು ಸಂಪೂರ್ಣವಾಗಿ ನ್ಯಾಯಸಮ್ಮತ ಕಾರಣವಾಗಿದೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
LIVE: Press Conference | Indira Bhawan, New Delhi https://t.co/hpUymlX6Rf
— Rahul Gandhi (@RahulGandhi) July 22, 2026
ಕಪ್ಪು ಪಟ್ಟಿ ಧರಿಸಿ ಸುದ್ದಿಗೋಷ್ಠಿ:
ಇಂದು ತೋಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಸುದ್ದಿಗೋಷ್ಠಿ ನಡೆಸಿರುವ ರಾಹುಲ್ ಗಾಂಧಿ, “ದೇಶದ ಕಳಪೆ ಶಿಕ್ಷಣ ವ್ಯವಸ್ಥೆಯಿಂದಾಗಿ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳು ತೊಂದರೆಗೆ ಒಳಗಾಗಿವೆ. ಅವರೆಲ್ಲರೂ ಮಧ್ಯಮ ವರ್ಗದ ಮತ್ತು ಬಡ ಕುಟುಂಬಗಳ ಜನ. ಈ ಹಗರಣಗಳಲ್ಲಿ ಯಾರೊಬ್ಬರಿಗೂ ಶಿಕ್ಷೆಯಾಗಿಲ್ಲ. ಜನರ ಗುಂಪೊಂದು ನಮ್ಮ ಶಿಕ್ಷಣ ವ್ಯವಸ್ಥೆಯನ್ನು ನಾಶಪಡಿಸುತ್ತಿದೆ. ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವುದಕ್ಕೆ ನ್ಯಾಯವಾದ ಕಾರಣಗಳಿವೆ. ಅವರದ್ದು ಮೂರು ಪ್ರಮುಖ ಬೇಡಿಕೆಗಳಿವೆ. ಅವುಗಳನ್ನು ಸರ್ಕಾರ ಈಡೇರಿಸಲಿ” ಎಂದು ಹೇಳಿದ್ದಾರೆ.
#WATCH | Delhi: On being detained by police yesterday, Lok Sabha LoP and Congress MP Rahul Gandhi says, “It’s fine. I’m used to getting punched and all. It’s no problem. My job is to express the will of India’s people, whether it is the will of the students, whether it is the… pic.twitter.com/jDUaE7tWFb
— ANI (@ANI) July 22, 2026
ಮೋದಿ ಕ್ಷಮೆ ಕೋರಬೇಕು:
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ನೀಟ್ ಪರೀಕ್ಷಾ ಸೋರಿಕೆ ವಿರುದ್ಧ ಹೋರಾಡುತ್ತಿರುವ ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತ ರಾಹುಲ್ ಗಾಂಧಿ, “ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಅವರು ಈ ಹುದ್ದೆಯನ್ನು ವಹಿಸಿಕೊಳ್ಳಲು ಅಸಮರ್ಥರಾಗಿದ್ದಾರೆ. ಹಾಗೇ, ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ನಡೆಸಲಾದ ದೌರ್ಜನ್ಯಕ್ಕೆ ಕಾರಣರಾದ ಅಧಿಕಾರಿಗಳನ್ನು ಕೂಡ ಹೊಣೆಗಾರರನ್ನಾಗಿ ಮಾಡಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಪೊಲೀಸ್ ಠಾಣೆಗೆ ಸೋನಿಯಾ ಗಾಂಧಿ ಭೇಟಿ; ಕೊನೆಗೂ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬಿಡುಗಡೆ
#WATCH | Delhi: Lok Sabha LoP and Congress MP Rahul Gandhi says, “It is true that the policemen dragged me a little but they were whispering in my ear to remove this government. One of them said, “I am from Rajasthan, we’re just wearing uniform. The second one is saying, I am… pic.twitter.com/ws5zgWOTvr
— ANI (@ANI) July 22, 2026
ಶಿಕ್ಷಣ ವ್ಯವಸ್ಥೆ ಭ್ರಷ್ಟಗೊಂಡಿದೆ:
ಪಶ್ನೆಪತ್ರಿಕೆ ಸೋರಿಕೆ ಹಗರಣಗಳಿಂದಾಗಿ ದೇಶದ ಶಿಕ್ಷಣ ವ್ಯವಸ್ಥೆಯ ಕುರಿತು ವಿಪಕ್ಷ ನಾಯಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. “ನಮ್ಮ ವಿದ್ಯಾರ್ಥಿಗಳ ಮೇಲೆ ಭಾರಿ ಮಾನಸಿಕ ಒತ್ತಡ ಹೇರಲಾಗುತ್ತಿದೆ. ಕೊನೆಯ ಕ್ಷಣದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಅವರಿಗೆ ಹೇಳಲಾಗುತ್ತದೆ. ಜಗತ್ತಿನ ಅತ್ಯುತ್ತಮ ಶಿಕ್ಷಣ ವ್ಯವಸ್ಥೆಗಳಲ್ಲಿ ಒಂದೆಂದು ಹೆಸರುವಾಸಿಯಾಗಿದ್ದ ನಮ್ಮ ಶಿಕ್ಷಣ ವ್ಯವಸ್ಥೆಯು ಇಂದು ಭ್ರಷ್ಟಗೊಂಡಿದೆ ಎಂಬುದು ಎಲ್ಲರಿಗೂ ಸ್ಪಷ್ಟವಾಗಿದೆ. ಇದನ್ನು ನಾನು ಸುಮ್ಮನೆ ಹೇಳುತ್ತಿಲ್ಲ. ಹೊರಗೆ ಹೋರಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳೂ ಸುಮ್ಮನೆ ಹೇಳುತ್ತಿಲ್ಲ. ಇದಕ್ಕೆ ಸಾಕ್ಷಿ ಏನು? ನಮಗೆ ನಿಜವಾದ ಸಂಖ್ಯೆ ತಿಳಿದಿಲ್ಲದಿರುವುದರಿಂದ ಇದು ಕೇವಲ ಮೇಲ್ನೋಟದ ಸಾಕ್ಷಿಯಷ್ಟೇ. ಆದರೆ ಕಳೆದ ದಶಕದಲ್ಲಿ 152 ಪೇಪರ್ ಲೀಕ್ಗಳು ನಡೆದಿರುವುದು ನಮಗೆ ತಿಳಿದಿದೆ. ಅಂದರೆ ಸರಾಸರಿ ತಿಂಗಳಿಗೆ ಒಂದು ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದೆ” ಎಂದು ಅವರು ಟೀಕಿಸಿದ್ದಾರೆ.
#WATCH | Delhi: On being detained by police yesterday, Lok Sabha LoP and Congress MP Rahul Gandhi says, “It’s fine. I’m used to getting punched and all. It’s no problem. My job is to express the will of India’s people, whether it is the will of the students, whether it is the… pic.twitter.com/jDUaE7tWFb
— ANI (@ANI) July 22, 2026
ಭಾರತದಲ್ಲಿ ನೀಟ್ (NEET) ಆಕಾಂಕ್ಷಿಗಳ ವಾರ್ಷಿಕ ಕೋಚಿಂಗ್ ವೆಚ್ಚವನ್ನು 1.32 ಲಕ್ಷ ಕೋಟಿ ಎಂದು ಅಂದಾಜಿಸಿದ ರಾಹುಲ್ ಗಾಂಧಿ, ಇದು ದೇಶದ ವಾರ್ಷಿಕ ಶಿಕ್ಷಣ ಬಜೆಟ್ ಆದ 1.4 ಲಕ್ಷ ಕೋಟಿಗೆ ಬಹುತೇಕ ಸಮನಾಗಿದೆ ಎಂದು ಪ್ರತಿಪಾದಿಸಿದರು. “ಈ ಭ್ರಷ್ಟ ವ್ಯವಸ್ಥೆಯು ಬಡವರು ಮತ್ತು ಮಧ್ಯಮ ವರ್ಗದವರನ್ನು ಶಿಕ್ಷಣದಿಂದ ಹೊರಗಿಟ್ಟಿದೆ. ಈ ವ್ಯವಸ್ಥೆಯು ಕೇವಲ ಶ್ರೀಮಂತರಿಗೆ ಮಾತ್ರ ಸೀಮಿತವಾಗಿದೆ. ಇದರಲ್ಲಿ ಬಡವರಿಗೆ ಯಾವುದೇ ಜಾಗವಿಲ್ಲದಂತಾಗಿದೆ” ಎಂದು ರಾಹುಲ್ ಗಾಂಧಿ ಬೇಸರ ವ್ಯಕ್ತಪಡಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:37 pm, Wed, 22 July 26